Property Tax: ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮ: ಜಿಬಿಎ
ಬೆಂಗಳೂರು: ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸ್ವತ್ತುಗಳಿಂದ ಸ್ವೀಕರಿಸಲಾಗುವ ಆಸ್ತಿ ತೆರಿಗೆಯು ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹಾಗೂ ನಿರ್ವಹಿಸಲು ಬಳಸಲಾಗುತ್ತದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ-2025 ರ ಅಡಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಸ್ವತ್ತುಗಳ ಮಾಲೀಕರು ಪ್ರತಿ ಆರ್ಥಿಕ ಸಾಲಿನಲ್ಲಿ ಆಸ್ತಿ ತೆರಿಗೆ ಪಾವತಿಸಬೇಕು. ಆಸ್ತಿ ತೆರಿಗೆ ಪಾವತಿಸದ ಪ್ರಕರಣಗಳಲ್ಲಿ ವಸೂಲಿ ಮಾಡುವ ವಿಧಾನವನ್ನು ಆಸ್ತಿ ತೆರಿಗೆ ನಿರ್ಧರಣೆ, ವಸೂಲಾತಿ ಮತ್ತು ನಿರ್ವಹಣೆ ನಿಯಮಗಳು-2024 ರ ಅಡಿಯಲ್ಲಿ ಅಧಿಸೂಚಿಸಲಾಗಿದೆ. ಈ ಕಾಯ್ದೆ ಮತ್ತು ನಿಯಮಗಳ ಪ್ರಕಾರ ಆಸ್ತಿ ತೆರಿಗೆ ಸುಸ್ತಿದಾರರಿಗೆ ಕಾರಣ ಕೇಳಿ ಪತ್ರ ಹಾಗೂ ಬೇಡಿಕೆ ಪತ್ರಗಳನ್ನು ಜಾರಿಗೊಳಿಸಲಾಗಿದ್ದು, ಸುಸ್ತಿದಾರರ ವಿವರಗಳನ್ನು ಪಾಲಿಕೆಯ ಆಸ್ತಿ ತೆರಿಗೆ ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ (https://bbmptax.karnataka.gov.in ಅಂತರ್ಜಾಲದಲ್ಲಿ ವಿವರಗಳನ್ನು ವೀಕ್ಷಿಸಿ ತೆರಿಗೆ ಪಾವತಿಸಬಹುದು).

ಸಾಕಷ್ಟು ಅವಕಾಶಗಳನ್ನು ನೀಡಿದ ನಂತರವೂ ಬಾಕಿ ಉಳಿಸಿಕೊಂಡಿರುವ ಸ್ವತ್ತಿನ ಮಾಲೀಕರಿಗೆ ಮೊಬೈಲ್ ಸಂದೇಶಗಳ ಮೂಲಕ ಹಾಗೂ ಸ್ವತ್ತಿನ ಸ್ಥಳದಲ್ಲೇ ಪ್ರೊಕ್ಲಮೇಷನ್ ನೋಟಿಸ್ ಜಾರಿಮಾಡಿ ತೆರಿಗೆ ಪಾವತಿಸಲು ಸೂಚಿಸಲಾಗಿದೆ. ಇದಾದರೂ ಆಸ್ತಿ ತೆರಿಗೆ ಪಾವತಿಸದ ಸ್ವತ್ತುಗಳನ್ನು ಕಾಯ್ದೆ ಮತ್ತು ನಿಯಮಾನುಸಾರ ಹರಾಜು ಪ್ರಕ್ರಿಯೆಗೆ (Distress Sale) ಒಳಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ 17.02.2026, 21.02.2026 ಮತ್ತು 06.03.2026 ರಂದು ಹರಾಜು ಪ್ರಕ್ರಿಯೆ ನಡೆಸಲಾಗಿತ್ತು.
ಹರಾಜಿನಲ್ಲಿ ಮಾರಾಟವಾಗದೆ ಉಳಿದ ಒಟ್ಟು 55 ಸ್ವತ್ತುಗಳನ್ನು (ವಲಯ-1ರಲ್ಲಿ 46 ಮತ್ತು ವಲಯ-2 ರಲ್ಲಿ 9 ಸೇರಿ) ಸರ್ಕಾರದ ಮಾರ್ಗಸೂಚಿ ದರಕ್ಕೆ ನಗರ ಪಾಲಿಕೆ ಖರೀದಿಸಲು ಆದೇಶ ಹೊರಡಿಸಲಾಗಿದೆ. ಈ ಆದೇಶ ಜಾರಿಯಾದ ದಿನಾಂಕದಿಂದ 30 ದಿನಗಳೊಳಗಾಗಿ ಸುಸ್ತಿದಾರರು ಬಾಕಿ ಇರುವ ಸಂಪೂರ್ಣ ಮೊತ್ತವನ್ನು ಪಾವತಿಸಬೇಕು. ಇಲ್ಲವಾದಲ್ಲಿ, ಮಾರ್ಗಸೂಚಿ ದರಕ್ಕೆ ನಗರ ಪಾಲಿಕೆಯ ಆಯುಕ್ತರ ಹೆಸರಿಗೆ ಕ್ರಯಪತ್ರವನ್ನು ನೋಂದಾಯಿಸಲಾಗುತ್ತದೆ. ಬಾಕಿ ಇರುವ ಆಸ್ತಿ ತೆರಿಗೆ, ಉಪಕರ, ದಂಡ, ಬಡ್ಡಿ ಮತ್ತು ಆಡಳಿತ ವೆಚ್ಚಗಳನ್ನು ಕಡಿತಗೊಳಿಸಿದ ನಂತರ ಉಳಿದ ಮೊತ್ತವನ್ನು ಖಾತಾದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಸಂಬಂಧ ಯಾವುದೇ ಅಹವಾಲುಗಳಿದ್ದಲ್ಲಿ ಆಯಾ ವಲಯಗಳ ಜಂಟಿ ಆಯುಕ್ತರ ಕಚೇರಿಗೆ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಲಾಗಿದೆ ಎಂದು ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Swachh Survey: ಬೆಂಗಳೂರು ಸ್ವಚ್ಛ ಸರ್ವೇಕ್ಷಣ 2025-26: 38 ಉದ್ಯಾನವನ, 11 ಮೈದಾನಗಳ ಸ್ವಚ್ಛತೆ: ರಾಜೇಂದ್ರ ಚೋಳನ್ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications