ಬೆಂಗಳೂರಿನ 10 ಸಂಸ್ಥೆಯಿಂದ 231 ಕೋಟಿ ರು ವಸೂಲಿಗೆ ನೋಟಿಸ್
ಬೆಂಗಳೂರು, ಜೂನ್ 26: ಸ್ವಯಂಘೋಷಿತ ಆಸ್ತಿ ತೆರಿಗೆ (ಎಸ್ಎಎಸ್) ಘೋಷಣೆಯ ಸಂದರ್ಭದಲ್ಲಿ ಸುಳ್ಳು ಲೆಕ್ಕ ಕೊಟ್ಟು ತೆರಿಗೆ ವಂಚಿಸಲು ಯತ್ನಿಸಿದ್ದ 10 ಕಂಪನಿಗಳಿಂದ ಇನ್ನೂರಕ್ಕೂ ಅಧಿಕ ಕೋಟಿ ರು ಬಾಕಿ ವಸೂಲಿ ಮಾಡಲಾಗುತ್ತದೆ. ನಗರದ 10 ಪ್ರತಿಷ್ಠಿತ ಕಂಪನಿಗಳು ತಮ್ಮ ಕಟ್ಟಡದ ವಿಸ್ತೀರ್ಣದ ಲೆಕ್ಕ ತಪ್ಪಾಗಿ ಘೋಷಿಸಿಕೊಂಡಿದ್ದಕ್ಕೆ ದಂಡ ಹಾಗೂ ಬಡ್ಡಿ ಸಮೇತ ಬಾಕಿ ವಸೂಲಿ ಮಾಡಲು ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ ಶಿವರಾಜು ಹೇಳಿದ್ದಾರೆ.
ಇತ್ತೀಚೆಗೆ ಮಾನ್ಯತಾ ಟೆಕ್ ಪಾರ್ಕ್ ಮೇಲೆ ದಾಳಿ ನಡೆಸಿದ್ದ ಬಿಬಿಎಂಪಿ ಅಧಿಕಾರಿಗಳು, ಸಂಸ್ಥೆಯ ಆಡಳಿತ ಕಚೇರಿ ಬಂದ್ ಮಾಡಿ, ಆಸ್ತಿ ಜಪ್ತಿ ಮಾಡಿದ್ದನ್ನು ಸ್ಮರಿಸಬಹುದು.
10 ಕಂಪನಿಗಳಿಂದ ಒಟ್ಟು 231.66 ಕೋಟಿ ರು ವಸೂಲಿ ಮಾಡಲು ನೋಟಿಸ್ ನೀಡಲಾಗಿದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಥೆಮಾಟಿಕ್ಸ್ ಇನ್ಫೋಟೆಕ್ ಸಂಸ್ಥೆ ಹಾಗೂ ಅಲ್ಕಾನ್ ಸಂಸ್ಥೆಗಳ ಮೂಲಕ 10 ಕಟ್ಟಡಗಳ ಸಂಪೂರ್ಣ ಸಮೀಕ್ಷೆ ನಡೆಸಲಾಯಿತು. ವಾಸದ ಪ್ರಮಾಣಪತ್ರ (ಒ.ಸಿ.) ಪಡೆದ ದಿನದಿಂದ ಇಲ್ಲಿಯ ವರೆಗಿನ ವ್ಯತ್ಯಾಸದ ಮೊತ್ತ, ಬಡ್ಡಿಯನ್ನು ಮಾಲೀಕರಿಂದ ವಸೂಲಿ ಮಾಡುತ್ತೇವೆ' ಎಂದರು.
'ಕೆಎಂಸಿ ಕಾಯ್ದೆಯ ಸೆಕ್ಷನ್ 14, ನಿಯಮ 26 ಹಾಗೂ 27ರ ಪ್ರಕಾರ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಲಾಗುತ್ತಿದೆ. ಬಳಿಕ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಆಸ್ತಿ ತೆರಿಗೆ ಸಂಗ್ರಹ ಗುರಿ: ಶೇ 5ರಷ್ಟು ತೆರಿಗೆ ಪಾವತಿಯಲ್ಲಿ ರಿಯಾಯಿತಿ ಅವಧಿ ಜೂನ್ 30ಕ್ಕೆ ಮುಗಿಯಲಿದೆ. ಪ್ರಸಕ್ತ ಸಾಲಿನಲ್ಲಿ ಕಂದಾಯ ವಿಭಾಗದಿಂದ 2,300 ಕೋಟಿ ರು ಆಸ್ತಿ ತೆರಿಗೆ ಸೇರಿದಂತೆ 3,100 ಕೋಟಿ ರು ಆದಾಯ ಸಂಗ್ರಹಿಸುವ ಗುರಿ ಇದೆ.
ದಂಡ ತೆರಬೇಕಾಗಿರುವ ಪ್ರತಿಷ್ಠಿತ ಕಂಪನಿಗಳು (ಬಡ್ಡಿ ಹಾಗೂ ದಂಡ ಸೇರಿ ಕೋಟಿ ರು ಗಳಲ್ಲಿ)
* ಬಾಗಮನೆ ಟೆಕ್ ಪಾರ್ಕ್- 91.67
* ಚೆತನ್ಯ ಪ್ರಾಪರ್ಟೀಸ್ - 41.61
* ಜೆಇ ಇಂಡಿಯಾ- 37.32
* ಸಲಾರ್ ಪುರಿಯಾ- 18.06
* ಒರಿಯಾನ್ ಮಾಲ್ -15.38
* ನಿಟ್ಟೆ ಮೀನಾಕ್ಷಿ-13.91
*ಲೀಲಾ ಪ್ಯಾಲೇಸ್ - 5.66
* ಫೆಡರಲ್ ಮೊಗಲ್- 3.60
* ಅಸೆಂಚರ್- 2.40
* ಗೋಲ್ಡನ್ ಹಿಲ್ ಸ್ಕ್ವೇರ್ -2.05
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications