ಬೆಂಗಳೂರಿನ 10 ಸಂಸ್ಥೆಯಿಂದ 231 ಕೋಟಿ ರು ವಸೂಲಿಗೆ ನೋಟಿಸ್
ಬೆಂಗಳೂರು, ಜೂನ್ 26: ಸ್ವಯಂಘೋಷಿತ ಆಸ್ತಿ ತೆರಿಗೆ (ಎಸ್ಎಎಸ್) ಘೋಷಣೆಯ ಸಂದರ್ಭದಲ್ಲಿ ಸುಳ್ಳು ಲೆಕ್ಕ ಕೊಟ್ಟು ತೆರಿಗೆ ವಂಚಿಸಲು ಯತ್ನಿಸಿದ್ದ 10 ಕಂಪನಿಗಳಿಂದ ಇನ್ನೂರಕ್ಕೂ ಅಧಿಕ ಕೋಟಿ ರು ಬಾಕಿ ವಸೂಲಿ ಮಾಡಲಾಗುತ್ತದೆ. ನಗರದ 10 ಪ್ರತಿಷ್ಠಿತ ಕಂಪನಿಗಳು ತಮ್ಮ ಕಟ್ಟಡದ ವಿಸ್ತೀರ್ಣದ ಲೆಕ್ಕ ತಪ್ಪಾಗಿ ಘೋಷಿಸಿಕೊಂಡಿದ್ದಕ್ಕೆ ದಂಡ ಹಾಗೂ ಬಡ್ಡಿ ಸಮೇತ ಬಾಕಿ ವಸೂಲಿ ಮಾಡಲು ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ ಶಿವರಾಜು ಹೇಳಿದ್ದಾರೆ.
ಇತ್ತೀಚೆಗೆ ಮಾನ್ಯತಾ ಟೆಕ್ ಪಾರ್ಕ್ ಮೇಲೆ ದಾಳಿ ನಡೆಸಿದ್ದ ಬಿಬಿಎಂಪಿ ಅಧಿಕಾರಿಗಳು, ಸಂಸ್ಥೆಯ ಆಡಳಿತ ಕಚೇರಿ ಬಂದ್ ಮಾಡಿ, ಆಸ್ತಿ ಜಪ್ತಿ ಮಾಡಿದ್ದನ್ನು ಸ್ಮರಿಸಬಹುದು.
10 ಕಂಪನಿಗಳಿಂದ ಒಟ್ಟು 231.66 ಕೋಟಿ ರು ವಸೂಲಿ ಮಾಡಲು ನೋಟಿಸ್ ನೀಡಲಾಗಿದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಥೆಮಾಟಿಕ್ಸ್ ಇನ್ಫೋಟೆಕ್ ಸಂಸ್ಥೆ ಹಾಗೂ ಅಲ್ಕಾನ್ ಸಂಸ್ಥೆಗಳ ಮೂಲಕ 10 ಕಟ್ಟಡಗಳ ಸಂಪೂರ್ಣ ಸಮೀಕ್ಷೆ ನಡೆಸಲಾಯಿತು. ವಾಸದ ಪ್ರಮಾಣಪತ್ರ (ಒ.ಸಿ.) ಪಡೆದ ದಿನದಿಂದ ಇಲ್ಲಿಯ ವರೆಗಿನ ವ್ಯತ್ಯಾಸದ ಮೊತ್ತ, ಬಡ್ಡಿಯನ್ನು ಮಾಲೀಕರಿಂದ ವಸೂಲಿ ಮಾಡುತ್ತೇವೆ' ಎಂದರು.
'ಕೆಎಂಸಿ ಕಾಯ್ದೆಯ ಸೆಕ್ಷನ್ 14, ನಿಯಮ 26 ಹಾಗೂ 27ರ ಪ್ರಕಾರ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಲಾಗುತ್ತಿದೆ. ಬಳಿಕ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಆಸ್ತಿ ತೆರಿಗೆ ಸಂಗ್ರಹ ಗುರಿ: ಶೇ 5ರಷ್ಟು ತೆರಿಗೆ ಪಾವತಿಯಲ್ಲಿ ರಿಯಾಯಿತಿ ಅವಧಿ ಜೂನ್ 30ಕ್ಕೆ ಮುಗಿಯಲಿದೆ. ಪ್ರಸಕ್ತ ಸಾಲಿನಲ್ಲಿ ಕಂದಾಯ ವಿಭಾಗದಿಂದ 2,300 ಕೋಟಿ ರು ಆಸ್ತಿ ತೆರಿಗೆ ಸೇರಿದಂತೆ 3,100 ಕೋಟಿ ರು ಆದಾಯ ಸಂಗ್ರಹಿಸುವ ಗುರಿ ಇದೆ.
ದಂಡ ತೆರಬೇಕಾಗಿರುವ ಪ್ರತಿಷ್ಠಿತ ಕಂಪನಿಗಳು (ಬಡ್ಡಿ ಹಾಗೂ ದಂಡ ಸೇರಿ ಕೋಟಿ ರು ಗಳಲ್ಲಿ)
* ಬಾಗಮನೆ ಟೆಕ್ ಪಾರ್ಕ್- 91.67
* ಚೆತನ್ಯ ಪ್ರಾಪರ್ಟೀಸ್ - 41.61
* ಜೆಇ ಇಂಡಿಯಾ- 37.32
* ಸಲಾರ್ ಪುರಿಯಾ- 18.06
* ಒರಿಯಾನ್ ಮಾಲ್ -15.38
* ನಿಟ್ಟೆ ಮೀನಾಕ್ಷಿ-13.91
*ಲೀಲಾ ಪ್ಯಾಲೇಸ್ - 5.66
* ಫೆಡರಲ್ ಮೊಗಲ್- 3.60
* ಅಸೆಂಚರ್- 2.40
* ಗೋಲ್ಡನ್ ಹಿಲ್ ಸ್ಕ್ವೇರ್ -2.05
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications