ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಮತ್ತೆ ಗದ್ದಲ, ಕೋಲಾಹಲ
ಬೆಂಗಳೂರು, ಮೇ 12: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಮತ್ತೆ ಕೋಲಾಹಲವೆದ್ದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಗದ್ದಲ ನಡೆಯುತ್ತಿದ್ದು, ಆಸ್ತಿ ತೆರಿಗೆ ಹೆಚ್ಚಳದ ಹಗ್ಗ ಜಗ್ಗಾಟ ಗುರುವಾರವೂ ಮುಂದುವರೆದಿದೆ.
ಗುರುವಾರ ಕೌನ್ಸಿಲ್ ಸಭೆಯಲ್ಲಿ ಬಿಜೆಪಿ ಸದಸ್ಯರು ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ಪ್ರತಿಭಟನೆ ನಡೆಸಿದರು. ಇದರಿಂದ ಸಭೆಯಲ್ಲಿ ಗದ್ದಲ ಆರಂಭವಾಯಿತು. ಮೇಯರ್ ಬಿ.ಎಸ್.ಮಂಜುನಾಥ ರೆಡ್ಡಿ ಅವರ ವಿರುದ್ಧ ಬಿಜೆಪಿ ಸದಸ್ಯರು ಘೋಷಣೆಗಳನ್ನು ಕೂಗಿದರು. [ತಳ್ಳಾಟ-ನೂಕಾಟ: ರಣಾಂಗಣವಾದ ಬಿಬಿಎಂಪಿ ಕೌನ್ಸಿಲ್ ಸಭೆ]

ಇದರಿಂದ ಅಸಮಾಧಾನಗೊಂಡ ಕಾಂಗ್ರೆಸ್ ಸದಸ್ಯರು ಬಿಜೆಪಿಯವರ ಜೊತೆ ಮಾತಿನ ಚಕಮಕಿ ನಡೆಸಿದರು. ಇದರಿಂದಾಗಿ ಕೌನ್ಸಿಲ್ ಸಭೆಯಲ್ಲಿ ಕೋಲಾಹಲ ಉಂಟಾಯಿತು. ಬಿಜೆಪಿ ಸದಸ್ಯರು ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ವಾಕ್ಸಮರ ಮುಂದುವರೆದಿದೆ. [ಆಸ್ತಿ ತೆರಿಗೆ ಹೆಚ್ಚಳ, ಬೆಂಗಳೂರಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ]
ಆಸ್ತಿ ತೆರಿಗೆ ಹೆಚ್ಚಳ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಿದ್ದು, ಷರಿಷ್ಕೃತ ತೆರಿಗೆ ಏಪ್ರಿಲ್ 1ರಿಂದ ಜಾರಿಗೆ ಬಂದಿದೆ. ವಸತಿ ಪ್ರದೇಶಗಳಿಗೆ ಶೇ 20 ಮತ್ತು ವಸತಿಯೇತರ ಪ್ರದೇಶಗಳಿಗೆ ಶೇ 25ರಷ್ಟು ತೆರಿಗೆ ಹೆಚ್ಚಳ ಮಾಡಲಾಗಿದೆ. [ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿ : ಲೇಟೆಸ್ಟ್ ಸುದ್ದಿ ಏನಿದೆ?]
ಅಮಾನತು ರದ್ದು : ಮೇ ಮೊದಲ ವಾರವೂ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಕೌನ್ಸಿಲ್ ಸಭೆಯಲ್ಲಿ ಗದ್ದಲ ನಡೆದಿತ್ತು. ಈ ಸಮಯದಲ್ಲಿ ಕೌನ್ಸಿಲ್ ಕಲಾಪಕ್ಕೆ ಅಡ್ಡಿ ಪಡಿಸಿದ್ದ ವಿರೋಧ ಪಕ್ಷದ ಪದ್ಮನಾಭ ರೆಡ್ಡಿ, ಉಮೇಶ್ ಶೆಟ್ಟಿ, ಎಂ. ನಾಗರಾಜು, ರಮೇಶ್ ಕುಮಾರ್ ಸೇರಿದಂತೆ ನಾಲ್ವರು ಸದಸ್ಯರನ್ನು ಒಂದು ತಿಂಗಳ ಕಾಲ ಮೇಯರ್ ಅಮಾನತುಗೊಳಿಸಿದ್ದರು. ಇಂದು ಅಮಾನತು ಆದೇಶವನ್ನು ಮೇಯರ್ ವಾಪಸ್ ಪಡೆದರು.
ಆಹೋರಾತ್ರಿ ಧರಣಿ : ಬಿಬಿಎಂಪಿ ಆಸ್ತಿ ತೆರಿಗೆ ಪರಿಷ್ಕರಣೆಯನ್ನು ಕೈಬಿಡಬೇಕು, ಆನ್ಲೈನ್ ವ್ಯವಸ್ಥೆಯಲ್ಲಿ ದೋಷಗಳನ್ನು ಪರಿಹರಿಸಬೇಕು, ಶೇ 5ರಷ್ಟು ರಿಯಾಯಿತಿ ಅವಧಿಯನ್ನು ಜೂನ್ 30ರ ತನಕ ವಿಸ್ತರಣೆ ಮಾಡುಬೇಕು ಎಂದು ಒತ್ತಾಯಿಸಿ ಕಳೆದ ವಾರ ಬಿಜೆಪಿ ಬಿಬಿಎಂಪಿ ಸಭಾಂಗಣದಲ್ಲಿ ಆಹೋರಾತ್ರಿ ಧರಣಿ ನಡೆಸಿತ್ತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications