Property Tax: ತೆರಿಗೆ ಕಟ್ಟದ ಸ್ವತ್ತುಗಳ ಹರಾಜಿಗೆ ಜಿಬಿಎ ಸಜ್ಜು, 101 ಆಸ್ತಿಗಳ ಮಾಲೀಕರೇ ಗಮನಿಸಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2025 ರ ಅಡಿಯಲ್ಲಿ ಜಿಬಿಎ ವ್ಯಾಪ್ತಿಯಲ್ಲಿನ ಎಲ್ಲಾ ಸ್ವತ್ತುಗಳು ಆಸ್ತಿ ತೆರಿಗೆ ಪಾವತಿಸಬೇಕು. ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದ 30 ಮಾಲೀಕರ ಸ್ವತ್ತು, ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ 71 ಸ್ವತ್ತುಗಳ ವಿರುದ್ಧ ಪಾಲಿಕೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಒಟ್ಟು ಸುಮಾರು 30 ಸ್ವತ್ತುಗಳ ಆಸ್ತಿಗಳ ಹರಾಜಿಗೆ ಮುಂದಾಗಿದೆ. ಅದರ ವಿವರ ಮುಂದಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಸರ್ಕಾರದ ಆದೇಶದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನಾಗಿ ಮಾಡಿದ್ದು, ಆ ಪ್ರಾಧಿಕಾರದ ಅಡಿಯಲ್ಲಿ ಐದು ಪ್ರತ್ಯೇಕ ಬೆಂಗಳೂರು ನಗರ ಪಾಲಿಕೆಗಳನ್ನಾಗಿ ರಚಿಸಲಾಗಿದೆ. ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಗ್ರಹಿಸಲಾದ ಆಸ್ತಿ ತೆರಿಗೆಯನ್ನು ಅಗತ್ಯ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಥವಾ ನಿರ್ವಹಿಸಲು ಉಪಯೋಗಿಸಲಾಗುತ್ತದೆ. ಹೀಗಾಗಿ ತಪ್ಪದೇ ಪ್ರತಿ ಆರ್ಥಿಕ ಸಾಲಿನಲ್ಲಿ ಆಸ್ತಿತೆರಿಗೆ ಪಾವತಿಸುವುದು ಕಡ್ಡಾಯವಾಗಿದೆ.

ಹೀಗೆ ಕಟ್ಟುನಿಟ್ಟಿನ ಸೂಚನೆಗಳು ಇದ್ದರೂ ಸಹಿತ ಆಸ್ತಿ ತೆರಿಗೆ ಪಾವತಿಸದ ಪ್ರಕರಣಗಳ ವಿರುದ್ಧ ಪಾಲಿಕೆ ಅಧಿಕಾರಿಗಳು ಶಿಸ್ತು ಕ್ರಮಕ್ಕೆ ಮುಂದಾಗಿದೆ. ಆಸ್ತಿ ತೆರಿಗೆ ವಸೂಲಿ ಮಾಡುವ ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಿದೆ. ಆಸ್ತಿ ತೆರಿಗೆ ನಿರ್ಧರಣೆ, ವಸೂಲಾತಿ ಮತ್ತು ನಿರ್ವಹಣೆ ನಿಯಮಗಳು 2024 ರ ಅಡಿಯಲ್ಲಿ ತೆರಿಗೆ ಸಂಗ್ರಹ ಮಾಡಲಾಗುತ್ತಿದೆ. ಅದರ ಭಾಗವಾಗಿ ಹರಾಜು ಹಾಕಲು ಮುಂದಾಗಿದೆ.
ಆಸ್ತಿ ಮಾಲೀಕರಿಗೆ ಪಾಲಿಕೆ ಸೂಚನೆ
ಸದರಿ ಕಾಯ್ದೆ ಹಾಗೂ ನಿಯಮಗಳಲ್ಲಿ ತಿಳಿಸಿರುವಂತೆ ಆಸ್ತಿ ತೆರಿಗೆ ಸುಸ್ತಿದಾರರಿಗೆ ಕಾರಣ ಕೇಳಿ ಪತ್ರ, ಆಸ್ತಿತೆರಿಗೆ ಬೇಡಿಕೆ ಪತ್ರಜಾರಿ ಮಾಡಲಾಗಿದ್ದು, ಸಾಕಷ್ಟು ಕಾಲಾವಕಾಶವನ್ನು ನೀಡಲಾದ ನಂತರದಲ್ಲೂ ಬೇಬಾಕಿ ಉಳಿಸಿಕೊಂಡ ಪ್ರಕರಣಗಳ ಮಾಲೀಕರಿಗೆ ನಿಯತಕಾಲಿಕವಾಗಿ ಮೊಬೈಲ್ ಸಂದೇಶಗಳ ಮೂಲಕ ತಮ್ಮ ಸ್ವತ್ತಿನ ಆಸ್ತಿತೆರಿಗೆಯನ್ನು ಪಾವತಿಸಲು ತಿಳಿಸಲಾಗಿರುತ್ತದೆ.
ಪಾಲಿಕೆ ವ್ಯಾಪ್ತಿಯ ಸದರಿ 30 ಸ್ವತ್ತುಗಳಿಗೆ ತೆರಿಗೆ ಪಾವತಿಸಲು ಹಲವು ಅವಕಾಶಗಳನ್ನು ನೀಡಲಾಗಿತ್ತು. ಆದರೂ ಆಸ್ತಿ ತೆರಿಗೆಯನ್ನು ಪಾವತಿಸದ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿನ ಒಟ್ಟು 30 ಸ್ವತ್ತುಗಳನ್ನು ಕಾಯ್ದೆ ಹಾಗೂ ನಿಯಮಗಳನ್ನಯ ಹರಾಜು ಪ್ರಕ್ರಿಯೆಗೆ (Distress Sale) ಒಳಪಡಿಸಲು ತೀರ್ಮಾನಿಸಲಾಗಿದೆ.
ಫೆಬ್ರವರಿ 21ರಂದು ಹರಾಜು ಪ್ರಕ್ರಿಯೆ, ಎಲ್ಲಿ?
ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತರ ಅಧ್ಯಕ್ಷತೆಯಲ್ಲಿ ಇದೇ ಫೆಬ್ರವರಿ 21, 2026 ರಂದು ಬೊಮ್ಮನಹಳ್ಳಿ ವಲಯ ಕಛೇರಿ, 1ನೇ ಮಹಡಿ, ಬೇಗೂರು ಮುಖ್ಯರಸ್ತೆ, ಬೊಮ್ಮನಹಳ್ಳಿ ಹಾಗೂ ಪಶ್ಚಿಮ ನಗರ ಪಾಲಿಕೆಯ ಹರಾಜು ಪ್ರಕ್ರಿಯೆ 'ಜಂಟಿ ಆಯುಕ್ತರ ಕಾರ್ಯಾಲಯ, ಮಲ್ಲೇಶ್ವರಂ ವಲಯ-2, 145, 26ನೇ ಅಡ್ಡ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು ಇಲ್ಲಿನ ಸಭಾಂಗಣದಲ್ಲಿ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಅಂದು ಆಸ್ತಿತೆರಿಗೆ ಸುಸ್ತಿದಾರರೆಂದು ಗುರುತಿಸಲಾಗಿರುವ ಸ್ವತ್ತುಗಳಿಂದ ಹರಾಜಿನ ಮೂಲಕ ಬೇಬಾಕಿ ಆಸ್ತಿತರಿಗೆ ವಸೂಲಾತಿ ಮಾಡಲಾಗುವುದು.
ಯಾವ ಸತ್ತುಗಳು ಹರಾಜು ಪ್ರಕ್ರಿಯೆಗಳಿಗೆ ಒಳಪಡುತ್ತವೆ. ಕಟ್ಟಡಗಳ ಮಾಹಿತಿಯನ್ನು ವಲಯ ಜಂಟಿ ಆಯುಕ್ತರು (ಬೊಮ್ಮನಹಳ್ಳಿ ವಲಯ) ಕಛೇರಿಯ ಸೂಚನಾ ಫಲಕದಲ್ಲಿ ನೀಡಲಾಗಿದೆ. ಹರಾಜು ಪ್ರಕ್ರಿಯೆಯ ಮುನ್ನ ಪಟ್ಟಿಯಲ್ಲಿನ ಸ್ವತ್ತಿಗೆ ಸಂಪೂರ್ಣ ಆಸ್ತಿತೆರಿಗೆ ಪಾವತಿಸಿದಲ್ಲಿ ಅಂಥಹವರ ಸತ್ತುಗಳ ಹರಾಜಿನಿಂದ ಕೈಬಿಡಲಾಗುತ್ತದೆ ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ವಿವರಕ್ಕಾಗಿ ಸಂಪರ್ಕಿಸಿ
ಸಂಬಂಧಿತ ಕಾಯ್ದೆ ಹಾಗೂ ನಿಯಮಗಳಂತೆ, ಆಸ್ತಿ ತೆರಿಗೆ ಸುಸ್ತಿದಾರರಿಗೆ ಕಾರಣ ಕೇಳುವ ನೋಟಿಸ್ ಹಾಗೂ ಬೇಡಿಕೆ ಪತ್ರಗಳನ್ನು ಜಾರಿಗೊಳಿಸಲಾಗಿದೆ. ಸುಸ್ತಿದಾರರ ವಿವರಗಳನ್ನು ಪಾಲಿಕೆಯ ಅಧಿಕೃತ ಜಾಲತಾಣ https://bbmp.gov.in, ನಲ್ಲಿ ವೀಕ್ಷಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications