ಮನೆಯಲ್ಲಿ ವೇಶ್ಯಾವಾಟಿಕೆ: ಮೂವರು ಆರೋಪಿಗಳು ಅಂದರ್
ಬೆಂಗಳೂರು, ಸೆ 28: ಮನೆಯಲ್ಲಿ ಹುಡುಗಿಯರನ್ನು ಇಟ್ಟುಕೊಂಡು, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ನಗರದ ತ್ಯಾಗರಾಜ ನಗರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದ ತ್ಯಾಗರಾಜನಗರ ಪೊಲೀಸ್ ಠಾಣಾ ಸರಹದ್ದಿನ 2ನೇ ಮೈನ್, 2ನೇ ಕ್ರಾಸ್, ಸಿ.ಟಿ ಬೆಡ್ ಪ್ರದೇಶದ ಮನೆಯೊಂದರಲ್ಲಿ ಈ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಹಣ ಮತ್ತು ಮೊಬೈಲ್ ಫೋನ್ ಸಮೇತ ಪೊಲೀಸರು ಬಂಧಿಸಿದ್ದಾರೆ. (ಹೋಂ ಸ್ಟೇನಲ್ಲಿ ವೇಶ್ಯಾವಾಟಿಕೆ, ಶಾಸಕರ ಪುತ್ರನಿಗೆ ಜಾಮೀನು)

ಬಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಕೇಂದ್ರ ಅಪರಾಧ ವಿಭಾಗದ (ಸಿ.ಸಿ.ಬಿ ಮಹಿಳೆ ಮತ್ತು ಮಾದಕದ್ರವ್ಯ ದಳ) ಪೊಲೀಸರು ಸೆ 27ರಂದು ಕಾರ್ಯಾಚರಣೆ ನಡೆಸಿ, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ
ಸುಮಾ ಗೋವಿಂದರಾಜು (35 ವರ್ಷ), ವಿಶ್ವರಾಜ್ (62 ವರ್ಷ) ಮತ್ತು ಪೂರ್ಣಚಂದ್ರ (48 ವರ್ಷ) ಎನ್ನುವವರನ್ನು ಬಂಧಿಸಿದ್ದಾರೆ.
ನೊಂದ ಇಬ್ಬರು ಮಹಿಳೆಯರನ್ನು ವೇಶ್ಯಾವಾಟಿಕೆಯಿಂದ ಪೊಲೀಸರು ರಕ್ಷಣೆ ಮಾಡಿದ್ದಾರೆ. ದಾಳಿಯ ಸಮಯದಲ್ಲಿ ಆರೋಪಿಗಳಿಂದ ಹದಿನಾರು ಸಾವಿರ ರೂಪಾಯಿ ನಗದು ಮತ್ತು ನಾಲ್ಕು ಮೊಬೈಲ್ ಫೋನ್ಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಆರೋಪಿಗಳ ವಿರುದ್ಧ ತ್ಯಾಗರಾಜನಗರ ಪೊಲೀಸ್ ಠಾಣೆಯಲ್ಲಿ ಮೊ.ಸಂ.114/2016, ಕಲಂ-3, 4, 5 & 7 ಐಟಿಪಿ ಆಕ್ಟ್ ಮತ್ತು 370 ಐಪಿಸಿ ರೀತ್ಯ ಪ್ರಕರಣವನ್ನು ದಾಖಲಿಸಲಾಗಿರುತ್ತದೆ.
ಈ ಕಾರ್ಯಚರಣೆಯನ್ನು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ಕೇಂದ್ರ ಅಪರಾಧ ವಿಭಾಗ (ಸಿ.ಸಿ.ಬಿ. ಮಹಿಳೆ ಮತ್ತು ಮಾದಕದ್ರವ್ಯ ದಳ) ದ ಪೊಲೀಸರು ಜಂಟಿಯಾಗಿ ಕೈಗೊಂಡಿದ್ದರು.
-
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications