ಲೋಕಾಯುಕ್ತರಾಗಿ ಶೆಟ್ಟಿ ನೇಮಕ ವಿರೋಧಿಸಿ ಜ.27ಕ್ಕೆ ಪ್ರತಿಭಟನೆ
ಬೆಂಗಳೂರು, ಜನವರಿ 27: ಲೋಕಾಯುಕ್ತ ನೇಮಕಾತಿ ವಿಚಾರ ರಾಜ್ಯ ಸರಕಾರಕ್ಕೆ ಸವಾಲಿನದಾಗಿದೆ. ಈ ಸಂಬಂಧ ರಾಜ್ಯಪಾಲರಿಗೆ ಕಳುಹಿಸಿದ್ದ ಕಡತ ಸಹ ಒಮ್ಮೆ ಅವರು ಹಿಂತಿರುಗಿಸಿದ್ದರು. ಇದೀಗ ಲೋಕಾಯುಕ್ತರಾಗಿ ನ್ಯಾ.ವಿಶ್ವನಾಥ ಶೆಟ್ಟಿ ಅವರ ನೇಮಕ ವಿರೋಧಿಸಿ ಜನವರಿ 27ರಂದು ಸಂಜೆ 4ಕ್ಕೆ ಬೆಂಗಳೂರಿನ ಮೌರ್ಯ ವೃತ್ತದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಹೈಕೋರ್ಟಿನ ನ್ಯಾಯಮೂರ್ತಿಯಾಗಿ ನಿವೃತ್ತರಾದ ನಂತರ ರಾಜ್ಯದ ಹಲವು ಭ್ರಷ್ಟ ಮತ್ತು ಕಳಂಕಿತ ರಾಜಕಾರಣಿಗಳ ವಕೀಲರಾಗಿದ್ದ, ನ್ಯಾಯಾಂಗ ನೌಕರರ ಬಡಾವಣೆಯ ಸೈಟಿನ ವಿಚಾರದಲ್ಲಿ ಅಕ್ರಮ ಫಲಾನುಭವಿ ಎಂಬ ಆರೋಪಕ್ಕೆ ಗುರಿಯಾಗಿರುವ ಜಸ್ಟಿಸ್ ಪಿ. ವಿಶ್ವನಾಥ್ ಶೆಟ್ಟರನ್ನು ಲೋಕಾಯುಕ್ತರನ್ನಾಗಿ ನೇಮಿಸಿರುವುದರ ಔಚಿತ್ಯ ಮತ್ತು ಅನೈತಿಕತೆಯನ್ನು ವಿರೋಧಿಸಿ 'ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ' ಪ್ರತಿಭಟನೆ ನಡೆಸಲಿದೆ.[ವಿಶ್ವನಾಥ್ ಶೆಟ್ಟಿ ನೇಮಕದ ವಿರುದ್ಧ ಸುಪ್ರಿಂಗೆ ಹೋಗಲೂ ಸಿದ್ದ-ಹಿರೇಮಠ್]

ವಿಶ್ವನಾಥ ಶೆಟ್ಟಿ ಅವರ ನೇಮಕಾತಿಯಿಂದ ಲೋಕಾಯುಕ್ತದ ಘನತೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯೇ ಹೊರತು ಬೇರೇನಿಲ್ಲ. ಈ ಹಿನ್ನೆಲೆಯಲ್ಲಿ ನೇಮಕಾತಿ ಸರಿಯಲ್ಲ ಎನ್ನುವ ಅಭಿಪ್ರಾಯ ಇರುವ ಎಲ್ಲ ಪ್ರಜ್ಞಾವಂತ ಜನತೆ ಇಂದಿನ ಪ್ರತಿಭಟನೆಯಲ್ಲಿ ಭಾಗವಹಿಸಲು ಮನವಿ ಮಾಡುತ್ತೇವೆ ಎಂದು ಸಂಘಟನೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD









Click it and Unblock the Notifications