ಡಿಕೆಶಿ ಬಂಧನ ವಿರೋಧಿಸಿ ನಾಳೆ (ಸೆ 11) ಭಾರೀ ಪ್ರತಿಭಟನೆ: ಪೊಲೀಸರು ಹೊರಡಿಸಿದ 15 ಕಟ್ಟಾಜ್ಞೆ
ಬೆಂಗಳೂರು, ಸೆ 10: ಹಿರಿಯ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಯಲದ ಅಧಿಕಾರಿಗಳು ಬಂಧಿಸಿರುವುದನ್ನು ಪ್ರತಿಭಟಿಸಿ, ವಿವಿಧ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು, ಬುಧವಾರ (ಸೆ 11) ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದ್ದಾರೆ.
ಈ ಸಂಬಂಧ, ಬೆಂಗಳೂರು ಪೊಲೀಸರು, ಪ್ರತಿಭಟನಾಕಾರರಿಗೆ, ಮೆರವಣಿಗೆಯ ವೇಳೆ, ಶಾಂತಿ ಕಾಪಾಡುವಂತೆ ಸೂಚಿಸಿದ್ದು, ಅಹಿತಕರ ಘಟನೆ ನಡೆದಲ್ಲಿ, " ಅರ್ಜಿದಾರರೇ ಹೊಣೆಗಾರರು " ಎನ್ನುವ ಸ್ಪಷ್ಟ ಎಚ್ಚರಿಕೆಯನ್ನು ನೀಡಿದ್ದಾರೆ. ಪೊಲೀಸರು ನೀಡಿದ ಹದಿನೈದು ಸೂಚನೆ ಹೀಗಿದೆ:
1. ಸಂಘಟಕರು ಅನುಮತಿ ನೀಡಲಾದ ವೇಳೆಗೆ ಹಾಗೂ ನಿಗದಿಪಡಿಸಿದ ಮಾರ್ಗಕ್ಕೆ ಬದ್ಧರಾಗಿರತಕ್ಕದ್ದು.
2. ಯಾವುದೇ ಕಾರಣಕ್ಕೂ ಸಾರ್ವಜನಿಕರ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ನೋಡಿಕೊಳ್ಳಬೇಕು.

ಕೆರಳಿಸುವ ಘೋಷಣೆ ಅಥವಾ ಪ್ರಚೋದನಾಕಾರಿ ಹೇಳಿಕೆ
3. ಕಾರ್ಯಕ್ರಮದ ಸಮಯದಲ್ಲಿ ಯಾವುದೇ ಧಾರ್ಮಿಕ, ರಾಜಕೀಯ, ಸಾಮಾಜಿಕ, ಭಾಷಾವಾರು ಅಥವಾ ಸಾಂಸ್ಕೃತಿಕ ಗುಂಪುಗಳನ್ನು ಕೆರಳಿಸುವ ಘೋಷಣೆ ಅಥವಾ ಪ್ರಚೋದನಾಕಾರಿ ಹೇಳಿಕೆ ಇತ್ಯಾದಿಗಳನ್ನು ನೀಡಬಾರದು.
4. ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ-36 ಮತ್ತು 37 ರಲ್ಲಿ ಹೇಳಿರುವ ಅಂಶಗಳನ್ನು ಉಲ್ಲಂಘಿಸಬಾರದು.
5. ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುವಾಗ ಆ ಸ್ಥಳದಿಂದ ಹೊರಹೊಮ್ಮುವ ಧ್ವನಿಯು ಆ ಜಾಗದ ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ನಿಗದಿಪಡಿಸಿದ ಶಬ್ದ ಮಟ್ಟಕ್ಕಿಂತ ಕೇವಲ 10 ಡಿಬಿ(ಎ) ನಷ್ಟು ಹೆಚ್ಚು ಅಥವಾ ಒಟ್ಟಾರೆಯಾಗಿ 75 ಡಿಬಿ(ಎ) ಇದರಲ್ಲಿ ಯಾವುದು ಕಡಿಮೆಯೋ ಅದನ್ನು ಮೀರಬಾರದು.

ಅರ್ಜಿದಾರರೇ ಸಂಪೂರ್ಣ ಹೊಣೆಗಾರರಾಗುತ್ತಾರೆ
6. ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಅರ್ಜಿದಾರರೇ ಸಂಪೂರ್ಣ ಹೊಣೆಗಾರರಾಗುತ್ತಾರೆ.
7. ಸಂಘಟಕರು ಕಾರ್ಯಕ್ರಮವನ್ನು ಸುವ್ಯವಸ್ಥೆ ರೀತಿಯಲ್ಲಿ ನಡೆಸಿಕೊಂಡು ಹೋಗುವುದು ಹಾಗೂ ಜವಾಬ್ದಾರಿಯುತ ಸದಸ್ಯರು ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಿ, ಯಾವುದೇ ಅವಗಢ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು.
8. ಕಾರ್ಯಕ್ರಮವನ್ನು ಅನುಮತಿ ನೀಡಿರುವ ಸ್ಥಳದಲ್ಲಿ ನಡೆಸಬೇಕು. ರಸ್ತೆಗಿಳಿದು ರಸ್ತೆ ಬಂದ್ ಮತ್ತು ವಾಹನಗಳ ಸಂಚಾರಕ್ಕೆ ಅಡಚಣೆ ಮಾಡಬಾರದು.

ವಸ್ತುಗಳನ್ನು ಸುಟ್ಟುಹಾಕುವುದನ್ನು ಮಾಡಬಾರದು
9. ಕಾರ್ಯಕ್ರಮದ ಸಮಯದಲ್ಲಿ ಪಟಾಕಿ ಹಚ್ಚುವುದು, ಯಾವುದೇ ವಸ್ತುಗಳನ್ನು ಸುಟ್ಟುಹಾಕುವುದನ್ನು ಮಾಡಬಾರದು.
10. ಸ್ಥಳದಲ್ಲಿ ಕರ್ತವ್ಯ ನಿರತ ಪೊಲೀಸರು ಹಾಗೂ ಸಂಚಾರ ಪೊಲೀಸರು ಸಾರ್ವಜನಿಕರ ಹಿತದೃಷ್ಟಿ ಹಾಗೂ ವಾಹನ ಸಂಚಾರ ಮತ್ತು ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ನೀಡುವ ಸೂಚನೆಗಳನ್ನು ಪಾಲಿಸತಕ್ಕದ್ದು.
11. ಕಾರ್ಯಕ್ರಮದ ಸಮಯದಲ್ಲಿ ಗಲಭೆಯಲ್ಲಿ ತೊಡಗಿ ಸಾರ್ವಜನಿಕರ ಆಸ್ತಿಪಾಸ್ತಿ, ಜೀವ ಹಾನಿ ಮಾಡಬಾರದು, ಮಾಡಿದವರ ಮೇಲೆ Prevention of Damage to Public Property Act 1984, (u/s 3) Karnataka Prevention of Destruction & Loss of Property Act 1981 {u/s 2(A) ಕಾನೂನು ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು.

ನಿಬಂಧನೆಗಳು ಅಥವಾ ಲೈಸೆನ್ಸ್
12. ಕಾರ್ಯಕ್ರಮವನ್ನು ಶಾಂತಿಯುತವಾಗಿ ನಡೆಸತಕ್ಕದ್ದು.
13. ಈ ಆದೇಶದ ಯಾವುದೇ ನಿಬಂಧನೆಗಳು ಅಥವಾ ಲೈಸೆನ್ಸ್ ಗಳಲ್ಲಿ ನಮೂದಿಸಿರುವ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಅನುಮತಿಯನ್ನು ರುದ್ದುಪಡಿಸಲಾಗುವುದು ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ. 103 ಇತರೆ ಸಂಬಂಧಪಟ್ಟ ಕಾನೂನು ಅಡಿಯಲ್ಲಿ ಸಂಘಟಕರನ್ನು ಅಭಿಯೋಗಗೊಳಿಸಲಾಗುವುದು.

ಯಾವುದೇ ಆಯುಧಗಳನ್ನು ತರುವಂತಿಲ್ಲ
14. ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಆಯುಧಗಳನ್ನು ತರುವಂತಿಲ್ಲ.
15. ಪ್ರತಿಭಟನಾಕಾರರು ಬಲವಂತವಾಗಿ ಯಾವುದೇ ಅಂಗಡಿ ಮುಂಗಟ್ಟುಗಳನ್ನು, ಸಂಸ್ಥೆಗಳನ್ನು ಮುಚ್ಚಿಸುವಂತಿಲ್ಲ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications