ಸ್ಟೀಲ್ ಬ್ರಿಡ್ಜ್ ವಿರುದ್ಧ ಪ್ರತಿಭಟನೆ: ಎಎಪಿ ಮುಖಂಡರಿಗೆ ಸಮನ್ಸ್!
ಬೆಂಗಳೂರು, ನ.06: ಶಿವಾನಂದ ವೃತ್ತ ಸಮೀಪದ ಸ್ಟೀಲ್ ಬ್ರಿಡ್ಜ್ ಕಾಮಗಾರಿಯಲ್ಲಿ ಕಂಡುಬಂದ ಅನೇಕ ಲೋಕದೋಷಗಳ ವಿರುದ್ಧ ಪ್ರತಿಭಟನೆ ನಡೆಸಿದ್ದ ಆಮ್ ಆದ್ಮಿ ಪಾರ್ಟಿ ಮುಖಂಡರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ರಾಜ್ಯ ಸರ್ಕಾರವು ಹೆಚ್ಚುವರಿ ಮ್ಯಾಜಿಸ್ಟೇಟ್ ಮೂಲಕ ಆಮ್ ಆದ್ಮಿ ಪಾರ್ಟಿ ಮುಖಂಡರಿಗೆ ಸಮನ್ಸ್ ಜಾರಿಮಾಡಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಎಎಪಿ, ಭ್ರಷ್ಟ ಬಿಜೆಪಿ ಸರ್ಕಾರದ ಇಂತಹ ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದೆ.
ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಎಎಪಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ''ಸ್ಟೀಲ್ ಬ್ರಿಡ್ಜ್ನಲ್ಲಿ ಹಲವು ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಆಗಸ್ಟ್ 29, 2022ರಂದು ಆಮ್ ಆದ್ಮಿ ಪಾರ್ಟಿ ಮುಖಂಡರು "40% ಕಮಿಷನ್ ಮೇಲ್ಸೇತುವೆ'' ಹೆಸರಿನಲ್ಲಿ ವಿನೂತನ ಪ್ರತಿಭಟನೆ ನಡೆಸಿದ್ದರು. ಇದರಲ್ಲಿ ಭಾಗವಹಿಸಿದ್ದ ಮೋಹನ್ ದಾಸರಿ ಆದ ನಾನು, ಬಿ.ಟಿ.ನಾಗಣ್ಣ, ಸುರೇಶ್ ರಾಥೋಡ್, ಜಗದೀಶ್ ವಿ ಸದಂ, ಕುಶಲಸ್ವಾಮಿ, ಸುಹಾಸಿನಿ ಫಣಿರಾಜ್, ಚನ್ನಪ್ಪಗೌಡ ನೆಲ್ಲೂರು, ಮೊಹಮದ್ ಅಸದ್, ಆಯಿತುಲ್ಲಾ ರೊಹಲ್ಲಾ, ಮೊಹಮದ್ ಇರ್ಫಾನ್ ಮತ್ತಿತರರಿಗೆ ಸಮನ್ಸ್ ಜಾರಿಯಾಗಿದೆ" ಎಂದರು.

"ಭ್ರಷ್ಟಾಚಾರ ಹಾಗೂ ಅನ್ಯಾಯವನ್ನು ಪ್ರಶ್ನಿಸಿದ್ದಕ್ಕೆ ಪಕ್ಷದ ವಿರುದ್ಧ ಈಗಾಗಲೇ ಅನೇಕ ಪ್ರಕರಣಗಳಿದ್ದು, ಈಗ ಅವುಗಳಿಗೆ ಸಾಲಿಗೆ ಇನ್ನೊಂದು ಸೇರ್ಪಡೆಯಾಗಿದೆ ಅಷ್ಟೆ" ಎಂದು ಹೇಳಿದರು.
"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಅವ್ಯವಹಾರವನ್ನು ಪ್ರಶ್ನಿಸುವ ಹಾಗೂ ಅದರ ವಿರುದ್ಧ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ರಾಜ್ಯದ ಭ್ರಷ್ಟ ಬಿಜೆಪಿ ಸರ್ಕಾರವು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವದ ಕತ್ತು ಹಿಸುಕುವ ಪ್ರಯತ್ನ ಮಾಡುತ್ತಿದೆ. ನಾವು ಶಾಂತಿಯುತವಾಗಿ ಪ್ರತಿಭಟನೆ ಮಾಡಿದ್ದರೂ ಮೊಕದ್ದಮೆ ದಾಖಲಿಸಿಕೊಂಡಿರುವುದು ಖಂಡನೀಯ. ರಾಜ್ಯ ಬಿಜೆಪಿಯು ಆಮ್ ಆದ್ಮಿ ಪಾರ್ಟಿಯ ಭಯದಿಂದ ಬಳಲುತ್ತಿರುವುದು ಇದರಿಂದ ಸ್ಪಷ್ಟವಾಗಿದೆ" ಎಂದು ಮೋಹನ್ ದಾಸರಿ ಹೇಳಿದರು.

"ಶಿವಾನಂದ ವೃತ್ತದ ಸ್ಟೀಲ್ ಸೇತುವೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ ಕಳಪೆ ಗುಣಮಟ್ಟದ ಬೇರಿಂಗ್, ಶಾಕ್ ಅಬ್ಸಾರ್ವರ್ ಬಳಸಿ ನಿರ್ಮಿಸಿರುವ ಅನುಮಾನ ಮೂಡುತ್ತದೆ. ಸೇತುವೆಯಲ್ಲಿ ಸುಮಾರು 20 ಮೀಟರ್ಗೊಮ್ಮೆ ಜಾಯಿಂಟ್ಗಳಿದ್ದು, ಅಲ್ಲಿ ವಾಹನ ಸವಾರರಿಗೆ ಕಿರಿಕಿರಿಯಾಗುವಂತಹ ಅವೈಜ್ಞಾನಿಕ ಹಂಪುಗಳನ್ನು ನಿರ್ಮಿಸಲಾಗಿದೆ. ಲಘು ವಾಹನ ಸಂಚರಿಸಿದರೂ ಸೇತುವೆಯು ವೈಬ್ರೇಟ್ ಆಗುತ್ತಿದೆ. ಕಳಪೆ ಕಾಮಗಾರಿಯಿಂದಾಗಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಸ್ಟೀಲ್ ಬ್ರಿಡ್ಜ್ ಮೇಲಿನ ಸಂಚಾರಕ್ಕೆ ಸರ್ಕಾರವೇ ನಿರ್ಬಂಧ ಹೇರಿತ್ತು. ಕಾಮಗಾರಿ ವಿರುದ್ಧ ದನಿ ಎತ್ತಿದ್ದಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದು ಅಕ್ರಮವನ್ನು ಮುಚ್ಚಿಡುವ ಪ್ರಯತ್ನ" ಎಂದು ಮೋಹನ್ ದಾಸರಿ ಆರೋಪಿಸಿದರು.
-
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications