ಮಹದಾಯಿಗಾಗಿ ಟೌನ್ಹಾಲ್ ಮುಂದೆ ಭಾನುವಾರ ಹೋರಾಟ
ಬೆಂಗಳೂರು, ಆಗಸ್ಟ್ 06 : ಎಷ್ಟೇ ವಿದ್ಯಾವಂತರಾದರೂ, ಯಾವ ಐಟಿ-ಬಿಟಿ ಕಂಪನಿಗಳಲ್ಲಿ ದುಡಿದರೂ, ಕುಡಿಯಲು ನೀರು ಸಿಗದಿದ್ದರೆ, ತಿನ್ನಲು ಅನ್ನ ಸಿಗದಿದ್ದರೆ ಮನುಷ್ಯ ಬದುಕುವುದಾದರೂ ಹೇಗೆ?
ಇದನ್ನು ಗಮನದಲ್ಲಿಟ್ಟುಕೊಂಡು ನಮ್ಮ ರೈತರ ಕಷ್ಟದಲ್ಲಿ ನಾವೂ ಭಾಗಿಯಾಗುವುದರ ಮೂಲಕ, ಅವರಿಗೆ ಬೆಂಬಲ ನೀಡುವ ಸೂಚಕವಾಗಿ ಕಳಸಾ ಬಂಡೂರಿ ಯೋಜನೆ ಜಾರಿಗೆ ತರಲು ಮತ್ತು ಬಂಧಿತರಾಗಿರುವ ರೈತರನ್ನು ಬಿಡುಗಡೆ ಮಾಡಲು ಒತ್ತಾಯಿಸಿ ಸಾಮಾಜಿಕ ಜಾಲತಾಣದ ಕನ್ನಡಿಗರೆಲ್ಲ ಸೇರಿಕೊಂಡು ಇದೇ ಭಾನುವಾರ, ಆಗಸ್ಟ್ 7ರಂದು ಮಧ್ಯಾನ್ಹ ಟೌನ್ ಹಾಲ್ ಮುಂದೆ ಪ್ರತಿಭಟನೆ ಮಾಡಲಿದ್ದಾರೆ.
ಈ ಯೋಜನೆಗಾಗಿ ಹಲವಾರು ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ ಕೇಂದ್ರ-ರಾಜ್ಯ ಸರ್ಕಾರಗಳು ಈ ಸಮಸ್ಯೆ ಬಗೆಹರಿಸಲು ಹಾಕಿರುವ ಶ್ರಮವಂತೂ ಅಷ್ಟಕ್ಕಷ್ಟೆ. ರೈತರ ಕೂಗು, ಆರ್ತನಾದ ಯಾವ ರಾಜಕಾರಣಿಯ ಕಿವಿಗೆ ಬಿದ್ದಿಲ್ಲ, ಹೃದಯಕ್ಕೆ ತಟ್ಟಿಲ್ಲ ಅನ್ನುವುದು ನಿಜಕ್ಕೂ ವಿಷಾದನೀಯ ಸಂಗತಿ. [ಯಮನೂರು ಲಾಠಿ ಚಾರ್ಜ್, ಸಿದ್ದರಾಮಯ್ಯ ವಿಷಾದ]

ನಿರಂತರ ಒಂದು ವರ್ಷ ತುಂಬಿದ ಹೋರಾಟದಲ್ಲಿ ಭಾಗಿಯಾಗಿದ್ದ ರೈತರ ಮೇಲೆ ಅನವಶ್ಯಕವಾಗಿ ಪೋಲೀಸ್, ಅರೆ ಸೇನಾ ಪಡೆ, ಬಿಎಸ್ಎಫ್ ಪಡೆಗಳು ಲಾಠಿ ಚಾರ್ಜ್ ಮಾಡಿರುವುದಂತೂ ಕರ್ನಾಟಕಕ್ಕೆ ಸ್ವಾತಂತ್ರ್ಯ ಬಂದಿದೆಯಾ? ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಇಂತಹ ಹೇಯ ಕೃತ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಲವಾಗಿ ವಿರೋಧಿಸುತ್ತಿವೆ.
ಇದಕ್ಕೂ ಮುಂಚೆ ಜುಲೈ 13ರಂದು ಸಾಮಾಜಿಕ ಜಾಲತಾಣ ಕನ್ನಡಿಗರೆಲ್ಲ ಸೇರಿಕೊಂಡು #implementkalasabanduri ಎಂದು ರಾಷ್ಟ್ರಮಟ್ಟದಲ್ಲಿ ಟ್ವಿಟ್ಟರ್ ಟ್ರೆಂಡ್ ಕೂಡ ಮಾಡಲಾಗಿದೆ. ಈಗ ಮತ್ತೊಂದು ಹೋರಾಟಕ್ಕೆ ಇಳಿದಿದ್ದೇವೆ ಎಂದು ಐಟಿ ಕನ್ನಡಿಗರು ಹೇಳಿದ್ದಾರೆ. [#ImplementKalasaBanduri ಟ್ರೆಂಡಿಂಗ್]
ಈ ಹೋರಾಟಕ್ಕೆ ನೀವೆಲ್ಲರೂ ಕೈ ಜೋಡಿಸಿ. ಭಾನುವಾರ ಮಧ್ಯಾನ್ಹ 3:30ಕ್ಕೆ ಎಲ್ಲರೂ ಟೌನ್ ಹಾಲ್ ಬಳಿ ಬಂದು ಈ ಹೋರಾಟಕ್ಕೆ ಬೆಂಬಲ ಸೂಚಿಸಿ. ಉತ್ತರ ಕರ್ನಾಟಕದ ರೈತರು ಮಾತ್ರವಲ್ಲ, ಪ್ರತಿಯೊಬ್ಬ ಕನ್ನಡಿಗನೂ ಕಳಸಾ ಬಂಡೂರಿಗಾಗಿ ಬೀದಿಗಿಳಿಯಬೇಕಾದ ಪರಿಸ್ಥಿತಿ ಬಂದಿದೆ. [ಯಮನೂರಿಗೆ ಬರುವ ರಾಜಕಾರಣಿಗೆ ಸೆಗಣಿ ಎರಚುವ ಚಳವಳಿ]
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications