ರೆಡ್ಡಿ ಸಮುದಾಯಕ್ಕೆ ಸಚಿವ ಸ್ಥಾನ, ಅಭಿವೃದ್ದಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು, ಆಗಸ್ಟ್‌ 07: ರಾಜ್ಯದಲ್ಲಿರುವ ರೆಡ್ಡಿ ಸಮುದಾಯದ ಜನಸಂಖ್ಯೆಯನ್ನು ಪರಿಗಣಿಸಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ರೆಡ್ಡಿ ಸಮುದಾಯಕ್ಕೆ ಸೇರಿದ ಶಾಸಕರಿಗೆ ಹೆಚ್ಚಿನ ಪ್ರಾತಿನಿಧ್ಯ ಹಾಗೂ ಪ್ರತ್ಯೇಕ ರೆಡ್ಡಿ ನಿಗಮ ಸ್ಥಾಪನೆ ಮಾಡುವಂತೆ ಆಗ್ರಹಿಸಿ ಶನಿವಾರ ರೆಡ್ಡಿ ಜನ ಸಂಘದ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆಯನ್ನು ನಡೆಸಲಾಯಿತು.

ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಹರಿಹರದ ವೇಮಾನಂದ ಸ್ವಾಮೀಜಿ ಮಾತನಾಡಿ, "ರಾಜ್ಯದಲ್ಲಿ 70 ಲಕ್ಷ ಜನ ರೆಡ್ಡಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅಲ್ಲದೆ, ನಮ್ಮ ಸಮುದಾಯದ 11 ಜನ ಶಾಸಕರು ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಬಹಳಷ್ಟು ಪ್ರಾಮುಖ್ಯತೆಯನ್ನು ಹೊಂದಿರುವ ರೆಡ್ಡಿ ಸಮುದಾಯಕ್ಕೆ ಸೇರಿದ ಕೇವಲ ಒಬ್ಬ ಶಾಸಕರನ್ನು ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಈ ಸರಕಾರ ಒಂದು ನಿರ್ದಿಷ್ಟ ಸಮುದಾಯದ ಓಲೈಕೆಗೆ ಮುಂದಾಗಿ ಬೇರೆ ಸಮುದಾಯಗಳನ್ನು ಮರೆಯುತ್ತಿದ್ದಾರೆ. ಈ ರೀತಿ ಮಾಡಿದರೆ ಸರಕಾರಕ್ಕೆ ಬೇರೆ ಸಮುದಾಯಗಳಿಂದ ವಿರೋಧ ವ್ಯಕ್ತವಾಗುತ್ತದೆ,'' ಎಂದರು.

 ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವ ಎಚ್ಚರಿಕೆ

ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವ ಎಚ್ಚರಿಕೆ

"ಬಿ.ಎಸ್. ಯಡಿಯೂರಪ್ಪ ಸರಕಾರದಲ್ಲೂ ನಮಗೆ ಪ್ರಾತಿನಿಧ್ಯ ನೀಡಿರಲಿಲ್ಲ. ಬಸವರಾಜ ಬೊಮ್ಮಾಯಿ ಸರಕಾರದಲ್ಲೂ ಕೂಡಾ ಸೂಕ್ತ ಪ್ರಾತಿನಿಧ್ಯ ದೊರೆತಿಲ್ಲ. ನಮ್ಮ ಪಕ್ಷದ ಬೆಳವಣಿಗೆಯಲ್ಲಿ ರೆಡ್ಡಿ ಸಮುದಾಯದ ಕೊಡುಗೆ ಬಹಳಷ್ಟಿದೆ. ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸಮುದಾಯಕ್ಕೆ ಸೇರಿದ ಸತೀಶ್ ರೆಡ್ಡಿ, ವಿಶ್ವನಾಥ್‌ ರೆಡ್ಡಿ, ಸೋಮಶೇಖರ್‌ ರೆಡ್ಡಿರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವ,'' ಎಚ್ಚರಿಕೆಯನ್ನು ನೀಡಿದರು.

 ಬೆಂಗಳೂರು ಅಭಿವೃದ್ಧಿಗಾಗಿ ಜಮೀನು ನೀಡಿದ್ದೇವೆ

ಬೆಂಗಳೂರು ಅಭಿವೃದ್ಧಿಗಾಗಿ ಜಮೀನು ನೀಡಿದ್ದೇವೆ

ರೆಡ್ಡಿ ಸಂಘದ ಅಧ್ಯಕ್ಷ ಎಸ್. ಜಯರಾಮ ರೆಡ್ಡಿ ಮಾತನಾಡಿ, "ನಾಡಪ್ರಭು ಕೆಂಪೇಗೌಡರ ಕಾಲದಿಂದಲೂ ಬೆಂಗಳೂರು ನಿರ್ಮಾಣಕ್ಕೆ ರೆಡ್ಡಿಗಳು ಅಮೂಲ್ಯ ಕೊಡುಗೆ ನೀಡುತ್ತಾ ಬಂದಿದ್ದು, ಪಾಪರಡ್ಡಿ ಪಾಳ್ಯ, ಮುನಿರೆಡ್ಡಿ ಪಾಳ್ಯ ಹೀಗೆ ಹತ್ತು ಹಲವು ಹೆಸರಿನ ಪ್ರದೇಶಗಳು ಈಗಲೂ ರೆಡ್ಡಿಗಳ ಹೆಸರಿನಿಂದಲೇ ಕರೆಯಲಾಗುತ್ತಿದೆ. ವಿಶೇಷವಾಗಿ ಬೆಂಗಳೂರಿನ ಕೈಗಾರಿಕಾ ಅಭಿವೃದ್ಧಿಗೆ ಜನಾಂಗ ಸಾಕಷ್ಟು ಕೊಡುಗೆ ನೀಡಿದ್ದು, ರೆಡ್ಡಿ ಸಮುದಾಯದವರಿಗೆ ಸೇರಿದ ಸಹಸ್ರಾರು ಎಕರೆ ಅತ್ಯಮೂಲ್ಯ ಜಮೀನು ಬೆಂಗಳೂರು ಅಭಿವೃದ್ಧಿಗಾಗಿ ನೀಡಿದ್ದೇವೆ. ಬೆಂಗಳೂರು ನಗರದ ಶ್ರೇಯೋಭಿವೃದ್ಧಿಗಾಗಿ ರೆಡ್ಡಿ ಸಮುದಾಯ ಮಾಡಿರುವ ತ್ಯಾಗವನ್ನು ಬಿಜೆಪಿ ಸರ್ಕಾರ ಉಪೇಕ್ಷೆ ಮಾಡಿದೆ,'' ಎಂದು ಹೇಳಿದರು.

 ರೆಡ್ಡಿ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು

ರೆಡ್ಡಿ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು

"ರಾಜ್ಯದಲ್ಲಿ ಹೆಚ್ಚು ಜನ ಸಂಖ್ಯೆ ಹೊಂದಿರುವ ರೆಡ್ಡಿ ಜನಾಂಗ ಯಾವುದೇ ಪಕ್ಷವನ್ನು ಅಧಿಕಾರಕ್ಕೆ ತರುವ, ಅಧಿಕಾರದಿಂದ ದೂರ ಉಳಿಯುವಂತೆ ಮಾಡುವ ಶಕ್ತಿ ಹೊಂದಿದೆ. ರೆಡ್ಡಿ ಜನಾಂಗದಲ್ಲೂ ಬಡವರು, ಹಿಂದುಳಿದವರಿದ್ದು, ಇವರನ್ನು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಮುಂದೆ ತರಲು ರೆಡ್ಡಿ ಜನಾಂಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಮಾಡಿದ್ದ ಮನವಿಯನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದೆ,'' ಎಂದು ಆರೋಪಿಸಿದರು.

"ಈ ಕೂಡಲೇ 'ರೆಡ್ಡಿ ಅಭಿವೃದ್ಧಿ ನಿಗಮ' ಸ್ಥಾಪಿಸುವ ಜತೆಗೆ ಬಾಕಿ ಉಳಿದಿರುವ ನಾಲ್ಕು ಸಚಿವ ಸ್ಥಾನಗಳಲ್ಲಿ ಹೆಚ್ಚಿನ ಅವಕಾಶಗಳನ್ನು ರೆಡ್ಡಿ ಜನಾಂಗಕ್ಕೆ ನೀಡಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ತಮ್ಮ ಹೋರಾಟವನ್ನು ತೀವ್ರಗೊಳಿಸಲಾಗುವುದು,'' ಎಂದು ಎಸ್. ಜಯರಾಮ ರೆಡ್ಡಿ ಎಚ್ಚರಿಕೆ ನೀಡಿದರು.

Recommended Video

    ನೀರಜ್ ಚೋಪ್ರಾ ಮತ್ತು ಅದಿತಿ ಅಶೋಕ್ ಗೆ KSRTC ಇಂದ ಬಂಪರ್ ಗಿಫ್ಟ್ | Oneindia Kannada
     ರಸ್ತೆ ತಡೆ ನಡೆಸಿ ಬೃಹತ್‌ ಪ್ರತಿಭಟನೆ

    ರಸ್ತೆ ತಡೆ ನಡೆಸಿ ಬೃಹತ್‌ ಪ್ರತಿಭಟನೆ

    ಪ್ರತಿಭಟನೆಯಲ್ಲಿ ಮಾಜಿ ಮಹಾಪೌರ ಎಸ್‌. ಕೆ. ನಟರಾಜ್‌, ರೆಡ್ಡಿ ಜನಸಂಘದ ಉಪಾಧ್ಯಕ್ಷರಾದ ವೆಂಕಟಶಿವಾರೆಡ್ಡಿ, ಶಿವರಾಮ್, ಪ್ರಧಾನ ಕಾರ್ಯದರ್ಶಿ ಕೃಷ್ಣಾ ರೆಡ್ಡಿ. ಕೆ.ಎಂ., ಜಂಟಿ ಕಾರ್ಯದರ್ಶಿಗಳಾದ ಸದಾಶಿವ ರೆಡ್ಡಿ, ಕೃಷ್ಣಾ ರೆಡ್ಡಿ ಕೆ.ಎಂ ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಿಂದ ಆಗಮಿಸಿದ್ದ ಸಾವಿರಾರು ರೆಡ್ಡಿ ಸಮುದಾಯದವರು ಪಾಲ್ಗೊಂಡಿದ್ದರು.

    ಬಿಜೆಪಿ ಸಚಿವ ಸಂಪುಟದಲ್ಲಿ ರೆಡ್ಡಿ ಸಮುದಾಯವನ್ನು ಕಡೆಗಣಿಸಿರುವುದನ್ನು ಖಂಡಿಸಿ ಇಂದು ಕರ್ನಾಟಕ ರೆಡ್ಡಿ ಜನ ಸಂಘದ ವತಿಯಿಂದ ರಸ್ತೆ ತಡೆ ನಡೆಸಿ ಬೃಹತ್‌ ಪ್ರತಿಭಟನೆಯನ್ನು ನಡೆಸಲಾಯಿತು.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+