ಕುಡಿಯಲು ನೀರಿಲ್ಲ ಚುನಾವಣೆ ಮಾಡ್ತಾರಂತೆ, ನೀರು ಕೊಡಿ ಇಲ್ಲದಿದ್ದರೆ ಕರ್ನಾಟಕ ಬಂದ್ ಮಾಡ್ತೀವಿ- ವಾಟಾಳ್ ವಾರ್ನಿಂಗ್
ಬೆಂಗಳೂರು ಮಾರ್ಚ್ 27: ಕುಡಿಯಲು ನೀರಿಲ್ಲ. ಜನ ನೀರಿಗಾಗಿ ಪರದಾಡುವಂತಾಗಿದೆ. ರಾಜ್ಯದಲ್ಲಿ ಕುಡಿಯೋ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಹೀಗಿರುವಾಗ ಚುನಾವಣೆ ಮಾಡೋದು ಎಷ್ಟು ಸರಿ. ಚುನಾವಣೆ ಮುಂದೂಡಿ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ ಮಾಡಲಾಯಿತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,'ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇಂಥಹ ಸಂದರ್ಭದಲ್ಲಿ ಚುನಾವಣೆ ನಡೆಸುವುದು ಬೇಡ. ಅದನ್ನು ಮುಂದೂಡಿ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ನಾನು ಆಗ್ರಹಿಸುತ್ತೇನೆ' ಎಂದರು.

ಕಾಂಗ್ರೆಸ್, ಬಿಜೆಪಿ ಜೆಡಿಎಸ್ ಮೂರು ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ. ಆದರೆ ಯಾವೊಂದು ಪಕ್ಷದ ನಾಯಕರೂ ಕಾವೇರಿ ನೀರಿನ ಬಗ್ಗೆ ಆಗಲಿ, ರಾಜ್ಯದಲ್ಲಿ ಉಂಟಾಗಿರುವ ಜಲಕ್ಷಾಮದ ಬಗ್ಗೆ ಆಗಲಿ ಮಾತನಾಡುತ್ತಿಲ್ಲ. ಹೀಗಾಗಿ ಚುನಾವಣೆ ಮುಂದೂಡುವಂತೆ ನಾನು ಮನವಿ ಮಾಡುತ್ತೇನೆ ಎಂದರು. ಹೀಗೇ ನೀರಿನ ಸಮಸ್ಯೆ ಮುಂದುವರೆದರೆ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಎಚ್ಚರಿಕೆ ಕೂಡ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ನೀರಿಲ್ಲ. ಕಾವೇರಿ ನೀರು ತಮಿಳುನಾಡು ಪಾಲಾಗುತ್ತಿದೆ. ನಮ್ಮ ರಾಜ್ಯದ ಜನ ನೀರಿಲ್ಲದ ಸಾಯುತ್ತಿದ್ದಾರೆ. ಈ ಬಗ್ಗೆ ಯಾರೂ ಕೂಡ ಗಮನವೇ ಹರಿಸುತ್ತಿಲ್ಲ. ಯಾರೊಬ್ಬರೂ ಕೂಡ ಇದರ ಬಗ್ಗೆ ಪ್ರಸ್ತಾಪವೂ ಮಾಡುತ್ತಿಲ್ಲ ಎಂದು ಆಕ್ರೋಶಗೊಂಡರು. ಇನ್ನೂ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆದ ನೀರಿಗಾಗಿ ಪ್ರತಿಭಟನೆಯಲ್ಲಿ ಐವತ್ತಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು. ಖಾಲಿ ಕೊಡ ಹಿಡಿದು ಬೇಕೇ ಬೇಕು ನೀರು ಬೇಕು ಎಂದು ಘೋಷಣೆಗಳನ್ನು ಪ್ರತಿಭಟನಾಕಾರರು ಕೂಗಿದರು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸ್ ವಾಹನದಲ್ಲಿ ಪ್ರತಿಭಟನಾಕಾರರನ್ನು ಕರೆದೊಯ್ಯಲಾಯಿತು.

ರಾಜ್ಯದಲ್ಲಿ ನೀರು ಬಿಕ್ಕಟ್ಟು ಬಗೆಹರಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಂಗಳೂರಿಗರು ನೀರಿನ ಸಮಸ್ಯೆಯಿಂದ ಬೇಸತ್ತು ಹೋಗಿದ್ದಾರೆ. ನೀರಿಗಾಗಿ ಹೋರಾಟವನ್ನು ಶುರು ಮಾಡಿದ್ದಾರೆ. ವಿಪರ್ಯಾಸ ಅಂದರೆ ಬಿಬಿಎಂಪಿ ಹಾಗೂ ಬಿಡ್ಲ್ಯೂಎಸ್ಎಸ್ಬಿ ಉಚಿತವಾಗಿ ನೀರು ಪೂರೈಕೆ ಮಾಡುತ್ತಿದ್ದರೂ ನೀರು ಬಳಸಲು ಯೋಗ್ಯವಾಗಿಲ್ಲ ಎಂಬ ಮಾತುಗಳು ಕೇಳಿ ಬಂದಿದೆ. ಕಲುಷಿತ ನೀರನ್ನು ಫಿಲ್ಟರ್ ಮಾಡಿ ಕಳುಹಿಸುತ್ತಿದ್ದಾರೆಂದು ಜನ ಆರೋಪ ಮಾಡಿದ್ದಾರೆ.
ನಗರದಲ್ಲಿ ನೀರಿನ ಬೇಡಿಕೆ ಹೆಚ್ಚಾಗುತ್ತಿದ್ದಂತೆ ವಾಟರ್ ಕ್ಯಾನ್ ಹಾಗೂ ವಾಟರ್ ಟ್ಯಾಂಕ್ಗಳ ಬೆಲೆ ಕೂಡ ಕೈಮೀರಿ ಹೋಗಿದೆ. ಮಧ್ಯಮ ವರ್ಷದವರ ಪಾಲಿಗೆ ನೀರಿನ ಸಮಸ್ಯೆ ದೊಡ್ಡ ಚಿಂತೆಯಾಗಿ ಕಾಡತೊಡಗಿದೆ. ಹೀಗಾಗಿ ಸರ್ಕಾರ ನೀರಿನ ಸಮಸ್ಯೆಯನ್ನು ಬಗೆ ಹರಿಸಬೇಕು, ನೀರಿನ ಪೈರೈಕೆಗೆ ಹೆಚ್ಚು ಒತ್ತು ನೀಡಬೇಕು ಎಂಬ ಒತ್ತಾಯಗಳು ಕೇಳಿ ಬಂದಿವೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications