ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಲಿವೇಟೆಡ್ ಕಾರಿಡಾರ್ ಬೇಡ, ಮೌರ್ಯವೃತ್ತದಲ್ಲಿ ನಾಳೆ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಮಾರ್ಚ್ 15: ನಗರದಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ವಿರೋಧಿಸಿ ಸಿಟಿಜನ್ ಫಾರ್ ಬೆಂಗಳೂರು ಫೋರಂ ಮಾರ್ಚ್ 16ರಂದು ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಮ್ಮಿಕೊಂಡಿದೆ.

ನಗರದಲ್ಲಿ ಸರ್ಕಾರದ ಎಲಿವೇಟೆಡ್ ಕಾರಿಡಾರ್ ಯೋಜನೆ ಪೂರ್ಣಗೊಳ್ಳಲು ಮೂರು ಸಾವಿರಕ್ಕೂ ಅಧಿಕರ ಮರಗಳು ಧರೆಗೆ ಉರುಳುತ್ತಿವೆ. ಜೊತೆಗೆ ಪ್ರಮುಖ ಕೆರೆಗಳ ಒತ್ತುವರಿಯಾಗುತ್ತಿದೆ. ಈ ಯೋಜನೆ ನಗರದ ವಾತಾವರಣದ ಮೇಲೆ ದುಷ್ಪರಿಣಾಮ ಬೀರಲಿದ್ದು, ಸರ್ಕಾರ ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ಮನವಿ ಮಾಡಲಾಗಿದೆ.

Protest planned against elevated corridor tender

ಎಲಿವೇಟೆಡ್ ಕಾರಿಡಾರ್‌ನಿಂದ ಮರಗಳಿಗಷ್ಟೇ ಅಲ್ಲ ಬಫರ್‌ ವಲಯಕ್ಕೂ ಅಪಾಯ ಎಲಿವೇಟೆಡ್ ಕಾರಿಡಾರ್‌ನಿಂದ ಮರಗಳಿಗಷ್ಟೇ ಅಲ್ಲ ಬಫರ್‌ ವಲಯಕ್ಕೂ ಅಪಾಯ

ಎಲಿವೇಟೆಡ್ ಕಾರಿಡಾರ್ ಯೋಜನೆಯಿಂದ ಮರಗಳ ಮಾರಣಹೋಮ ಮಾಡುವ ಬದಲು ಉಪನಗರ ರೈಲು, ಬಸ್ ಸಂಪರ್ಕ ವ್ಯವಸ್ಥೆ, ಮೆಟ್ರೋ ರೈಲನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ. ಈ ಯೋಜನೆಯನ್ನು ಕೈಬಿಟ್ಟು ಸಮೂಹ ಸಾರಿಗೆಯತ್ತ ಹೆಚ್ಚು ಗಮನವಹಿಸಬೇಕು. ನಮಗೆ ಕಾಂಕ್ರೀಟ್ ಸಾಕು, ಸಮೂಹ ಸಾರಿಗೆ ಬೇಕು ಎಂದು ಆಗ್ರಹಿಸಿದ್ದಾರೆ. ಬೃಂದಾ ಶ್ರೀಧರ್ ಎನ್ನುವವರು ಎಲಿವೇಟೆಡ್ ಕಾರಿಡಾರ್ ಬೇಡ ಎಂದು ಸಹಿ ಅಭಿಯಾನವನ್ನೂ ಕೂಡ ಆರಂಭಿಸಿದ್ದಾರೆ.

English summary
Residents and civic groups are preparing to take on the government over the elevated network of corridors in a fight that promises to put the steel flyover protests in the shade.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X