ಭರವಸೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎ.ಟಿ ರಾಮಸ್ವಾಮಿ ರಾಜೀನಾಮೆ ನೀಡಿದ್ದೇಕೆ?
ಬೆಂಗಳೂರು, ಜೂನ್ 16: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್. ವಿಶ್ವನಾಥ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಅರಕಲಗೂಡು ಶಾಸಕ ಎ.ಟಿ ರಾಮಸ್ವಾಮಿ ಅವರು ಸರ್ಕಾರದ ಭರವಸೆಗಳನ್ನು ಈಡೇರಿಸಲು ಇರುವ ಸ್ಥಾಯಿ ಸಮಿತಿಗೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದಿರುವ ಭೂ ಕಬಳಿಕೆಯನ್ನು ಹತ್ತಿಕ್ಕಲು ಸರ್ಕಾರ ಮುಂದಾಗದಿರುವುದಕ್ಕೆ ಬೇಸರ ವ್ಯಕ್ತಪಡಿಸಿ, ಪ್ರತಿಭಟನೆ ರೂಪದಲ್ಲಿ ರಾಜೀನಾಮೆ ನೀಡಿದ್ದಾರೆ.
ಒಂದೆಡೆ, ಜಿಂದಾಲ್ ಸಂಸ್ಥೆಗೆ ಭೂಮಿ ಪರಭಾರೆ ಮಾಡಲು ಸರ್ಕಾರ ನಿರ್ಧರಿಸಿರುವುದು ಭಾರಿ ಪ್ರತಿಭಟನೆ ರೂಪ ಪಡೆದಿದೆ. ಇನ್ನೊಂದೆಡೆ ಬೆಂಗಳೂರಿನ ಸುತ್ತಾ ಮುತ್ತಾ ಭೂ ಕಬಳಿಕೆ ಅವ್ಯಾಹತವಾಗಿ ನಡೆಯುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ತಮ್ಮ ನೋವು ತೋಡಿಕೊಂಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ.

ರಾಜೀನಾಮೆಗೆ ಕಾರಣವೇನು? : ಬೆಂಗಳೂರಿನಲ್ಲಿ 310 ಎಕರೆ 18 ಗುಂಟೆ ಸರ್ಕಾರಿ ಜಮೀನನ್ನು ಖಾಸಗಿ ಸಂಸ್ಥೆಗೆ ಕಡಿಮೆ ದರದಲ್ಲಿ ಪರಭಾರೆ ಮಾಡಲಾಗಿದೆ. ಈ ಕುರಿತಂತೆ ಡಿಸೆಂಬರ್ 13ರಂದು ಬೆಳಗಾವಿ ಅಧಿವೇಶನದಲ್ಲಿ ಎ.ಟಿ ರಾಮಸ್ವಾಮಿ ಅವರು ಪ್ರಸ್ತಾಪಿಸಿ, ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಸಂಬಂಧಪಟ್ಟ ಜಿಲ್ಲಾಧಿಕಾರಿ ಮೇಲೆ ಕ್ರಮ ಕೈಗೊಂಡಿಲ್ಲ, ಸರ್ಕಾರಿ ಜಮೀನು ತೆರವುಗೊಳಿಸಿಲ್ಲ. ಒಂದು ಎಕರೆಗೆ ಲಕ್ಷಾಂತರ ರುಪಾಯಿ ಬೆಲೆ ಇದೆ ಆದರೆ, ಈ ಬಗ್ಗೆ ಗಮನ ಹರಿಸುವುದಾಗಿ ಸರ್ಕಾರ ನೀಡಿದ್ದ ಭರವಸೆ ಹುಸಿಯಾಗಿದೆ. ಸರ್ಕಾರದ ಯೋಜನೆಗಳನ್ನು ಈಡೇರಿಸಲು ಇರುವ ಭರವಸೆ ಸಮಿತಿ ಅಧ್ಯಕ್ಷರ ಮನವಿಗೆ ಇಲ್ಲಿ ಬೆಲೆ ಇಲ್ಲದ್ದಂತಾಗಿದೆ, ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಎ. ಟಿ ರಾಮಸ್ವಾಮಿ ಅವರು 6 ಪುಟಗಳ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications