ಮತಾಂತರ ವಿರೋಧಿ ಮಸೂದೆ ವಿರುದ್ಧ ಕ್ರೈಸ್ತ ಸಮುದಾಯ ಪ್ರತಿಭಟನೆ
ಬೆಂಗಳೂರು, ಡಿಸೆಂಬರ್ 22: ಬೆಳಗಾವಿಯ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಅನ್ನು ಮಂಗಳವಾರ ಮಂಡಿಸಲಾಗಿದೆ.
ಆಮಿಷ ಒಡ್ಡಿ ನಡೆಯುವ ಮತಾಂತರಗಳನ್ನು ನಿಷೇಧಿಸುವ ಪ್ರಸ್ತಾವ ಇರುವ 'ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021' ಮಸೂದೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದರು.
ಕರ್ನಾಟಕದ ಮತಾಂತರ ವಿರೋಧಿ ಮಸೂದೆ ವಿರುದ್ಧ ಬುಧವಾರ ಬೆಂಗಳೂರಿನಲ್ಲಿ ಕ್ರೈಸ್ತ ಸಮುದಾಯದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕರ್ನಾಟಕ ವಿಧಾನಸಭೆಯಲ್ಲಿ ಇಂದು ಮಸೂದೆಯ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಚರ್ಚೆ ಮಾಡಲಿದ್ದಾರೆ.

ಸರ್ಕಾರದ ನಿರ್ಧಾರ ನೋವು ತರಿಸಿದೆ
"ಕರ್ನಾಟಕ ಸರ್ಕಾರ ಸಾರ್ವಜನಿಕವಾಗಿ ಚರ್ಚೆಗೆ ಅವಕಾಶವನ್ನೇ ನೀಡದೆ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಮುಂದಾಗಿದೆ. ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ನಮಗೆ ನೋವುಂಟು ಮಾಡಿದೆ," ಎಂದು ಆರ್ಚ್ ಬಿಷಪ್ ಪೀಟರ್ ಮಾಚಾಡೋ ಹೇಳಿದ್ದಾರೆ.
"ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021 ಜಾರಿಯಿಂದ ಕರ್ನಾಟಕಕ್ಕೆ ಏನೂ ಒಳಿತಾಗುವುದಿಲ್ಲ. ಈ ಕುರಿತು ನಾವು ಸಾಕಷ್ಟು ಪ್ರಯತ್ನ-ಪ್ರತಿಭಟನೆ ಮಾಡಿದೆವು. ಮುಖ್ಯಮಂತ್ರಿ ಸೇರಿದಂತೆ ಹಲವರಿಗೆ ಮನವಿ ಸಲ್ಲಿಸಿದ್ದೆವು. ಆದರೆ ಹಠದಿಂದ ಮಸೂದೆಯನ್ನು ಸದನದಲ್ಲಿ ಮಂಡಿಸಲಾಗಿದೆ," ಎಂದು ಆರ್ಚ್ ಬಿಷಪ್ ಪೀಟರ್ ಮಾಚಾಡೋ ಬೇಸರ ವ್ಯಕ್ತಪಡಿಸಿದರು.

"ಈ ಮಸೂದೆಯು ಕರ್ನಾಟಕ ರಾಜ್ಯಕ್ಕೆ ಹಿತಕರ ಅಲ್ಲ. ಸರ್ಕಾರದ ನಿರ್ಧಾರದಿಂದ ವಿಶೇಷವಾಗಿ ಕ್ರೈಸ್ತ ಧರ್ಮಕ್ಕೆ ನೋವುಂಟಾಗಿದೆ. ಮಸೂದೆ ಮಂಡಿಸುವ ಮೊದಲು ಮತಾಂತರ ಅಂದರೆ ಏನು ಎಂದು ಚರ್ಚಿಸಬೇಕಿತ್ತು. ಆದರೆ ಚರ್ಚೆ ಮಾಡಿಲ್ಲ. ಸರ್ಕಾರ ಬಹುಶಃ ನಮಗೆ ಶಿಕ್ಷೆ ಕೊಡಲು ಮುಂದಾಗಿದೆ ಎಂದು ಕಾಣುತ್ತಿದೆ".
ನಾವು ರಾಜ್ಯದಲ್ಲಿ ಸಾವಿರಾರು ಶಾಲೆ- ಆಸ್ಪತ್ರೆಗಳನ್ನು ನಡೆಸುತ್ತಿದ್ದೇವೆ. ಎಲ್ಲಿಯಾದರೂ ಒಂದು ಕಡೆ ಮತಾಂತರವಾಗಿದ್ದರೆ ತಿಳಿಸಿ. ಆಗ ಸರಿಪಡಿಸುತ್ತೇವೆ ಎಂದು ನುಡಿದರು. ನಮ್ಮ ಶಾಲೆಗಳಿಗೆ ಬರುವ ಜನರಿಗೆ ಮತಾಂತರದ ಭಯವಿಲ್ಲ ಆದರೂ ಇಂಥ ನಿರ್ಧಾರವೇಕೆ ಎಂದು ಪ್ರಶ್ನಿಸಿದರು.
ಇನ್ನೇನು ಕ್ರಿಸ್ಮಸ್ ಹಬ್ಬ ಬರುತ್ತದೆ. ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಸುಭಾಶಯಗಳು ಎಂದು ಹಾರೈಸಿದರು. ಕ್ರಿಸ್ಮಸ್ ಜೊತೆಗೆ ನೋವಿನಲ್ಲಿ ಸಂತೋಷ, ಸಂತೋಷದಲ್ಲಿ ನೋವು. ಕ್ರಿಸ್ಮಸ್ ಸಂದರ್ಭದಲ್ಲಿ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸುತ್ತೇವೆ. ನಮ್ಮ ಧಾರ್ಮಿಕ ಮುಖಂಡರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಪ್ರಕಟಿಸುತ್ತೇವೆ ಎಂದರು.
-
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ











Click it and Unblock the Notifications