ಶಾಲೆಗಳಲ್ಲಿ ಬಿಸಿಯೂಟವನ್ನು ಶೀಘ್ರ ಪುನಾರಂಭಿಸಲು ಆಗ್ರಹ
ಬೆಂಗಳೂರು,ಜನವರಿ 21:ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೀಘ್ರ ಬಿಸಿಯೂಟ ನೀಡುವ ಕಾರ್ಯಕ್ರಮ ಆರಂಭಿಸಬೇಕು ಎಂದು ಮಕ್ಕಳ ನಡೆ ಶಾಲೆಯ ಕಡೆ ಅಭಿಯಾನ ಸಮಿತಿ ಒತ್ತಾಯಿಸಿದೆ.
ಶಿಕ್ಷಣ ತಜ್ಞರು, ಆರೋಗ್ಯ ತಜ್ಞರು, ಶಾಲಾ ಅಭಿವೃದ್ಧಿ ಮತ್ತು ಸಲಹಾ ಸಮಿತಿಯ ಸದಸ್ಯರು ಮತ್ತು ಶಿಕ್ಷಕರು ಆರನೇ ತರಗತಿಗಿಂತ ಕಡಿಮೆ ತರಗತಿಗಳನ್ನು ಮುಚ್ಚುವಂತೆ ಸಲಹೆಗಳನ್ನು ನೀಡುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಪೌಷ್ಠಿಕಾಂಶದ ಕೊರತೆ ಎದುರಾಗುತ್ತಿದೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.
ಡಿಸೆಂಬರ್ ತಿಂಗಳಿನಲ್ಲಿ ಸಚಿವರನ್ನು ಭೇಟಿಯಾದಾಗ, ಜನವರಿ 15ರ ಬಳಿಕ ಎಲ್ಲಾ ತರಗತಿಗಳನ್ನು ತೆರೆಯುವ ಭರವಸೆ ನೀಡಿದ್ದರು. ಆದರೆ, ಅದಾವುದೂ ಆಗಲಿಲ್ಲ. ಅಂಗನವಾಡಿಗಳೂ ಬಂದ್ ಆಗಿದ್ದು, ಮಕ್ಕಳಲ್ಲಿ ಅಪೌಷ್ಟಿಕತೆ ಎದುರಾಗುತ್ತಿದೆ. ಸರ್ಕಾರ ಕೂಡಲೇ ಬಿಸಿಯೂಟ ಕಾರ್ಯಕ್ರಮ ಆರಂಭಿಸಬೇಕಿದೆ ಎಂದು ಆರೋಗ್ಯ ತಜ್ಞ ಡಾ.ಬೆವಿಂಜೆ ಶ್ರೀನಿವಾಸ ಕಕ್ಕಿಳಾಯ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಜನವರಿ 1 ರಿಂದ ಶಾಲೆಗಳು ಪುನರಾರಂಭಗೊಂಡಿದ್ದು, ಸಚಿವ ಸುರೇಶ್ ಕುಮಾರ್ ಅವರ ಭರವಸೆಯ ಹೊರತಾಗಿಯೂ ಬಿಸಿಯೂಟ ಕಾರ್ಯಕ್ರಮ ಇನ್ನೂ ಆರಂಭಗೊಂಡಿಲ್ಲ ಎಂದು ಹೇಳಿದೆ.
ಜನವರಿ 23ರಿಂದ ಎಲ್ಲಾ ತರಗತಿಗಳನ್ನು ಆರಂಭಿಸಿ ಸರ್ಕಾರ ಬಿಸಿಯೂಟ ಆರಂಭಿಸಬೇಕು. ಒಂದು ವೇಳೆ ಸರ್ಕಾರ ನಮ್ಮ ಆಗ್ರಹವನ್ನು ಈಡೇರಿಸದೇ ಹೋದಲ್ಲಿ ಜನವರಿ 25 ರಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಆಗ್ರಹಿಸಿದ್ದಾರೆ.
ಬಿಸಿಯೂಟದ ಬದಲಾಗಿ ಸರ್ಕಾರ ಫುಡ್ ಕಿಟ್ ಗಳನ್ನು ನೀಡಿದ್ದರೂ ಕೂಡ ಅದರಲ್ಲಿ ಅಕ್ಕಿ, ಬೇಳೆಯನ್ನಷ್ಟೇ ನೀಡಲಾಗಿದೆ. ತರಕಾರಿ, ಹಾಲಿನ ಪುಡಿ ನೀಡಲಾಗಿಲ್ಲ. ಕೂಲಿಗೆ ತೆರಳಲುವ ಪೋಷಕರು ಮನೆಯಲ್ಲಿ ಆಹಾರವನ್ನು ತಯಾರಿಸುವುದಿಲ್ಲ. ಮಕ್ಕಳು ಆಹಾರವಿಲ್ಲದೆ ಸಮಸ್ಯೆ ಅನುಭವಿಸುತ್ತಿದ್ದಾರೆ. ಸರ್ಕಾರ ನೀಡುವ ಫುಡ್ ಕಿಟ್ ಗಳು ಉಪಯೋಗಕ್ಕೆ ಬರುವುದಿಲ್ಲ ಎಂದು ಪೋಷಕರೊಬ್ಬರು ಹೇಳಿದ್ದಾರೆ.
Recommended Video
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications