ಶಾಲೆಗಳಲ್ಲಿ ಬಿಸಿಯೂಟವನ್ನು ಶೀಘ್ರ ಪುನಾರಂಭಿಸಲು ಆಗ್ರಹ
ಬೆಂಗಳೂರು,ಜನವರಿ 21:ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೀಘ್ರ ಬಿಸಿಯೂಟ ನೀಡುವ ಕಾರ್ಯಕ್ರಮ ಆರಂಭಿಸಬೇಕು ಎಂದು ಮಕ್ಕಳ ನಡೆ ಶಾಲೆಯ ಕಡೆ ಅಭಿಯಾನ ಸಮಿತಿ ಒತ್ತಾಯಿಸಿದೆ.
ಶಿಕ್ಷಣ ತಜ್ಞರು, ಆರೋಗ್ಯ ತಜ್ಞರು, ಶಾಲಾ ಅಭಿವೃದ್ಧಿ ಮತ್ತು ಸಲಹಾ ಸಮಿತಿಯ ಸದಸ್ಯರು ಮತ್ತು ಶಿಕ್ಷಕರು ಆರನೇ ತರಗತಿಗಿಂತ ಕಡಿಮೆ ತರಗತಿಗಳನ್ನು ಮುಚ್ಚುವಂತೆ ಸಲಹೆಗಳನ್ನು ನೀಡುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಪೌಷ್ಠಿಕಾಂಶದ ಕೊರತೆ ಎದುರಾಗುತ್ತಿದೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.
ಡಿಸೆಂಬರ್ ತಿಂಗಳಿನಲ್ಲಿ ಸಚಿವರನ್ನು ಭೇಟಿಯಾದಾಗ, ಜನವರಿ 15ರ ಬಳಿಕ ಎಲ್ಲಾ ತರಗತಿಗಳನ್ನು ತೆರೆಯುವ ಭರವಸೆ ನೀಡಿದ್ದರು. ಆದರೆ, ಅದಾವುದೂ ಆಗಲಿಲ್ಲ. ಅಂಗನವಾಡಿಗಳೂ ಬಂದ್ ಆಗಿದ್ದು, ಮಕ್ಕಳಲ್ಲಿ ಅಪೌಷ್ಟಿಕತೆ ಎದುರಾಗುತ್ತಿದೆ. ಸರ್ಕಾರ ಕೂಡಲೇ ಬಿಸಿಯೂಟ ಕಾರ್ಯಕ್ರಮ ಆರಂಭಿಸಬೇಕಿದೆ ಎಂದು ಆರೋಗ್ಯ ತಜ್ಞ ಡಾ.ಬೆವಿಂಜೆ ಶ್ರೀನಿವಾಸ ಕಕ್ಕಿಳಾಯ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಜನವರಿ 1 ರಿಂದ ಶಾಲೆಗಳು ಪುನರಾರಂಭಗೊಂಡಿದ್ದು, ಸಚಿವ ಸುರೇಶ್ ಕುಮಾರ್ ಅವರ ಭರವಸೆಯ ಹೊರತಾಗಿಯೂ ಬಿಸಿಯೂಟ ಕಾರ್ಯಕ್ರಮ ಇನ್ನೂ ಆರಂಭಗೊಂಡಿಲ್ಲ ಎಂದು ಹೇಳಿದೆ.
ಜನವರಿ 23ರಿಂದ ಎಲ್ಲಾ ತರಗತಿಗಳನ್ನು ಆರಂಭಿಸಿ ಸರ್ಕಾರ ಬಿಸಿಯೂಟ ಆರಂಭಿಸಬೇಕು. ಒಂದು ವೇಳೆ ಸರ್ಕಾರ ನಮ್ಮ ಆಗ್ರಹವನ್ನು ಈಡೇರಿಸದೇ ಹೋದಲ್ಲಿ ಜನವರಿ 25 ರಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಆಗ್ರಹಿಸಿದ್ದಾರೆ.
ಬಿಸಿಯೂಟದ ಬದಲಾಗಿ ಸರ್ಕಾರ ಫುಡ್ ಕಿಟ್ ಗಳನ್ನು ನೀಡಿದ್ದರೂ ಕೂಡ ಅದರಲ್ಲಿ ಅಕ್ಕಿ, ಬೇಳೆಯನ್ನಷ್ಟೇ ನೀಡಲಾಗಿದೆ. ತರಕಾರಿ, ಹಾಲಿನ ಪುಡಿ ನೀಡಲಾಗಿಲ್ಲ. ಕೂಲಿಗೆ ತೆರಳಲುವ ಪೋಷಕರು ಮನೆಯಲ್ಲಿ ಆಹಾರವನ್ನು ತಯಾರಿಸುವುದಿಲ್ಲ. ಮಕ್ಕಳು ಆಹಾರವಿಲ್ಲದೆ ಸಮಸ್ಯೆ ಅನುಭವಿಸುತ್ತಿದ್ದಾರೆ. ಸರ್ಕಾರ ನೀಡುವ ಫುಡ್ ಕಿಟ್ ಗಳು ಉಪಯೋಗಕ್ಕೆ ಬರುವುದಿಲ್ಲ ಎಂದು ಪೋಷಕರೊಬ್ಬರು ಹೇಳಿದ್ದಾರೆ.
Recommended Video
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications