ಮುಂಬೈ ಪೊಲೀಸರ ವಶಕ್ಕೆ; ಹೈಕೋರ್ಟ್ ಮೊರೆ ಹೋದ ರವಿ ಪೂಜಾರಿ
ಬೆಂಗಳೂರು, ನವೆಂಬರ್ 26 : ತನ್ನನ್ನು ಮುಂಬೈಗೆ ಕರೆದುಕೊಂಡು ಹೋದರೆ ಜೀವಕ್ಕೆ ಅಪಾಯವಿದೆ ಎಂದು ಭೂಗತ ಪಾತಕಿ ರವಿ ಪೂಜಾರಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾನೆ. ರವಿ ಪೂಜಾರಿಗೆ ಭದ್ರತೆ ನೀಡುವಂತೆ ಮುಂಬೈ ಪೊಲೀಸರಿಗೆ ನ್ಯಾಯಾಲಯ ಸೂಚನೆ ನೀಡಿದೆ.
ರವಿ ಪೂಜಾರಿಯನ್ನು 10 ದಿನಗಳ ಕಾಲ ವಶಕ್ಕೆ ನೀಡುವಂತೆ ಮುಂಬೈ ಪೊಲೀಸರು ಬೆಂಗಳೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ವಶಕ್ಕೆ ನೀಡಿ ಆದೇಶ ಹೊರಡಿಸಿತ್ತು.
ಈ ಆದೇಶವನ್ನು ರವಿ ಪೂಜಾರಿ ಕರ್ನಾಟಕ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾನೆ. ಮುಂಬೈನಲ್ಲಿ ನನ್ನ ಜೀವಕ್ಕೆ ಬೆದರಿಕೆ ಇದೆ. ಶಬನಂ ಡೆವಲಪರ್ಸ್ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೀಮಿತವಾಗಿ ನನ್ನನ್ನು ಕರ್ನಾಟಕ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಹೇಳಿದ್ದಾನೆ.

ಮುಂಬೈನಲ್ಲಿ ರವಿ ಪೂಜಾರಿ ಮೇಲಿನ ಪ್ರಕರಣವೊಂದರ ವಿಚಾರಣೆ ಬಾಕಿ ಇದೆ. ಅದಕ್ಕಾಗಿ ಮುಂಬೈ ಪೊಲೀಸರು 10 ದಿನಗಳ ಕಾಲ ವಶಕ್ಕೆ ನೀಡುವಂತೆ ಕೇಳಿದ್ದರು. ಮುಂಬೈ ಪೊಲೀಸರು ವಶಕ್ಕೆ ತನ್ನನ್ನು ನೀಡುವುದು ಕಾನೂನು ಬಾಹಿರ ಎಂದು ಅರ್ಜಿಯಲ್ಲಿ ರವಿ ಪೂಜಾರಿ ಉಲ್ಲೇಖಿಸಿದ್ದಾನೆ.
ರವಿ ಪೂಜಾರಿಗೆ ಭದ್ರತೆ ನೀಡುವಂತೆ ಮುಂಬೈ ಪೊಲೀಸರಿಗೆ ಸೂಚನೆ ನೀಡಿರುವ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ನವೆಂಬರ್ 27ಕ್ಕೆ ಮುಂದೂಡಿದೆ. 2019ರ ಜನವರಿ 19ರಂದು ದಕ್ಷಿಣ ಆಫ್ರಿಕಾದ ಸೆನೆಗಲ್ನಲ್ಲಿ ರವಿ ಪೂಜಾರಿಯನ್ನು ಬಂಧಿಸಲಾಗಿತ್ತು.
ಕರ್ನಾಟಕ ಮತ್ತು ಮುಂಬೈನಲ್ಲಿ ರವಿ ಪೂಜಾರಿ ವಿರುದ್ಧ 120ಕ್ಕೂ ಅಧಿಕ ಪ್ರಕರಣಗಳಿವೆ. ಬೆಂಗಳೂರಿನ ಸಿಸಿಬಿ ಪೊಲೀಸರು ನಗರದಲ್ಲಿ ರವಿ ಪೂಜಾರಿ ವಿಚಾರಣೆ ನಡೆಸುತ್ತಿದ್ದರು. ರವಿ ಪೂಜಾರಿ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿ ಬಪ್ಪುತೋಟದ ನಿವಾಸಿ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ












Click it and Unblock the Notifications