ರಾಷ್ಟ್ರಪತಿ ಇದ್ದರೂ ಆಂಬ್ಯುಲೆನ್ಸ್ಗೆ ದಾರಿಮಾಡಿಕೊಟ್ಟ ಪಿಎಸ್ಐ
ಬೆಂಗಳೂರು, ಜೂನ್ 18 : ನಮ್ಮ ಮೆಟ್ರೋ ಉದ್ಘಾಟನೆಗೆಂದು ಬೆಂಗಳೂರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬಂದಿದ್ದಾಗ, ಅವರ ವಾಹನಕ್ಕಿಂತ ರೋಗಿಯನ್ನು ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಸಬ್ ಇನ್ಸ್ಪೆಕ್ಟರ್ ನಿಜಲಿಂಗಪ್ಪ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ.
ವಿಐಪಿಗಳು, ವಿವಿಐಪಿಗಳು ಬಂದಾಗ, ರಸ್ತೆಯ ಮೇಲೆ ಆಂಬ್ಯುಲೆನ್ಸ್ ಸೈರನ್ ಹೊಡೆದುಕೊಳ್ಳುತ್ತಿದ್ದರೂ ಮೊದಲು ಪ್ರಾಶಸ್ತ್ಯ ಸಿಗುವುದೇ ವಿವಿಐಪಿಗಳಿಗೆ. ಆಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸತ್ತರೂ ಅಡ್ಡಿಯಿಲ್ಲ, ರಸ್ತೆಯನ್ನು ಬ್ಲಾಕ್ ಮಾಡಿ ವಿವಿಐಪಿಗಳಿಗೆ ದಾರಿಮಾಡಿ ಕೊಡಲಾಗುತ್ತದೆ.
ಅಂಥದ್ದರಲ್ಲಿ ಟ್ರಿನಿಟಿ ಜಂಕ್ಷನ್ ನಲ್ಲಿ ಪ್ರಣಬ್ ಮುಖರ್ಜಿಯವರು ವಾಹನ ಸಾಗುತ್ತಿದ್ದರೂ, ಅದನ್ನು ತಡೆದು ನಿಲ್ಲಿಸಿ ಆಂಬ್ಯುಲೆನ್ಸ್ ಸಾಗಲು ಅವಕಾಶ ಮಾಡಿಕೊಟ್ಟಿದ್ದಾರೆ ಹಲಸೂರು ಟ್ರಾಫಿಕ್ ಪೊಲೀಸ್ ಎಸ್ ಎಚ್ ನಿಜಲಿಂಗಪ್ಪ ಅವರು. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಒಂದೆಡೆ ಆಂಬ್ಯುಲೆನ್ಸ್ ಗೆ ದಾರಿಮಾಡಿಕೊಟ್ಟಿದ್ದಕ್ಕಾಗಿ ನಿಜಲಿಂಗಪ್ಪನವರಿಗೆ ಅಭಿನಂದನೆಗಳ ಸುರಿಮಳೆ ಸುರಿಯುತ್ತಿದ್ದರೆ, ಇದರಲ್ಲೇನಿದೆ ವಿಶೇಷ, ಅದು ಯಾವುದೇ ಟ್ರಾಫಿಕ್ ಪೊಲೀಸನ ಕರ್ತವ್ಯ ಎಂದು ವ್ಯಕ್ತಿಯೊಬ್ಬರು ಟ್ವೀಟಿಸಿದ್ದಾರೆ.
ವಸ್ತುಸ್ಥಿತಿಯೇನಿದೆಯೆಂದರೆ, ಈಗಿನ ಕಾಲದಲ್ಲಿ ಆಂಬ್ಯುಲೆನ್ಸ್ ಗೆ ಕೂಡ ದಾರಿಮಾಡಿ ಕೊಡುವುದು ಒಂದು ಹೆಗ್ಗಳಿಕೆಯಾಗಿಯೇ ಪರಿಗಣಿಸಲಾಗುತ್ತದೆ. ಆದರೂ, ಅಂಥ ಪರಿಸ್ಥಿತಿಯಲ್ಲಿ ರಾಷ್ಟ್ರಪತಿಯವರಿದ್ದರೂ ಆಂಬ್ಯುಲೆನ್ಸ್ ಗೆ ದಾರಿ ಮಾಡಿಕೊಟ್ಟಿದ್ದು ಹೆಗ್ಗಳಿಕೆಯೇ.
Our @blrcitytraffic wisely allowed an ambulance with patient seconds before @RashtrapatiBhvn convoy arrived. Kudos! @BangaloreMirror video pic.twitter.com/cud60A5276
— Anantha Subramanyam (@Ananthaforu) June 17, 2017
ಇದಕ್ಕೆ ಬೆಂಗಳೂರು ನಗರ ಆಯುಕ್ತ ಪ್ರವೀಣ್ ಸೂದ್ ಅವರು ಪ್ರತಿಕ್ರಿಯಿಸಿದ್ದು, ನೀವು ಹೇಳುವುದು ಸರಿ. ಆದರೆ, ಟ್ರಾಫಿಕ್ ಪೊಲೀಸರ ಕೆಲಸ ತಿಳಿದಷ್ಟು ಸುಲಭವಲ್ಲ. ರಸ್ತೆಯಲ್ಲಿ ಅಂದುಕೊಂಡಿದ್ದಕ್ಕಿಂತ ಪರಿಸ್ಥಿತಿ ಗೋಜಲಾಗಿರುತ್ತದೆ. ಆದರೂ, ನಮ್ಮನ್ನು ಅರ್ಥ ಮಾಡಿಕೊಂಡಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications