ಆಸ್ಪತ್ರೆಯಿಂದ ತೆವಳುತ್ತಲೇ ಎಸ್ಕೇಪ್ ಆಗಿದ್ದ ಸೈಕೋ ರಾಜ
ಬೆಂಗಳೂರು, ಏ.4: ಎಟಿಎಂ ಕಾವಲುಗಾರನ ಕೊಲೆ ಪ್ರಕರಣದಲ್ಲಿ ಪೊಲೀಸರಿಂದ ಕಾಲಿಗೆ ಗುಂಡೇಟು ತಿಂದಿದ್ದರೂ ಆಸ್ಪತ್ರೆ ಸೇರಿದ್ದ ಸೈಕೊ ರಾಜಾ ತೆವಳುತ್ತಲೇ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ತನ್ನ ಕಾವಲಿಗೆ ನಿಯೋಜಿಸಿದ್ದ ಭದ್ರತಾ ಸಿಬ್ಬಂದಿ ನಿದ್ರೆಯಲ್ಲಿದ್ದಾಗ ವಿಕ್ಟೋರಿಯಾ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ, ಆದರೆ ಕೆಲವೇ ಗಂಟೆಗಳಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯನ್ನು ಗಂಭೀರವಾಗಿಪರಿಗಣಿಸಿದ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರು ಕರ್ತವ್ಯಲೋಪಸ ಆರೋಪದಡಿ ಕುಮಾರಸ್ವಾಮಿ ಲೇಔಟ್ ಠಾಣೆಯ ಇಬ್ಬರು ಪೇದೆಗಳನ್ನು ಅಮಾನತುಗೊಳಿಸಿದ್ದಾರೆ.
ಕೊಲೆ ಆರೋಪಿಯಿಂದ ಪೊಲೀಸ್ ಮೇಲೆ ಕಲ್ಲು ತೂರಾಟ, ಪೊಲೀಸರಿಂದ ಫೈರಿಂಗ್
ಅಪರಾಧ ಕೃತ್ಯಗಳ ಹಿನ್ನೆಲೆಯಲ್ಲಿ ಮಾ.30ರಂದು ಕೋಣನಕುಂಟೆ ಡಬಲ್ ರಸ್ತೆಯಲ್ಲಿ ಗುಂಡು ಹಾರಿಸಿ ರಾಜೇಂದ್ರನನ್ನು ಬಂಧಿಸಿದ್ದ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು, ಬಳಿಕ ಆರೋಪಿಯನ್ನು ಚಿಕಿತ್ಸೆ ಸಲುವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು.
ಆತನ ಕಾಲಿಗೆ ಇಬ್ಬರು ಪೊಲೀಸ್ ಪೇದೆಗಳನ್ನು ನಿಯೋಜಿಸಲಾಗಿತ್ತು. ಬೆಳಗಿನ ಜಾವ 4.30ರಲ್ಲಿ ನಿದ್ರೆಗೆ ಜಾರಿದ್ದಾಗ ರಾಜೇಂದ್ರ ಎರಡು ಕಾಲುಗಳಿಗೆ ಗುಂಡು ಬಿದ್ದಿದ್ದರೈ ಲೆಕ್ಕಿದಸೆ ತೆವಳಿಕೊಂಡೇ ತಪ್ಪಿಸಿಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾದಕ ವ್ಯಸನಿಯಾದ ರಾಜೇಂದ್ರ, ಗಾಂಜಾ ಖರೀದಿಗೆ ಹಣ ಕೊಡಲಿಲ್ಲವೆಂದು ತನ್ನ ತಂಗಿಯನ್ನೇ ಜೀವಂತವಾಗಿ ಸುಟ್ಟಿದ್ದ.