ಹುಡುಗಿ ವಿಚಾರಕ್ಕೆ ಗಲಾಟೆ, ಬೆಂಗಳೂರಲ್ಲಿ ಪಿಯು ವಿದ್ಯಾರ್ಥಿ ಬರ್ಬರ ಹತ್ಯೆ
ಬೆಂಗಳೂರು, ಜನವರಿ 30: ಹುಡುಗಿಯ ವಿಚಾರಕ್ಕೆ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಎಂಟನೇ ಮೈಲಿ ಸಮೀಪ ಇಂದು ಬೆಳಗ್ಗೆ ನಡೆದಿದೆ.
ಎಂಟನೇ ಮೈಲಿ ಸಮೀಪವಿರುವ ಸೌಂದರ್ಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಹುಡುಗಿ ವಿಚಾರಕ್ಕೆ ಇಬ್ಬರು ಕಾಲೇಜಿನಲ್ಲೇ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ರಕ್ಷಿತ್ ಬ್ಯಾಗಿನಲ್ಲಿದ್ದ ಚಾಕು ತೆಗೆದು ದಯಾಸಾಗರ್ ಇರಿದಿದ್ದಾನೆ. ದಯಾಸಾಗರ್ ನನ್ನು ಸಹಪಾಠಿಗಳು ಹಾಗೂ ಅಧ್ಯಾಪಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತೀವ್ರ ರಕ್ತಸ್ರಾವ ಉಂಟಾಗಿ ದಯಾಸಾಗರ್ ಮೃತಪಟ್ಟಿದ್ದಾನೆ.
2 ವರ್ಷದ ಪ್ರೀತಿ ಎರಡೇ ನಿಮಿಷದಲ್ಲಿ ಯುವಕನ ಪ್ರಾಣವನ್ನೇ ಕಸಿಯಿತು
ರಕ್ಷಿತ್ (18) ತನ್ನ ಸಹಪಾಠಿ ದಯಾಸಾಗರ್ (18)ನನ್ನು ಚಾಕುಯಿಂದ ಇರಿದು ಕೊಲೆ ಮಾಡಿದ್ದಾನೆ. ದಯಾಸಾಗರ್ ಹಾಗೂ ರಕ್ಷಿತ್ ಇಬ್ಬರು ಪಿಯುಸಿ ವಿದ್ಯಾರ್ಥಿಗಳಾಗಿದ್ದು, ಸೌಂದರ್ಯ ಕಾಲೇಜಿನಲ್ಲಿ ಓದುತ್ತಿದ್ದರು. ದಯಾಸಾಗರ್ ವಿದ್ಯಾರ್ಥಿನಿಯೊಬ್ಬಳಿಗೆ ಮೆಸೇಜ್ ಮಾಡುತ್ತಿದ್ದನು. ಈ ಬಗ್ಗೆ ರಕ್ಷಿತ್ ಹಲವು ಬಾರಿ ಗುಂಪು ಕಟ್ಟಿಕೊಂಡು ದಯಾಸಾಗರ್ ಗೆ ವಾರ್ನ್ ಕೂಡ ಮಾಡಿದ್ದನು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಗುಂಟೆ ಪೊಲೀಸರು ರಕ್ಷಿತ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.