ಹ್ಯಾಟ್ರಿಕ್ ಜಯ ದಾಖಲಿಸಿದ ಪಿಸಿ ಮೋಹನ್ ರೈಲ್ವೆ ಸಚಿವರಾಗಲಿ!
ಕರ್ನಾಟಕದಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಭಾರತೀಯ ಜನತಾ ಪಕ್ಷದ ನಾಯಕರಿಗೆ ಬಿಜೆಪಿ ಹೈಕಮಾಂಡ್ ನಿಂದ ಈ ಬಾರಿ ಭರ್ಜರಿ ಉಡುಗೊರೆ ಕಾದಿದೆ ಎಂಬ ಮಾತುಗಳು ಕೇಳಿ ಬಂದಿದೆ. ಕೇಂದ್ರದಿಂದ ಪುನಃ ರಾಜ್ಯಕ್ಕೆ ಮರಳಿದ ಬಿಎಸ್ ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಸಿಕೊಳ್ಳುವುದರಿಂದ ಹಿಡಿದು ಅನೇಕ ಬದಲಾವಣೆಗಳು ಕರ್ನಾಟಕ ಬಿಜೆಪಿಯಲ್ಲಿ ಕಾಣಬಹುದು.
ಈ ನಡುವೆ ರಾಜ್ಯದ ಸಂಸದರ ಪೈಕಿ ಮೂರು ಬಾರಿ, ನಾಲ್ಕು ಬಾರಿ ಗೆಲುವು ಸಾಧಿಸಿದವರಿಗೆ ಹೆಚ್ಚಿನ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ಶುರುವಾಗಲಿದೆ.
ಈ ನಿಟ್ಟಿನಲ್ಲಿ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಮೂರನೇ ಬಾರಿಗೆ ಗೆದ್ದು ಹ್ಯಾಟ್ರಿಕ್ ಸಾಧಿಸಿದ ಪಿಸಿ ಮೋಹನ್ ಅವರಿಗೆ ಕೇಂದ್ರ ರೈಲ್ವೆ ಸಚಿವ ಸ್ಥಾನ ನೀಡುವಂತೆ ಕ್ಷೇತ್ರ ಜನತೆ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಅಭಿಯಾನ ಆರಂಭಿಸಿದ್ದಾರೆ.
ಬೆಂಗಳೂರಿಗೆ ಪೂರ್ಣಪ್ರಮಾಣದಲ್ಲಿ ಸಬ್ ಅರ್ಬನ್ ರೈಲು ತರಲು ಪಿಸಿ ಮೋಹನ್ ಅವರಿಂದ ಸಾಧ್ಯ. ಈ ಹಿಂದೆ ಅನಂತ್ ಕುಮಾರ್ ಅವರ ಜತೆಗೂಡಿ ಪಿಸಿ ಮೋಹನ್ ಅವರು ಈ ಬಗ್ಗೆ ದನಿಯೆತ್ತಿದ್ದರು. ಈಗ ಕ್ಷೇತ್ರಕ್ಕೆ ಹಾಗೂ ಇಡೀ ಬೆಂಗ್ಳೂರಿಗೆ ಇದ್ರಿಂದ ಅನುಕೂಲವಾಗಲಿದೆ ಎಂದು ಅಭಿಯಾನದ ಮೂಲಕ ಕೋರಲಾಗಿದೆ.

ಬೆಂಗಳೂರಿನ ಹೊರವಲಯಕ್ಕೂ ಅನುಕೂಲಕರ
ಮುಖ್ಯವಾಗಿ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗೆ ಸಬ್ ಅರ್ಬನ್ ರೈಲು ಅಗತ್ಯವಿದ್ದು, ಹೊರವರ್ತುಲ ರಸ್ತೆಗಳಲ್ಲಿರುವ ಪ್ರಮುಖ ಬಡಾವಣೆಗಳಿಗೂ ನಗರದ ಒಳ ವಲಯಕ್ಕೂ ಸಂಪರ್ಕ ಒದಗಿಸಲು ಇದು ಅವಶ್ಯಕ
ಬೆಂಗಳೂರಿನ ನಗರವ್ಯಾಪ್ತಿಯ ಪ್ರಮುಖ ಬಡಾವಣೆಗಳಿಗೆ ಸಂಪರ್ಕ ಒದಗಿಸಲು ಮೆಟ್ರೋ ರೈಲಿನ ವಿವಿಧ ಹಂತಗಳಿವೆ. ಆದರೆ, ಬೆಂಗಳೂರು ಸುತ್ತಲಿನ 50 ಕಿ.ಮೀ.ಗೂ ಅಧಿಕ ವ್ಯಾಪ್ತಿಯಲ್ಲಿರುವ ಉಪ ನಗರಗಳಿಗೆ ಸಂಪರ್ಕ ಕಲ್ಪಿಸುವ ರೈಲು ಯೋಜನೆ ಅಗತ್ಯವಿದೆ. ಹೀಗಾಗಿ ಸಬ್ ಅರ್ಬನ್ (ಕಮ್ಯೂಟರ್) ರೈಲು ಯೋಜನೆ ರೂಪಿಸಲಾಗಿದೆ. ಇದಲ್ಲದೆ, ಪ್ರಸ್ತುತ ಯೋಜನೆಯಂತೆ ಮಂಡ್ಯ, ತುಮಕೂರಿಗೂ ರೈಲು ಸಂಪರ್ಕ ಸಿಗಲಿದೆ.

ನಾಗರೀಕ ಸಮಿತಿಯಿಂದ ನಿರಂತರ ಒತ್ತಾಯ
ವಿಜಯನಗರದಿಂದ ವೈಟ್ ಫೀಲ್ಡ್ ನಿಂದ ಬಿಎಂಟಿಸಿ ಮೂಲಕ ಹೋಗುವುದಕ್ಕಿಂತ ರೈಲಿನಲ್ಲಿ 35 ನಿಮಿಷಗಳ ನಗರ ರೈಲ್ವೆ ನಿಲ್ದಾಣದಿಂದ ವೈಟ್ ಫೀಲ್ಡ್ ಗೆ ಕ್ರಮಿಸಬಹುದು. ಸರಿ ಸುಮಾರು 25,000ಕ್ಕೂ ಅಧಿಕ ಮಂದಿ ಲೋಕಲ್ ರೈಲು ಬಳಕೆದಾರರಂತೆ ಗುರುತಿಸಿಕೊಂಡಿದ್ದಾರೆ. ಈ ವ್ಯವಸ್ಥೆಯಲ್ಲಿ ಸಬ್ ಅರ್ಬನ್ ರೈಲು ಪರಿಚಯಿಸಿದರೆ ನಾಗರಿಕರಿಗೆ ಅನುಕೂಲವಾಗುತ್ತದೆ ಎಂದು ನಾಗರಿಕ ಸಮಿತಿಯ ಮಹೇಶ್ ಎಂ ವಿವರಿಸಿದ್ದಾರೆ.

ಎಲ್ಲಾ ಸರ್ಕಾರಗಳಿಂದಲೂ ಯೋಜನೆ ಬಗ್ಗೆ ತಾತ್ಸಾರ
ಬೆಂಗಳೂರಿನಲ್ಲಿನ ರೈಲು ನಿಲ್ದಾಣಗಳ ಮೂಲಕ ಬೇರೆ ನಗರಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದ್ದು, ಒಟ್ಟು 204 ಕಿ.ಮೀ. ಉದ್ದದ 15 ಮಾರ್ಗಗಳು ಇದರಲ್ಲಿ ಬರಲಿವೆ. ಯೋಜನೆಯ ವೆಚ್ಚ 8.5 ಸಾವಿರ ಕೋಟಿ ರೂ. ಎಂದು ಅಂದಾಜಿಸಲಾಗಿದೆ.ರಾಜ್ಯ ಭೂ ಸಾರಿಗೆ ನಿರ್ದೇಶನಾಲಯದ ಪ್ರಸ್ತಾವನೆಯಂತೆ ಯೋಜನೆಗೆ ರಾಜ್ಯ ಸರ್ಕಾರ 2013ರಲ್ಲೇ ಅನುಮೋದನೆ ನೀಡಲಾಗಿದೆ.ಆದರೆ, ಯೋಜನೆ ಮಂಜೂರಾತಿ ಮಾಡಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ.
|
ನಗರದ ವಾಹನ ದಟ್ಟಣೆಗೆ ಪರಿಹಾರ
ಬೆಂಗಳೂರು ನಗರದ ವಾಹನ ದಟ್ಟಣೆಯನ್ನು ಸಬ್ ಅರ್ಬನ್ ರೈಲಿನ ಮೂಲಕ ಪರಿಹರಿಸಬಹುದು. ಸಬ್ ಅರ್ಬನ್ ರೈಲಿಗೆ ಎಲಿವೇಟೆಡ್ ರೈಲ್ವೇ ಸಂಪರ್ಕ ಜಾಲವನ್ನು ಆಯ್ಕೆ ಮಾಡಿಕೊಂಡಿರುವುದರಿಂದ ಯೋಜನೆಗೆ ಸ್ವಾಧೀನ ಪಡಿಸಿಕೊಳ್ಳಬೇಕಾದ ಭೂಮಿಯ ಹಣ ಉಳಿತಾಯವಾಗಲಿದೆ. ಜತೆಗೆ ಸಮಯವೂ ಉಳಿತಾಯವಾಗಲಿದೆ. ಸಬ್ ಅರ್ಬನ್ ರೈಲ್ವೇಯ 160ಕಿಲೋಮೀಟರ್ ಗಳಲ್ಲಿ 68 ಕಿಲೋಮೀಟರ್ ನ್ನು ಎಲೆವೇಟೆಡ್ ಮಾಡಲು ನಿರ್ಧರಿಸಲಾಗಿದೆ. ಸಬ್ ಅರ್ಬನ್ ರೈಲಿನಲ್ಲಿ ಪ್ರತಿದಿನ 25-30 ಲಕ್ಷ ಜನರು ಪ್ರಯಾಣಿಸಬಹುದಾಗಿದೆ ಎಂದು ರೈಲ್ವೇ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯಪಟ್ಟಿದ್ದಾರೆ.
|
ಪಿಸಿ ಮೋಹನ್ ಗೆ ಶುಭಹಾರೈಸಿದ ನಾಗರಿಕರು
ಪಿಸಿ ಮೋಹನ್ ಗೆ ಶುಭಹಾರೈಸಿದ ನಾಗರಿಕರು, ಬಹುಕಾಲದ ಬೇಡಿಕೆಗಳತ್ತ ಗಮನ ಹರಿಸುವಂತೆ ಕೇಳಿಕೊಂಡಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications