ಪಬ್ ಗಳಲ್ಲಿ ಶುಕ್ರವಾರದಿಂದ ಸಂಗೀತ ಬಂದ್ ಆದರೆ ಇದೇ ಕಾರಣ...
Recommended Video

ಬೆಂಗಳೂರು, ಜುಲೈ 12 : ಅಗತ್ಯ ಅನುಮತಿ ಪಡೆಯದೆ ಲೈವ್ ಅಥವಾ ರೆಕಾರ್ಡ್ ಮಾಡಿದ ಸಂಗೀತವನ್ನು ಕೇಳಿಸುತ್ತಿರುವ ಪಬ್ ಗಳು ಶುಕ್ರವಾರದಿಂದ ಅದನ್ನು ನಿಲ್ಲಿಸಬೇಕು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ನೋಟಿಸ್ ಜಾರಿ ಮಾಡಿದ್ದಾರೆ.
ಈ ಬಗ್ಗೆ ಕಮಿಷನರ್ ಟಿ.ಸುನೀಲ್ ಕುಮಾರ್ ಮಾಧ್ಯಮವೊಂದರ ಜತೆ ಮಾತನಾಡಿ, ನಾವು ಸಮಯಾವಕಾಶ ನೀಡಿದ್ದೆವು. ಪರವಾನಗಿ ಪಡೆದುಕೊಳ್ಳಲು ಸೂಚನೆ ಕೊಟ್ಟಿದ್ದೆವು. ಈಗ ಯಾರು ನಮ್ಮ ನಿಯಮಾವಳಿ ಅನ್ವಯ ಪರವಾನಗಿ ಪಡೆದಿಲ್ಲವೋ ಅವರೆಲ್ಲ ಸಂಗೀತ ಹಾಕುವಂತಿಲ್ಲ ಎಂದು ಆದೇಶ ನೀಡಿದ್ದೇವೆ ಎಂದಿದ್ದಾರೆ.
ಆದರೆ, ಬೆಂಗಳೂರಿನ ಪಬ್ ವೊಂದರ ಸಿಬ್ಬಂದಿ ತಮ್ಮ ಕಷ್ಟ ಹೀಗೆ ಹೇಳಿಕೊಂಡಿದ್ದಾರೆ: ಕೆಲವು ಇಲಾಖೆ ಬಳಿ ನಿರಾಕ್ಷೇಪಣಾ ಪತ್ರಕ್ಕೆ ಅರ್ಜಿ ಹಾಕಿಕೊಂಡಿದ್ದೀವಿ. ಕಟ್ಟಡದ ಮಾಲೀಕರು ಒಂದು ಪ್ರಮಾಣ ಪತ್ರ ನೀಡಬೇಕಿದೆ. ಅವುಗಳಿಂದ ಪೊಲೀಸರು ತಿಳಿಸಿದ ನಿಯಮಗಳನ್ನು ಅನುಸರಿಸಲು ನಮಗೆ ತಡವಾಗುತ್ತಿದೆ ಎಂದಿದ್ದಾರೆ.

ಆದರೆ, ಬಿಬಿಎಂಪಿ ಪೂರ್ವ ವಲಯದ ಜಂಟಿ ಆಯುಕ್ತರು ಹೇಳುವ ಪ್ರಕಾರ, ಪೊಲೀಸರಿಂದ ಅವರಿಗಿನ್ನೂ ಮಾಹಿತಿ ಬಂದಿಲ್ಲ. ಆ ಬಗ್ಗೆ ಆದೇಶ ಪತ್ರ ಸಿಕ್ಕ ನಂತರ ಈ ನಿಯಮ ಪಾಲನೆ ಮಾಡಲಾಗುತ್ತದೆ ಎಂದಿದ್ದಾರೆ.
ಪರವಾನಗಿ ಇಲ್ಲದೆ ಸಂಗೀತ ಹಾಕುತ್ತಿರುವ ಪಬ್ ಗಳಿಗೆ ಪೊಲೀಸರು ನೋಟಿಸ್ ನೀಡಲು ಆರಂಭಿಸಿದ್ದರು. ಏಕೆಂದರೆ, ಅಂಥ ಪಬ್ ಗಳಿಗೆ ಪರವಾನಗಿ ಕಡ್ಡಾಯ ಮಾಡಿ, ಈ ವರ್ಷದ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಸಾರ್ವಜನಿಕ ಮನರಂಜನೆಗಾಗಿ ಯಾವುದೇ ರೀತಿಯ ಸಂಗೀತ ಕೇಳಿಸುವ ಪಬ್ ಗಳು ಆ ಸ್ಥಳದ ಆಕ್ಯುಪೆನ್ಸಿ ಸರ್ಟಿಫಿಕೇಟ್ ಹಾಗೂ ಫೈರ್ ಸೇಫ್ಟಿ ವಿಭಾಗದಿಂದ ನಿರಾಕ್ಷೇಪಣಾ ಪತ್ರ ಕಡ್ಡಾಯವಾಗಿ ಪಡೆದಿರಬೇಕು.
ನಿರ್ದಿಷ್ಟ ಅವಧಿಯೊಳಗೆ ಒಂದು ವೇಳೆ ಈ ದಾಖಲಾತಿಗಳನ್ನು ನೀಡದಿದ್ದರೆ ಸಂಗೀತ ಹಾಕಲು ಅಥವಾ ಕೇಳಿಸಲು ಅವಕಾಶ ನೀಡುವುದಿಲ್ಲ ಎಂದು ಕಮಿಷನರ್ ತಿಳಿಸಿದ್ದರು. ಕೆಲವು ಪಬ್ ಗಳ ಮಾಲೀಕರು ಸುಪ್ರೀಂ ಕೋರ್ಟ್ ಆದೇಶಕ್ಕೆ ವಿನಾಯಿತಿ ನೀಡುವಂತೆ ಕರ್ನಾಟಕ ಹೈ ಕೋರ್ಟ್ ಮೆಟ್ಟಿಲೇರಿದ್ದರು. ಆಗ ಅಗತ್ಯ ದಾಖಲಾತಿಗಳನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.
-
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications