ಹೆಚ್ಚಾದ ಆನ್ ಲೈನ್ ವ್ಯವಹಾರ; ಪೂಜಾ ಸಾಮಾಗ್ರಿ ವ್ಯಾಪಾರ ಕುಸಿತ
ಬೆಂಗಳೂರು, ಅಕ್ಟೋಬರ್ 07 : ಕೋವಿಡ್ ಲಾಕ್ ಡೌನ್ ಬಳಿಕ ಹಲವು ಕ್ಷೇತ್ರಗಳಿಗೆ ಅಪಾರವಾದ ನಷ್ಟ ಉಂಟಾಗಿದೆ. ಅನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದರೂ ವ್ಯಾಪಾರ ಲಾಭ ತಂದುಕೊಡುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದಾಗಿ ವ್ಯಾಪಾರಿಗಳು ನಷ್ಟ ಅನುಭವಿಸುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ ಪೂಜಾ ಸಾಮಾಗ್ರಿಗಳ ವ್ಯಾಪಾರ ಕುಸಿತವಾಗಿದೆ. ಲಾಕ್ ಡೌನ್ ಸಮಯದಲ್ಲಿ ದೇವಾಲಯಗಳು ಮುಚ್ಚಿದ್ದರಿಂದ ವ್ಯಾಪಾರಿಗಳು ನಷ್ಟ ಅನುಭವಿಸಿದ್ದರು. ಯುಗಾದಿ, ಗಣೇಶ ಚತುರ್ಥಿ ಸೇರಿದಂತೆ ಪ್ರಮುಖ ಹಬ್ಬಗಳ ಸಂದರ್ಭದಲ್ಲಿ ಕೋವಿಡ್ ಭೀತಿ ಇತ್ತು.
ದೇವಾಲಯಗಳ ಬಳಿ ಪೂಜಾ ಸಾಮಾಗ್ರಿಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ಈಗಲೂ ಸರಿಯಾಗಿ ವ್ಯಾಪಾರ ನಡೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಜನರು ಮಾರುಕಟ್ಟೆ ಪ್ರದೇಶಗಳತ್ತ ಬರುತ್ತಿಲ್ಲ. ಆನ್ಲೈನ್ ಸೇವೆಗಳ ಮೂಲಕ ಖರೀದಿಗೆ ಮುಂದಾಗುತ್ತಿದ್ದಾರೆ.

"ದೇವಾಲಯಗಳು ಮುಚ್ಚಿದ್ದರಿಂದ ಜನರು ಮನೆಯಲ್ಲಿಯೇ ಪೂಜೆಗಳನ್ನು ಮಾಡಲು ಆರಂಭಿಸಿದರು. ಇದರಿಂದಾಗಿ ವ್ಯಾಪಾರ ಕುಸಿತವಾಯಿತು" ಎಂದು ಪೂಜಾ ಸಾಮಾಗ್ರಿಗಳ ವ್ಯಾಪಾರಿಗಳು ಹೇಳಿದ್ದಾರೆ.
"ಜನರು ಈಗ ಆನ್ಲೈನ್ ಮೂಲಕ ಖರೀದಿ ಮಾಡುವುದು ಸುರಕ್ಷಿತ ಎಂದು ತಿಳಿದಿದ್ದಾರೆ. ಅಲ್ಲಿಯೇ ಖರೀದಿ ಮಾಡುತ್ತಿದ್ದಾರೆ. ಆದ್ದರಿಂದ, ವ್ಯಾಪಾರ ಕುಸಿತ ಕಂಡಿದೆ"ಎಂದು ಮತ್ತೊಬ್ಬರು ವ್ಯಾಪಾರಿಗಳು ಎಎನ್ಐಗೆ ಹೇಳಿಕೆ ನೀಡಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ ಬಾಗಿಲು ಮುಚ್ಚಿದ್ದ ದೇವಾಲಯಗಳು ಈಗ ಬಾಗಿಲಿ ತೆರೆದಿವೆ. ಆದರೆ, ಧಾರ್ಮಿಕ ಕಾರ್ಯಕ್ರಮ, ಜಾತ್ರೆಗಳನ್ನು ನಡೆಸಲು ಅನುಮತಿಯನ್ನು ನೀಡಿಲ್ಲ.
ಮಂಗಳವಾರವೂ ಬೆಂಗಳೂರು ನಗರದಲ್ಲಿ 5012 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 2,57,241ಕ್ಕೆ ಏರಿಕೆಯಾಗಿದೆ.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ









Click it and Unblock the Notifications