ಒಂದೇ ಶಾಲೆಯಿಂದ ಕಾಣೆಯಾಗಿದ್ದ ಅಪ್ರಾಪ್ತೆಯರು ಪತ್ತೆ: ಬಾಲಕಿಯರ ರೋಚಕ ಜರ್ನಿ- ಲವ್ ಕಹಾನಿ
ಬೆಂಗಳೂರು, ಸೆಪ್ಟೆಂಬರ್ 27: ಒಂದೇ ಶಾಲೆಯ ಮೂವರು ಬಾಲಕಿಯರು ಕಾಣೆಯಾಗಿದ್ದು ಆತಂಕಕ್ಕೆ ಕಾರಣವಾಗಿತ್ತು. 20 ದಿನದ ಬಳಿಕ ಕೊನೆಗೂ ಪುಲಕೇಶಿನಗರ ಪೊಲೀಸರು ತಮಿಳುನಾಡಿನ ಚೆನ್ನೈನಲ್ಲಿ ಪತ್ತೆಹಚ್ಚಿ ಬಾಲಕಿಯರನ್ನು ನಗರಕ್ಕೆ ಕರೆತಂದಿದ್ದಾರೆ. ಬಾಲಕಿಯರ ರೋಚಕ ಪ್ರಯಾಣ ಮತ್ತು ಪ್ರೇಮಕತೆಯ ವಿವರ ಇಲ್ಲಿದೆ.
ತಮಿಳುನಾಡಿಗೆ ತೆರಳಿದ್ದ ಮೂವರು ಬಾಲಕಿಯರ ಪೈಕಿ ಇಬ್ಬರು ಪ್ರೀತಿಸಿ ಮದುವೆ ಮಾಡಿಕೊಳ್ಳಲು ಸಿದ್ಧತೆ ನಡೆಸಿಕೊಂಡಿದ್ದರು ಎಂಬ ವಿಚಾರ ಗೊತ್ತಾಗಿದೆ. ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಮೂವರು ವಿದ್ಯಾರ್ಥಿಯರು ವ್ಯಾಸಂಗ ಮಾಡುತ್ತಿದ್ದರು. ಇಬ್ಬರು ಶಾಲಾ ಹಾಸ್ಟೆಲ್ನಲ್ಲಿ ವಾಸ್ತವ್ಯ ಹೂಡಿದ್ದರೆ ಮತ್ತೋರ್ವ ಬಾಲಕಿ ಮನೆಯಿಂದಲೇ ಶಾಲೆಗೆ ತೆರಳುತ್ತಿದ್ದರು. 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಗೆ ತಂದೆ-ತಾಯಿ ಇರಲಿಲ್ಲ.
ಇನ್ನು 9 ನೇ ತರಗತಿ ಓದುತ್ತಿದ್ದ ಮತ್ತೋರ್ವ ಬಾಲಕಿಗೆ ತಾಯಿ ಇರಲಿಲ್ಲ. ಇಬ್ಬರು ಸಹ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದರು. ಇಬ್ಬರು ನಡುವೆ ಕಾಲಕ್ರಮೇಣ ಪ್ರೀತಿ ಮೊಳಕೆ ಹೊಡೆದಿತ್ತು. ಕಾಣೆಯಾಗಿದ್ದ ಮೂರನೇ ಬಾಲಕಿಗೆ ಓದುವ ವಿಷಯವಾಗಿ ಪೋಷಕರು ಬೈದು ಬೈದಿದ್ದರು. ಮೂವರು ಬಾಲಕಿಯರು ಮಾತನಾಡಿಕೊಂಡು ಊರು ಬಿಡಲು ನಿರ್ಧರಿಸಿದ್ದರು. ಒಂದೇ ಶಾಲೆಯಲ್ಲಿ ಓದುತ್ತಿದ್ದ ಮೂವರು ಬಾಲಕಿಯರ ಕಣ್ಮರೆ ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ಇದೀಗ ತಮಿಳುನಾಡಿನಲ್ಲಿ ಬಾಲಕಿಯರು ಸಿಕ್ಕಿದ್ದು ಮರಳಿ ಗೂಡಿಗೆ ಸೇರಿದ್ದಾರೆ.

ಗೆಳತಿಯರಿಂದ 21 ಸಾವಿರ ಸಂಗ್ರಹಿ
ಅಪ್ರಾಪ್ತ ಬಾಲಕಿಯರು ಮನೆ ಬಿಡಲು ತೀರ್ಮಾನವನ್ನು ಮಾಡಿದ್ದರು. ಮನೆಯಲ್ಲಿ ಕಷ್ಟವಿದೆ ಎಂದು ಸ್ನೇಹಿತೆಯರು ಹಾಗೂ ಪರಿಚಯಸ್ಥರಿಂದ ಸುಮಾರು 21 ಸಾವಿರ ರೂಪಾಯಿ ಹಣ ಸಂಗ್ರಹಿಸಿದ್ದರು. ವ್ಯವಸ್ಥಿತ ಸಂಚಿನಂತೆ ಇದೇ ತಿಂಗಳು 6ರಂದು ಮಧ್ಯಾಹ್ನ ಹಾಸ್ಟೆಲ್ ವಾರ್ಡನ್ ಹಾಗೂ ಸೆಕ್ಯೂರಿಟಿ ಕಣ್ತಪ್ಪಿಸಿ ಲಗೇಜ್ ಸಮೇತ ತೊರೆದಿದ್ದರು. ಮಾರ್ಗ ಮಧ್ಯೆ ಮತ್ತೋರ್ವ ಬಾಲಕಿ ಕೂಡಿಕೊಂಡು ಆಟೋ ಮೂಲಕ ಸೇವಾನಗರಕ್ಕೆ ತೆರಳಿದ್ದರು. ಅಂಗಡಿಯಲ್ಲಿ ಬಟ್ಟೆ ಖರೀದಿಸಿ ಕಂಟ್ಮೋನೆಂಟ್ ರೈಲು ನಿಲ್ದಾಣಕ್ಕೆ ಬಂದಿದ್ದಾರೆ. ವೇಲಾಂಗಣಿ ತೆರಳಲು ತೀರ್ಮಾನಿಸಿದ್ದ ಬಾಲಕಿಯರು ಗೊತ್ತಿಲ್ಲದೆ ಚೆನ್ನೈ ರೈಲು ಹತ್ತಿ ಸೆ.7ರಂದು ಇಳಿದಿದ್ದಾರೆ.

ಬೆಂಗಳೂರಿಗೆ ರೈಲು ಹತ್ತಿಸಿದ ಚನ್ನೈ ಪೊಲೀಸರು
ಚೆನ್ನೈ ರೈಲ್ವೇ ನಿಲ್ದಾಣದಲ್ಲಿ ಸಂಜೆವರೆಗೂ ಕಾಲ ಕಳೆದಿದ್ದಾರೆ. ಅನುಮಾನಸ್ಪಾದವಾಗಿ ಓಡಾಡುತ್ತಿದ್ದ ಬಾಲಕಿಯರನ್ನು ಕಂಡ ರೈಲ್ವೇ ಪೊಲೀಸರು ಪ್ರಶ್ನಿಸಿದ್ದಾರೆ. ವಿಚಾರ ತಿಳಿದುಕೊಂಡು ಮತ್ತೆ ಬೆಂಗಳೂರು ರೈಲಿಗೆ ಹತ್ತಿಸಿದ್ದಾರೆ.
ಮತ್ತೊಂದೆಡೆ ಮಕ್ಕಳು ಕಾಣೆಯಾಗಿರುವುದಾಗಿ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಇನ್ಸ್ಪೆಕ್ಟರ್ ಕಿರಣ್ ನೇತೃತ್ವದ ತಂಡ ವೇಲಾಂಗಣಿ ತೆರಳಿ ಶೋಧ ನಡೆಸುತಿತ್ತು. ರೈಲಿನಲ್ಲಿ ಕಂಟ್ಮೋನೆಂಟ್ ರೈಲು ನಿಲ್ದಾಣಕ್ಕೆ ಬಂದ ಬಾಲಕಿಯರು ಪೊಲೀಸರು ಕಾಣೆಯಾಗಿರುವ ತಮ್ಮ ಭಾವಚಿತ್ರಗಳನ್ನು ಅಂಟಿಸಿದ್ದ ಪ್ರಕಟಣೆ ಗಮನಿಸಿದ್ದಾರೆ. ಇದರಿಂದ ಅಲರ್ಟ್ ಆದ ಬಾಲಕಿಯರು ಮತ್ತೆ ಚೆನ್ನೈ ತೆರಳಲು ನಿರ್ಧರಿಸಿ ಗೊತ್ತಿಲ್ಲದೆ ದೆಹಲಿ ರೈಲಿಗೆ ಹತ್ತಿದ್ದಾರೆ. ಮಾರ್ಗಮಧ್ಯೆ ಮಾರ್ಗ ಬದಲಾಯಿಸಿ ಹೇಗೋ ಚೆನ್ನೈ ಸೇರಿದ್ದಾರೆ.

ಬಾಲಕಿಯೊಬ್ಬಲು ನೌಕರಿಗೆ ಸೇರಿದ್ದಳು
ಚೆನ್ನೈನಲ್ಲಿ ಬಾಲಕಿಯರು ಆಟೋ ಚಾಲಕನ ಬಳಿ ಹೋಗಿ ನಾವು ಅನಾಥೆಯರು. ಹಾಸ್ಟೆಲ್ನಲ್ಲಿ ನಮಗೆ ಟಾರ್ಚರ್ ಕೊಡುತ್ತಿದ್ದಾರೆ ಎಂದು ತಮಿಳಿನಲ್ಲಿ ಮಾತನಾಡಿದ್ದಾರೆ. ನಿಜವೆಂದು ಆಟೋ ಚಾಲಕ ತಮ್ಮ ಮನೆ ಹತ್ತಿರ ಮನೆ ಮಾಡಿಕೊಟ್ಟಿದ್ದಾನೆ. ಇದಕ್ಕೂ ಮುನ್ನ ತೆಗೆದುಕೊಂಡು ಬಂದಿದ್ದ 20 ಸಾವಿರ ಹಣವನ್ನು ಕಳೆದುಕೊಂಡಿದ್ದರು. ಉಳಿದ ಅಲ್ಪ ಸ್ವಲ್ಪ ಹಣದಲ್ಲೇ ಮೊಬೈಲ್ ಖರೀದಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಾಣೆಯಾಗಿ ಕಳೆದ 20 ದಿನ ಕಳೆದರೂ ಬಾಲಕಿಯರು ಇರುವಿಕೆ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿರಲಿಲ್ಲ. ಈ ನಡುವೆ ಪೈಕಿ ಓರ್ವ ಬಾಲಕಿಯು ಕೆಲಸಕ್ಕೆ ಹೋಗುತ್ತಿದ್ದರು. ಮತ್ತೊರ್ವ ಬಾಲಕಿಯು ಹುಡುಗನ ರೀತಿಯಲ್ಲಿ ಓಡಾಡುತ್ತಿದ್ದಳು. ಮುಂದೆ ಮದುವೆಯಾಗಲು ಇಬ್ಬರು ಬಾಲಕಿಯರು ಸಿದ್ದತೆ ನಡೆಸಿಕೊಂಡಿದ್ದರು. ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

ಅಪ್ಪನಿಗೆ ಕೊಟ್ಟ ಮಿಸ್ಡ್ ಕಾಲ್ ಸುಳಿವು
ಬಾಲಕಿಯರು ಯಾರಿಗಾದರು ಪೋನ್ ಮಾಡಬೇಕಾದರೆ ಸ್ಥಳೀಯ ಕಾಯಿನ್ ಬೂತ್ ನಿಂದ ಕರೆ ಮಾಡಿ ಮಾತನಾಡುತ್ತಿದ್ದರು. ಸತತವಾಗಿ ಶೋಧ ನಡೆಸಿದರೂ ಬಾಲಕಿಯರ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿರಲಿಲ್ಲ. ಈ ನಡುವೆ ಖರೀದಿಸಿದ್ದ ಹೊಸ ಮೊಬೈಲ್ ನಲ್ಲಿ ತಂದೆಗೆ ಬಾಲಕಿಯು ಮಿಸ್ ಕಾಲ್ ಕೊಟ್ಟಿದ್ದರು. ಮತ್ತೆ ಕರೆ ಮಾಡಿದರೂ ಮಾತನಾಡಿರಲಿಲ್ಲ. ಈ ಬಗ್ಗೆ ಪೊಲೀಸರಿಗೆ ಪೋಷಕರು ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾಗಿ ಚೆನ್ನೈಗೆ ತೆರಳಿ ಬಾಲಕಿಯರನ್ನು ಪತ್ತೆ ಹಚ್ಚಿ ನಗರಕ್ಕೆ ಕರೆತಂದಿದ್ದಾರೆ. ಬಾಲಕಿಯ ಪೋಷಕರು ಹೈಕೋರ್ಟ್ ಗೆ ಹೇಬಿಯಸ್ ಅರ್ಜಿ ಹಾಕಿದ್ದರ ಹಿನ್ನೆಲೆಯಲ್ಲಿ ವಿಚಾರಣೆ ಮುಗಿಸಿ ಇಂದು ಮೂವರನ್ನು ಕೋರ್ಟ್ ಮುಂದೆ ಹಾಜರುಪಡಿಸುವುದಾಗಿ ಪೊಲೀಸ್ ಮೂಲಗಳಿಂದ ತಳಿದುಬಂದಿದೆ.
-
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications