Bengaluru Pulse Polio: ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾಕರಣ: ಪೋಷಕರು ಗಮನಿಸಿ
ಬೆಂಗಳೂರು, ಮಾರ್ಚ್ 02: ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಇದೇ ತಿಂಗಳು ಶುರುವಾಗಲಿದೆ. ಸಿಹಿ ಸುದ್ದಿ ಏನೆಂದರೆ ಭಾರತದಲ್ಲಿ 2011 ರಿಂದ ಯಾವುದೇ ಪೋಲಿಯೊ ಪ್ರಕರಣಗಳು ವರದಿಯಾಗಿಲ್ಲ ಎಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಆರೋಗ್ಯವೇ ಭಾಗ್ಯ, ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು, ಪೋಲಿಯೊ ಒಂದು ಭಯಾನಕ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟುಮಾಡುತ್ತದೆ. ಈ ರೋಗ 5 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ.

ಭಾರತದಲ್ಲಿ ಕಳೆದ ಒಂದು ದಶಕದಲ್ಲಿ ಯಾವುದೇ ಪೋಲಿಯೊ ಪ್ರಕರಣಗಳು ವರದಿಯಾಗಿರುವುದಿಲ್ಲ. ಭಾರತ ದೇಶವು ಪೋಲಿಯೊ ಮುಕ್ತ ರಾಷ್ಟ್ರ ಎಂದು 2014 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ. ಆದರೂ ಕೂಡ ಪಕ್ಕದ ನೆರೆಯ ದೇಶಗಳಾದ ಪಾಕಿಸ್ತಾನ, ಆಫ್ಘಾನಿಸ್ತಾನ ದೇಶಗಳಲ್ಲಿ 2024 ರಲ್ಲಿ 12 ಪ್ರಕರಣಗಳು ಕಂಡುಬಂದಿದೆ ಎಂದು ವರದಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪಾಲಿಕೆಯ ಆರೋಗ್ಯ ಇಲಾಖೆಯಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಅತ್ಯಂತ ಯಶಸ್ವಿಯಾಗಿ ಹಾಗೂ ಗುಣಾತ್ಮಕವಾಗಿ ನಡೆಸಲು ಕರ್ನಾಟಕ ಆರೋಗ್ಯ ಇಲಾಖೆ ನಿರ್ಧರಿಸಿದೆ.

ಮಾರ್ಚ್ 03ರಿಂದ 06ರ ತನಕ ಕಾರ್ಯಕ್ರಮ
ನಾಳೆ ಭಾನುವಾರ ಮಾರ್ಚ್ 03ರಿಂದ 06ರವರೆಗೆ ಪಲ್ಸ್ ಪೊಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಬಿಬಿಎಂಪಿ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ.
ಸಾರ್ವಜನಿಕ ಆರೋಗ್ಯ ವಿಭಾಗದ ಅಡಿಯಲ್ಲಿ ಬರುವ 145 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಗೂ 228 ನಮ್ಮ ಕ್ಲಿನಿಕ್ಗಳಲ್ಲಿ, ಔಷಧಾಲಯಗಳು, ಅಂಗನವಾಡಿ ಕೇಂದ್ರಗಳು, ಶಾಲೆಗಳಲ್ಲಿ ಹಾಗೂ ಸ್ಥಿರ ಮತ್ತು ಸಂಚಾರಿ ತಂಡಗಳನ್ನು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸ್ವಯಂ ಸೇವಾ ಸಂಸ್ಥೆಯ ಆಸ್ಪತ್ರೆಗಳು, ಮಾಲ್ಗಳು, ಖಾಸಗಿ ನರ್ಸಿಂಗ್ ಹೋಮ್ ಗಳು, ವೈದ್ಯಕೀಯ ಮಹಾವಿದ್ಯಾಲಯ, ಪ್ರಮುಖ ಉದ್ಯಾನವನಗಳು, ಮೆಟ್ರೋ ನಿಲ್ದಾಣ ಇನ್ನು ಮುಂತಾದ ಪ್ರಮುಖ ಜನನಿಬಿಡ ಪ್ರದೇಶಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಇಲಾಖೆ ಪ್ರಕಟಣೆ ಮಾಹಿತಿ ನೀಡಿದೆ.
ಮಕ್ಕಳ ಸಂಖ್ಯೆ: ಪೊಲಿಯೊ ಕಾರ್ಯಕ್ರಮದ ವಿವರ
* 0-5 ವರ್ಷದ ಮಕ್ಕಳ ಸಂಖ್ಯೆ : c,12,998
* ಬೂತ್ಗಳ ಸಂಖ್ಯೆ: 3403
* ಸ್ಥಿರ ತಂಡಗಳು: 545
* ಸಂಚಾರಿ ತಂಡಗಳು: 380
* ಒಟ್ಟು ಲಸಿಕಾ ಕಾರ್ಯಕರ್ತರು: 15,354
* ಒಟ್ಟು ಮೇಲ್ವಿಚಾರಕರು: 758
ಸಾರ್ವಜನಿಕರು ಈ ಹಿಂದೆ ಎಷ್ಟೇ ಬಾರಿ ಸಹ ಮಕ್ಕಳಿಗೆ ಪೋಲಿಯೊ ಹನಿ ಹಾಕಿಸಿದ್ದರೂ ಕೂಡ ನಾಳೆ ಭಾನುವಾರ ಮಾರ್ಚ್ 03 ರಿಂದ ನಡೆಯಲಿರುವ ಪೊಲಿಯೋ ಲಸಿಕೆ ಕಾರ್ಯಕ್ರಮಕ್ಕೆ 5 ವರ್ಷದೊಳಗಿನ ಮಕ್ಕಳನ್ನು ಬೂತ್ಗೆ ಕರೆತಂದು ಎರಡು ಹನಿ ಪೋಲಿಯೊ ಹಾಕಿಸಸಬೇಕು. ಈ ಮೂಲಕ ಪೋಲಿಯೊ ಮುಕ್ತ ವಿಶ್ವವನ್ನಾಗಿ ಮಾಡಲು ಸಹಕರಿಸುವಂತೆ ಬಿಬಿಎಂಪಿ ತಿಲಿಸಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications