ಬೆಂಗಳೂರಿನಲ್ಲಿ ಫೆ.22ರಂದು ಪಲ್ಸ್ ಪೊಲೀಯೋ ಕಾರ್ಯಕ್ರಮ
ಬೆಂಗಳೂರು, ಫೆ. 12 : ಬೆಂಗಳೂರಿನಲ್ಲಿ ಫೆಬ್ರವರಿ 22 ರಂದು ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ. ಒಟ್ಟು 6,04,483 ಮಕ್ಕಳಿಗೆ ಲಸಿಕೆ ಹಾಕಲು ಉದ್ದೇಶಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬೆಟ್ಟಸ್ವಾಮಿ ಹೇಳಿದ್ದಾರೆ.
ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಫೆಬ್ರವರಿ 21 ರಂದು ಜಾಥಾ ಮಾಡಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಲಸಿಕಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಲು ಶಿಕ್ಷಕರನ್ನು ನಿಯೋಜಿಸಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯಿತಿ ಕಾರ್ಯದರ್ಶಿಗಳು ಮುಖ್ಯ ಲಸಿಕಾ ಕೇಂದ್ರಗಳಲ್ಲಿ ಇದ್ದು, 5 ವರ್ಷದ ಒಳಗಿನ ಮಕ್ಕಳನ್ನು ಲಸಿಕಾ ಕೇಂದ್ರಕ್ಕೆ ಕರೆ ತರುವ ವ್ಯವಸ್ಥೆ ಮಾಡಬೇಕು. ಲಸಿಕಾ ದಿನ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಪಾಲ್ಗೊಳ್ಳಬೇಕು. ಪೋಲಿಯೋ ಕಾರ್ಯಕ್ರಮದ ಮಹತ್ವದ ಬಗ್ಗೆ ತಾಯಂದಿರ ಸಭೆ ಕರೆದು ಮಾಹಿತಿ ನೀಡಬೇಕು ಎಂದು ಹೇಳಿದರು.
ಬೆಂಗಳೂರು ನಗರ ಜಿಲ್ಲೆಯಲ್ಲಿ ಪ್ರತಿದಿನ ವಲಸೆ ಬರುವವರಿದ್ದು, ಹೊಸದಾಗಿ ಲಸಿಕೆ ಹಾಕಲು ಎಲ್ಲಾ ವಾರ್ಡ್ಗಳಲ್ಲಿ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಜನವರಿ ತಿಂಗಳಿನಲ್ಲಿ ನಡೆದ ಮೊದಲ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಒಟ್ಟು 4,76,448 ಮಕ್ಕಗಳಿಗೆ ಲಸಿಕೆ ಹಾಕಲಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications