ಜ.19 ರಾಜ್ಯದೆಲ್ಲೆಡೆ ಪಲ್ಸ್ ಪೋಲಿಯೋ ಕಾರ್ಯಕ್ರಮ
ಬೆಂಗಳೂರು: ಜ, 18 : ಪಾಲಕರೆ ನೆನಪಿನಲ್ಲಿಡಿ. ನೀವು ಬಡವರಿರಲಿ ಶ್ರೀಮಂತರಿರಲಿ, ನಿಮ್ಮ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಜ.19ರಂದು ಭಾನುವಾರದಂದು ತಪ್ಪದೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ. ಈ ಎರಡು ಅಮೃತಬಿಂದುಗಳು ಮಕ್ಕಳಿಗೆ ಅಂಗವೈಕಲ್ಯತೆ ಬರದಂತೆ ತಡೆಯಬಲ್ಲವು.
ಪ್ರಪಂಚದಿಂದ ಪೋಲಿಯೋ ನಿರ್ಮೂಲನೆ ಮಾಡುವ ಮುಖ್ಯ ಉದ್ದೇಶದಿಂದ ದೇಶದ್ಯಾಂತ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಭಾನುವಾರ ಜ. 19ರಂದು ರಾಜ್ಯದೆಲ್ಲೆಡೆ ಹಮ್ಮಿಕೊಳ್ಳಲಾಗಿದೆ. 1994ರಿಂದಲೇ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಯೋಜನೆ ಆರಂಭಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ನಗರದಲ್ಲಿ 5 ವರ್ಷದೊಳಗಿನ ಸರಿ ಸುಮಾರು 5 ಲಕ್ಷ 70 ಸಾವಿರ ಮಕ್ಕಳಿಗೆ ಲಸಿಕೆ ಹಾಕುವ ಉದ್ದೇಶ ಹೊಂದಲಾಗಿದೆ. ಕ್ರಿಯಾ ಯೋಜನೆಯನುಸಾರ ಇದಕ್ಕಾಗಿ 1,920 ಬೂತ್ಗಳ ಕಾರ್ಯಚರಣೆಯ ಸ್ಥಳಗಳನ್ನು ಗುರುತಿಸಲಾಗಿದ್ದು, 8,000ಕ್ಕೂ ಅಧಿಕ ಲಸಿಕೆ ಹಾಕುವ ತಾಂತ್ರಿಕ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ.

ಹತ್ತಿರದ ಆರೋಗ್ಯ ಕೇಂದ್ರಗಳಿಗೆ ತೆರಳಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬಹುದು. ಖಾಸಗಿ ಆಸ್ಪತ್ರೆ, ಶಾಲೆ ಮತ್ತು ಕಾಲೇಜುಗಳಲ್ಲಿಯೂ ಲಸಿಕೆ ಹಾಕುವ ಸಿಬ್ಬಂದಿಗಳು ಇರುತ್ತಾರೆ. ಹಿಂದೊಮ್ಮೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿದ್ದರೂ ಈ ಬಾರಿ ಮತ್ತು ಲಸಿಕೆ ಹಾಕಿಸಬೇಕು. ಜೊತೆಗೆ ಸಿಬ್ಬಂದಿಗಳು ಮನೆಮನೆಗೂ ತೆರಳಿ ಲಸಿಕೆ ಹಾಕಲಿದ್ದಾರೆ. ಇದರ ಪ್ರಯೋಜನ ಜನರು ಪಡೆಯಬಹುದು.
384 ಜನರ ಮೇಲ್ವಿಚಾರಣೆಯಲ್ಲಿ ಈ ಲಸಿಕೆ ಹಾಕುವವರು ಕಾರ್ಯನಿರ್ವಹಿಸಲಿದ್ದು, ಇವರು ಯಾವ ಮಕ್ಕಳಿಗೂ ತಪ್ಪದಂತೆ ಲಸಿಕೆ ಹಾಕುವ ಕೆಲಸವನ್ನು ನಿರ್ವಹಿಸಲಿದ್ದಾರೆ. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ 5 ವರ್ಷದ ಎಲ್ಲಾ ಮಕ್ಕಳಿಗೆ ಈ ಬಾರಿಯೂ ಪೋಲಿಯೋ ಲಸಿಕೆ ಹಾಕಿಸಲು ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ವಾರ್ತಾ, ಮೂಲಭೂತ ಸೌಕರ್ಯಾಭಿವೃದ್ಧಿ ಸಚಿವ ಆರ್. ರೋಷನ್ ಬೇಗ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರುಗಳು ಜನವರಿ 19ರಂದು ಬೆಳಿಗ್ಗೆ 8 ಗಂಟೆಗೆ ಶಿವಾಜಿನಗರದ ಗೌಸಿಯಾ ಆಸ್ಪತ್ರೆಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications