ಜ.19 ರಾಜ್ಯದೆಲ್ಲೆಡೆ ಪಲ್ಸ್ ಪೋಲಿಯೋ ಕಾರ್ಯಕ್ರಮ
ಬೆಂಗಳೂರು: ಜ, 18 : ಪಾಲಕರೆ ನೆನಪಿನಲ್ಲಿಡಿ. ನೀವು ಬಡವರಿರಲಿ ಶ್ರೀಮಂತರಿರಲಿ, ನಿಮ್ಮ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಜ.19ರಂದು ಭಾನುವಾರದಂದು ತಪ್ಪದೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ. ಈ ಎರಡು ಅಮೃತಬಿಂದುಗಳು ಮಕ್ಕಳಿಗೆ ಅಂಗವೈಕಲ್ಯತೆ ಬರದಂತೆ ತಡೆಯಬಲ್ಲವು.
ಪ್ರಪಂಚದಿಂದ ಪೋಲಿಯೋ ನಿರ್ಮೂಲನೆ ಮಾಡುವ ಮುಖ್ಯ ಉದ್ದೇಶದಿಂದ ದೇಶದ್ಯಾಂತ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಭಾನುವಾರ ಜ. 19ರಂದು ರಾಜ್ಯದೆಲ್ಲೆಡೆ ಹಮ್ಮಿಕೊಳ್ಳಲಾಗಿದೆ. 1994ರಿಂದಲೇ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಯೋಜನೆ ಆರಂಭಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ನಗರದಲ್ಲಿ 5 ವರ್ಷದೊಳಗಿನ ಸರಿ ಸುಮಾರು 5 ಲಕ್ಷ 70 ಸಾವಿರ ಮಕ್ಕಳಿಗೆ ಲಸಿಕೆ ಹಾಕುವ ಉದ್ದೇಶ ಹೊಂದಲಾಗಿದೆ. ಕ್ರಿಯಾ ಯೋಜನೆಯನುಸಾರ ಇದಕ್ಕಾಗಿ 1,920 ಬೂತ್ಗಳ ಕಾರ್ಯಚರಣೆಯ ಸ್ಥಳಗಳನ್ನು ಗುರುತಿಸಲಾಗಿದ್ದು, 8,000ಕ್ಕೂ ಅಧಿಕ ಲಸಿಕೆ ಹಾಕುವ ತಾಂತ್ರಿಕ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ.

ಹತ್ತಿರದ ಆರೋಗ್ಯ ಕೇಂದ್ರಗಳಿಗೆ ತೆರಳಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬಹುದು. ಖಾಸಗಿ ಆಸ್ಪತ್ರೆ, ಶಾಲೆ ಮತ್ತು ಕಾಲೇಜುಗಳಲ್ಲಿಯೂ ಲಸಿಕೆ ಹಾಕುವ ಸಿಬ್ಬಂದಿಗಳು ಇರುತ್ತಾರೆ. ಹಿಂದೊಮ್ಮೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿದ್ದರೂ ಈ ಬಾರಿ ಮತ್ತು ಲಸಿಕೆ ಹಾಕಿಸಬೇಕು. ಜೊತೆಗೆ ಸಿಬ್ಬಂದಿಗಳು ಮನೆಮನೆಗೂ ತೆರಳಿ ಲಸಿಕೆ ಹಾಕಲಿದ್ದಾರೆ. ಇದರ ಪ್ರಯೋಜನ ಜನರು ಪಡೆಯಬಹುದು.
384 ಜನರ ಮೇಲ್ವಿಚಾರಣೆಯಲ್ಲಿ ಈ ಲಸಿಕೆ ಹಾಕುವವರು ಕಾರ್ಯನಿರ್ವಹಿಸಲಿದ್ದು, ಇವರು ಯಾವ ಮಕ್ಕಳಿಗೂ ತಪ್ಪದಂತೆ ಲಸಿಕೆ ಹಾಕುವ ಕೆಲಸವನ್ನು ನಿರ್ವಹಿಸಲಿದ್ದಾರೆ. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ 5 ವರ್ಷದ ಎಲ್ಲಾ ಮಕ್ಕಳಿಗೆ ಈ ಬಾರಿಯೂ ಪೋಲಿಯೋ ಲಸಿಕೆ ಹಾಕಿಸಲು ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ವಾರ್ತಾ, ಮೂಲಭೂತ ಸೌಕರ್ಯಾಭಿವೃದ್ಧಿ ಸಚಿವ ಆರ್. ರೋಷನ್ ಬೇಗ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರುಗಳು ಜನವರಿ 19ರಂದು ಬೆಳಿಗ್ಗೆ 8 ಗಂಟೆಗೆ ಶಿವಾಜಿನಗರದ ಗೌಸಿಯಾ ಆಸ್ಪತ್ರೆಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications