Get Updates
Get notified of breaking news, exclusive insights, and must-see stories!

ಕಸ ವಿಂಗಡನೆ ಮಾಡುವಂತೆ ಪ್ರಚಾರ ಮಾಡ್ತಾರೆ ಪುನೀತ್

ಬೆಂಗಳೂರು, ಫೆಬ್ರವರಿ 06 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಸ ವಿಂಗಡನೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಪ್ರಚಾರ ಆಂದೋಲನ ಕೈಗೊಳ್ಳಲಿದೆ. ನಟ ಪುನೀತ್ ರಾಜ್‌ಕುಮಾರ್ ಅವರು ಈ ಆಂದೋಲನದ ರಾಯಭಾರಿಯಾಗಿದ್ದಾರೆ.

ಬಿಬಿಎಂಪಿ ಮೇಯರ್ ಮಂಜುನಾಥ ರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಮೂಲದಲ್ಲಿಯೇ ಕಸವನ್ನು ವಿಂಗಡೆನೆ ಮಾಡುವ ಕುರಿತು ಜನರಲ್ಲಿ ಅರಿವು ಮೂಡಿಸಲು ಪಾಲಿಕೆ ಪ್ರಚಾರ ಆಂದೋಲನ ನಡೆಸಲಿದೆ. ಪುನೀತ್ ರಾಜ್‌ಕುಮಾರ್ ಅವರು ಇದರ ರಾಯಭಾರಿಯಾಗಿದ್ದು, ಹಲವು ನಟ-ನಟಿಯರು ಈ ಆಂದೋಲನದಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದು ಮಂಜುನಾಥ ರೆಡ್ಡಿ ಹೇಳಿದರು. [ಬೆಂಗಳೂರು : ತ್ಯಾಜ್ಯ ವಿಂಗಡನೆ ಕಡ್ಡಾಯ, ತಪ್ಪಿದರೆ ದಂಡ]

puneet rajkumar

ಪಾಲಿಕೆಯ ಆರೋಗ್ಯ ವಿಭಾಗದ ಡಾ.ಯತೀಶ್ ಕುಮಾರ್ ಅವರು ಈ ಆಂದೋಲನದಲ್ಲಿ ಪಾಲ್ಗೊಳ್ಳುವಂತೆ ಪುನೀತ್ ರಾಜ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಅವರು ಒಪ್ಪಿಗೆ ಸೂಚಿಸಿದ್ದು, ಕಸ ವಿಂಗಡೆನೆ ಕುರಿತ ಜಾಹೀರಾತು ಮತ್ತು ಅಭಿಯಾನದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ. [ಬೆಂಗಳೂರಿಗರೇ ದಾರಿಯಲ್ಲಿ ಕಸ ಕಂಡ್ರೆ ಸೆಲ್ಫಿ ತಗೊಳ್ಳಿ!]

ಪುನೀತ್ ರಾಜ್‌ಕುಮಾರ್ ಅವರು ಈ ಆಂದೋಲನದ ರಾಯಭಾರಿಯಾಗಿದ್ದು, ಹಿರಿಯ ನಟಿ ಮತ್ತು ವಿಧಾನಪರಿಷತ್ ಸದಸ್ಯೆ ಜಯಮಾಲಾ, ತಾರಾ ಮುಂತಾದ ಸಿನಿಮಾ ಮತ್ತು ಕಿರುತೆರೆ ನಟ-ನಟಿಯರು ಆಂದೋಲನದಲ್ಲಿ ಪಾಲ್ಗೊಳ್ಳಲಿದ್ದಾರೆ. [ಕಸ, ಗುಂಡಿ, ಟ್ರಾಫಿಕ್ ಮುಕ್ತ ಮುಕ್ತ ಮುಕ್ತ ನಗರಕ್ಕೆ ರೆಡ್ಡಿ ಸೂತ್ರ]

ಕರ್ನಾಟಕ ಹೈಕೋರ್ಟ್ ಆದೇಶದಂತೆ ಬೆಂಗಳೂರು ನಗರದಲ್ಲಿ 2016ರ ಜನವರಿ 1ರಿಂದಲೇ ಕಸ ವಿಂಗಡಣೆಯನ್ನು ಬಿಬಿಎಂಪಿ ಕಡ್ಡಾಯಗೊಳಿಸಿದೆ. ಮೂಲದಲ್ಲಿಯೇ ಹಸಿ ಮತ್ತು ಒಣ ಕಸವನ್ನು ವಿಂಗಡಣೆ ಮಾಡಿ ಪೌರ ಕಾರ್ಮಿಕರಿಗೆ ನೀಡಬೇಕು ಎಂದು ಹೇಳಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+