ಕಸ ವಿಂಗಡನೆ ಮಾಡುವಂತೆ ಪ್ರಚಾರ ಮಾಡ್ತಾರೆ ಪುನೀತ್
ಬೆಂಗಳೂರು, ಫೆಬ್ರವರಿ 06 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಸ ವಿಂಗಡನೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಪ್ರಚಾರ ಆಂದೋಲನ ಕೈಗೊಳ್ಳಲಿದೆ. ನಟ ಪುನೀತ್ ರಾಜ್ಕುಮಾರ್ ಅವರು ಈ ಆಂದೋಲನದ ರಾಯಭಾರಿಯಾಗಿದ್ದಾರೆ.
ಬಿಬಿಎಂಪಿ ಮೇಯರ್ ಮಂಜುನಾಥ ರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಮೂಲದಲ್ಲಿಯೇ ಕಸವನ್ನು ವಿಂಗಡೆನೆ ಮಾಡುವ ಕುರಿತು ಜನರಲ್ಲಿ ಅರಿವು ಮೂಡಿಸಲು ಪಾಲಿಕೆ ಪ್ರಚಾರ ಆಂದೋಲನ ನಡೆಸಲಿದೆ. ಪುನೀತ್ ರಾಜ್ಕುಮಾರ್ ಅವರು ಇದರ ರಾಯಭಾರಿಯಾಗಿದ್ದು, ಹಲವು ನಟ-ನಟಿಯರು ಈ ಆಂದೋಲನದಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದು ಮಂಜುನಾಥ ರೆಡ್ಡಿ ಹೇಳಿದರು. [ಬೆಂಗಳೂರು : ತ್ಯಾಜ್ಯ ವಿಂಗಡನೆ ಕಡ್ಡಾಯ, ತಪ್ಪಿದರೆ ದಂಡ]

ಪಾಲಿಕೆಯ ಆರೋಗ್ಯ ವಿಭಾಗದ ಡಾ.ಯತೀಶ್ ಕುಮಾರ್ ಅವರು ಈ ಆಂದೋಲನದಲ್ಲಿ ಪಾಲ್ಗೊಳ್ಳುವಂತೆ ಪುನೀತ್ ರಾಜ್ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಅವರು ಒಪ್ಪಿಗೆ ಸೂಚಿಸಿದ್ದು, ಕಸ ವಿಂಗಡೆನೆ ಕುರಿತ ಜಾಹೀರಾತು ಮತ್ತು ಅಭಿಯಾನದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ. [ಬೆಂಗಳೂರಿಗರೇ ದಾರಿಯಲ್ಲಿ ಕಸ ಕಂಡ್ರೆ ಸೆಲ್ಫಿ ತಗೊಳ್ಳಿ!]
ಪುನೀತ್ ರಾಜ್ಕುಮಾರ್ ಅವರು ಈ ಆಂದೋಲನದ ರಾಯಭಾರಿಯಾಗಿದ್ದು, ಹಿರಿಯ ನಟಿ ಮತ್ತು ವಿಧಾನಪರಿಷತ್ ಸದಸ್ಯೆ ಜಯಮಾಲಾ, ತಾರಾ ಮುಂತಾದ ಸಿನಿಮಾ ಮತ್ತು ಕಿರುತೆರೆ ನಟ-ನಟಿಯರು ಆಂದೋಲನದಲ್ಲಿ ಪಾಲ್ಗೊಳ್ಳಲಿದ್ದಾರೆ. [ಕಸ, ಗುಂಡಿ, ಟ್ರಾಫಿಕ್ ಮುಕ್ತ ಮುಕ್ತ ಮುಕ್ತ ನಗರಕ್ಕೆ ರೆಡ್ಡಿ ಸೂತ್ರ]
ಕರ್ನಾಟಕ ಹೈಕೋರ್ಟ್ ಆದೇಶದಂತೆ ಬೆಂಗಳೂರು ನಗರದಲ್ಲಿ 2016ರ ಜನವರಿ 1ರಿಂದಲೇ ಕಸ ವಿಂಗಡಣೆಯನ್ನು ಬಿಬಿಎಂಪಿ ಕಡ್ಡಾಯಗೊಳಿಸಿದೆ. ಮೂಲದಲ್ಲಿಯೇ ಹಸಿ ಮತ್ತು ಒಣ ಕಸವನ್ನು ವಿಂಗಡಣೆ ಮಾಡಿ ಪೌರ ಕಾರ್ಮಿಕರಿಗೆ ನೀಡಬೇಕು ಎಂದು ಹೇಳಿದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ










Click it and Unblock the Notifications