Puneeth Rajkumar: ಅರ್ಧ ಕರ್ನಾಟಕದಲ್ಲಿ 'ಹೃದಯಜ್ಯೋತಿ' ಆರೋಗ್ಯ ಸೌಲಭ್ಯ ಯಶಸ್ವಿ ಜಾರಿ
ಬೆಂಗಳೂರು, ಜೂನ್ 27: ಕೋವಿಡ್ ಪಿಡುಗಿನ ಬಳಿಕ ಹೆಚ್ಚಾಗುತ್ತಿರುವ ಹೃದಯಾಘಾತ ತಡೆಯುವ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಹೆಸರಿನಲ್ಲಿ ಜನ ಜೀವ ಉಳಿಸುವ 'ಹೃದಯಜ್ಯೋತಿ' ಯೋಜನೆ ಜಾರಿಗೊಳಿಸಿತ್ತು. ಅದರ ಭಾಗವಾಗಿ ಅರ್ಧ ರಾಜ್ಯದಲ್ಲಿ ಯೋಜನೆ ಅನುಷ್ಠಾನಕ್ಕೆ ತರುವಲ್ಲಿ ಸರ್ಕಾರ ಯಶಸ್ವಿಯಾಗಿದೆ.
ಹೌದು, ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರ ಗುರುವಾರ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಅಭಿವೃದ್ಧಿಯ ಪಥದಲ್ಲಿ ಗ್ಯಾರಂಟಿ ಸರ್ಕಾರ ಸಾಗುತ್ತಿದೆ ಹೃದಯಾಘಾತದಂತಹ ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸಲು ಕರ್ನಾಟಕ ರತ್ನ ಡಾ. ಪುನೀತ್ ರಾಜ್ಕುಮಾರ್ 'ಹೃದಯಜ್ಯೋತಿ ಯೋಜನೆ'ಯನ್ನು ಜಾರಿಗೆ ತಂದು ಜನರಿಗೆ ಅನುಕೂಲ ಮಾಡಲಾಗಿದೆ.

ಜಯದೇವ ಹೃದ್ರೋಗ ಸಂಸ್ಥೆಯ ಸಹಯೋಗದಲ್ಲಿ ಈಗಾಗಲೇ ಕರ್ನಾಟಕದ 15 ಜಿಲ್ಲೆಗಳ 45 ಆಸ್ಪತ್ರೆಗಳಲ್ಲಿ ಯೋಜನೆ ಜಾರಿಗೊಳಿಸಲಾಗಿದೆ. ಇಲ್ಲಿ ತುರ್ತು ಹೃದಯಾಘಾತದಂತಹ ಸಂದರ್ಭದಲ್ಲಿ ಗೊಲ್ಡನ್ ಹವರ್ನಲ್ಲಿ ಚಿಕಿತ್ಸೆ ನೀಡಲು ಈ ಹೃದಯಜ್ಯೋತಿ ಕೇಂದ್ರ ಮಹತ್ವದ ಕಾರ್ಯ ಮಾಡುತ್ತಿದೆ. ಇಲ್ಲೆಲ್ಲ ಅಗತ್ಯ ವೈದ್ಯಕೀಯ ಸೌಲಭ್ಯ ಇರುವಂತೆ ನೋಡಿಕೊಳ್ಳಲಾಗುತ್ತಿದೆ.
15 ಜಿಲ್ಲೆಗಳ 41 ಆಸ್ಪತ್ರೆಗಳಿಗೆ ವಿಸ್ತರಣೆ ಶೀಘ್ರ
ಸದ್ಯ ಅರ್ಧ ರಾಜ್ಯಗಳಲ್ಲಿ ಈ ಮಹತ್ವದ ಯೋಜನೆ ಜಾರಿಗೆ ತಂದಿದ್ದು, ಮುಂದಿನ ದಿನಗಳಲ್ಲಿ ಅಂದರೆ ಎರಡನೇ ಹಂತದಲ್ಲಿ ರಾಜ್ಯದಲ್ಲಿ ಉಳಿದ 15 ಜಿಲ್ಲೆಗಳ 41 ಆಸ್ಪತ್ರೆಗಳಿಗೆ ಈ ಯೋಜನೆಯನ್ನು ವಿಸ್ತರಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಂತಹ ಪ್ರಕರಣಗಳು ಅಧಿಕವಾಗಿ ವರದಿ ಆಗುತ್ತಿವೆ. ಹದಿಹರೆಯದವರಲ್ಲೂ ಅದರಲ್ಲೂ 40ವರ್ಷ ವಯಸ್ಸಿಗಿಂತಲೂ ಕಡಿಮೆ ವಯೋಮಾನದವರಲ್ಲೂ ಹೃದಯಾಘಾತದಂತಹ ಸಮಸ್ಯೆ ಕಂಡು ಬರುತ್ತಿದೆ. ಈ ಸಂಬಂಧ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಇದೇ ವಿಚಾರವಾಗಿಯೇ ನಮ್ಮನ್ನು ಅಗಲಿದ ಪುನೀತ್ ರಾಜಕುಮಾರ್ ಸ್ಮರಣಾರ್ಥ ಅವರ ಹೆಸರಿನಲ್ಲಿ ಜಿಲ್ಲೆಗಳಲ್ಲಿ ಸ್ಥಳೀಯ ಆಸ್ಪತ್ರೆಗಳಲ್ಲಿ 'ಹೃದಯ ಜ್ಯೋತಿ ಕೇಂದ್ರ' ಸ್ಥಾಪಿಸಲು ನಿರ್ಧರಿಸಲಾಯಿತು.

50 ಖಾಸಗಿ ಆಸ್ಪತ್ರೆಗಳಲ್ಲಿ ಈ ಸೌಲಭ್ಯ
ಸರ್ಕಾರದ ಈ ಯೋಜನೆಯಡಿ ಹೃದಯಜ್ಯೋತಿ ಆರೋಗ್ಯ ಸೌಲಭ್ಯ ರಾಜ್ಯದ 50 ಖಾಸಗಿ ಆಸ್ಪತ್ರೆಗಳಲ್ಲಿ ಜಾರಿಗೆ ಬರಲಿದೆ. ಸಾಮಾಜಿಕವಾಗಿ, ಚಿತ್ರರಂಗದಲ್ಲಿ ಅಪಾರ ಸಾಧನೆ ಮಾಡಿ, ಯುವ ಸಮೂಹಕ್ಕೆ ಸ್ಪೂರ್ತಿಯಾದ ಅಪ್ಪು ಅವರನ್ನ ಹೆಸರನ್ನು ಈ ಇಡಲು ನಿರ್ಧರಿಸಿದ ಸರ್ಕಾರ 'ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ' ಸೇವೆ ರಾಜ್ಯದ ಆಸ್ಪತ್ರೆಗಳಲ್ಲಿ ತೆರೆಯಲು ನಿರ್ಧರಿಸಿತು. ಈ ಯೋಜನೆ ಮೊದಲ ಹಂತದಲ್ಲಿ ಯಶಸ್ವಿಯಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications