Puneeth Rajkumar Satellite: 'ಅಪ್ಪು' ಹೆಸರಿನ ಉಪಗ್ರಹ ಉಡಾವಣೆ ಅಪ್ಡೇಟ್ ಕೊಟ್ಟ ಸಚಿವರು
ಬೆಂಗಳೂರು, ಅಕ್ಟೋಬರ್ 27: ಕರ್ನಾಟಕದಲ್ಲಿ ಸರ್ಕಾರಿ ಶಾಲೆಯ 150 ಮಕ್ಕಳು ತಯಾರಿಸಿರುವ ಸ್ಯಾಂಡಲ್ವುಡ್ ನಟ ದಿ.'ಪುನೀತ್ ರಾಜ್ಕುಮಾರ್' ಹೆಸರಿನ ಉಪಗ್ರಹವು ಮುಂದಿನ ವರ್ಷ2024ರ ಮಾರ್ಚ್ ತಿಂಗಳಲ್ಲಿ ಉಡಾವಣೆ ಆಗುವ ನಿರೀಕ್ಷೆಗಳು ಇವೆ ಎಂದು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಮಾಹಿತಿ ನೀಡಿದರು.
ಬೆಂಗಳೂರಿನಲ್ಲಿ ಗುರುವಾರ ಪುನೀತ್ ಉಪಗ್ರಹ ಯೋಜನೆಯ ಪ್ರಗತಿ ಕುರಿತು ಸಚಿವರು ಗುರುವಾರ ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಷನ್ (ITCA) ಸದಸ್ಯರ ಜೊತೆಗೆ ಸಭೆ ನಡೆಸಿ ಮಾತನಾಡಿದರು.

ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಸಂಘವು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಚಾರ ಸೊಸೈಟಿ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಅಡಿಯಲ್ಲಿ ಪುನೀತ್ ಉಪಗ್ರಹ ಯೋಜನೆಯನ್ನು ನೋಡಿಕೊಳುತ್ತಿದೆ. ಶಾಲಾ ಮಕ್ಕಳೆ ಉಪಗ್ರಹ ತಯಾರಿಸಿದ್ದಾರೆ.
ಕ್ಯೂಬ್ಸ್ಯಾಟ್ ಉಪವ್ಯವಸ್ಥೆಗಳ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದೆ. ವಿದ್ಯಾರ್ಥಿಗಳು ಪುನೀತ್ ಉಪಗ್ರಹ (Puneeth satelite) ದಲ್ಲಿ ಸಾಗಿಸಲಿರುವ ದ್ವಿತೀಯ ಪೇಲೋಡ್ ಅನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ವಿವರಿಸಿದರು.
ಇಸ್ರೋ ಜತೆ ಸಮನ್ವಯ
ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿರುವ ಕ್ಯೂಬ್ಸ್ಯಾಟ್ ಉಪವ್ಯವಸ್ಥೆಗಳ ಮೂಲ ಮಾದರಿಗಳು ಮೌಲ್ಯಮಾಪನ ಮಂಡಳಿಗಳು ಪ್ರಸ್ತುತ ಮೌಲ್ಯೀಕರಣಕ್ಕೆ ಒಳಪಡಿಸಲಾಗುವುದು. ನಂತರ ಅಗತ್ಯ ಬದಲಾವಣೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ ಎಂದರು.
ಅಗತ್ಯ ಅನುಮೋದನೆಗಳನ್ನು ಪಡೆಯುವಲ್ಲಿ ಇಸ್ರೋ ಜೊತೆ ಸಮನ್ವಯ ಸಾಧಿಸುವಂತೆ ಸಚಿವರು ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಷನ್ (ITCA) ನಿರ್ದೇಶಿಸಿದ್ದಾರೆ. ಈ ಯೋಜನೆಯು ವಿದ್ಯಾರ್ಥಿಗಳಿಗೆ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ವಿಷಯಗಳಲ್ಲಿ ಆಸಕ್ತಿಯನ್ನು ಬೆಳೆಸುವ ಉಪಗ್ರಹಗಳ ನಿರ್ಮಾಣ ಮತ್ತು ಉಡಾವಣೆಯಲ್ಲಿ ಅನುಭ ಒಗಿಸುತ್ತದೆ ಎಂದು ITCA ತಂಡದ ಸದಸ್ಯರು ಸಚಿವರಿಗೆ ಮಾಹಿತಿ ನೀಡಿದರು.
ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಷನ್ 75 ಉಪಗ್ರಹಗಳನ್ನ ಉಡಾವಣೆ ಮಾಡಲಿದೆ. 75 ಉಪಗ್ರಹಗಳ ಪೈಕಿ ಅಪ್ಪು ಹೆಸರಿನ ಒಂದು ಉಪಗ್ರಹವನ್ನು ಸರ್ಕಾರಿ ಶಾಲಾ ಮಕ್ಕಳು ನಿರ್ಮಾಣ ಮಾಡಿದ್ದಾರೆ. ITCA ಜೊತೆ ಒಪ್ಪಂದ್ದಕ್ಕೆ ಕರ್ನಾಟಕ ಸರ್ಕಾರ ಸಹಿ ಹಾಕಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications