ಕಸ ವಿಚಾರವಾಗಿ ಜಗಳ: ನಿವೃತ್ತ ಎಎಸ್ಐ ಮತ್ತು ಕುಟುಂಬದ ವಿರುದ್ಧ ಎಫ್ಐಆರ್
ಬೆಂಗಳೂರು, ಫೆ. 17: ಕಸ ಹಾಕುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆದಿರುವ ಮಾರಾಮಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಪ್ರಕರಣ ಸಂಬಂಧ ನಿವೃತ್ತ ಎಎಸ್ಐ ಅವರ ಮತ್ತು ಕುಟುಂಬ ಸದಸ್ಯರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪೀಣ್ಯದ ಚನ್ನನಾಯಕನಪಾಳ್ಯದಲ್ಲಿ ಅನಿತಾ ಎಂಬುವರು ಮೂರು ವರ್ಷದ ಹಿಂದೆ ಗಾರ್ಮೆಂಟ್ಸ್ ತೆಗೆದಿದ್ದರು. ಗಾರ್ಮೆಂಟ್ಸ್ಗೆ ಹೊಂದಿಕೊಂಡಂತೆ ಎಎಸ್ಐ ಅವರ ಖಾಲಿ ನಿವೇಶನವಿತ್ತು. ಗಾರ್ಮೆಂಟ್ಸ್ ಪ್ರಾರಂಭವಾದ ಬಳಿಕ ನಿವೃತ್ತ ಎಎಸ್ಐ ಮನೆ ಮುಂದೆ ಸ್ಥಳೀಯರು ಕಸ ಹಾಕುತ್ತಿದ್ದರು. ಇದರಿಂದ ಕುಪಿತಗೊಂಡಿದ್ದ ಎಎಸ್ಐ ಕಸ ಹಾಕುವರ ಮೇಲೆ ಜಗಳ ಮಾಡುತ್ತಿದ್ದರು.
ಮಾರಾಮಾರಿ: ಗಾರ್ಮೆಂಟ್ಸ್ನಿಂದ ನಮ್ಮ ಖಾಲಿ ನಿವೇಶನದಲ್ಲಿ ಕಸ ತುಂಬಲಾಗುತ್ತಿದೆ ಎಂದು ಆರೋಪಿಸಿ ಇತ್ತೀಚೆಗೆ ನಿವೃತ್ತ ಎಎಸ್ಐ ಜವರೇಗೌಡ, ಪುತ್ರ ಆನಂದ್ ಮತ್ತು ಮಗಳು ಕೋಮಲ ಜಗಳ ಮಾಡಿದ್ದಾರೆ. ಮನೆ ಎದುರೇ ಗಾರ್ಮೆಂಟ್ಸ್ ಮಾಲಕಿ ಅನಿತಾರನ್ನು ಎಳೆದಾಡಿ ಹಲ್ಲೆ ಮಾಡಿದ್ದರು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

ಇದರ ನಡುವೆ ಗಾರ್ಮೆಂಟ್ಸ್ ಮಾಲಕಿ ಅನಿತಾ ಮಂತ್ರಾಲಯಕ್ಕೆ ತೆರಳಿದ್ದರು. ಈ ವೇಳೆ ಗಾರ್ಮೆಂಟ್ಸ್ ಮುಂದೆ ನಿಂಬೆಹಣ್ಣು ಮತ್ತು ಅರಶಿನ, ಕುಂಕುಮ ಹಾಕಿ ವಾಮಾಚಾರ ಮಾಡಲಾಗದೆ. ಇದೇ ವಿಚಾರವಾಗಿ ಪುನಃ ಅನಿತಾ ಮೇಲೆ ಜಗಳ ನಡೆದಿದ್ದು, ಜವರೇಗೌಡ ಕುಟುಂಬ ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಇದರಿಂದ ನೊಂದ ಅನಿತಾ ಪೀಣ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ದೂರನ್ನಾಧರಿಸಿ ನಿವೃತ್ತ ಎಎಸ್ಐ ಜವರೇಗೌಡ ಮತ್ತು ಕುಟುಂಬ ಸದಸ್ಯರ ವಿರುದ್ಧ ಎಫ್ಐಅರ್ ದಾಖಲಾಗಿದೆ.
ಈ ನಡುವೆ ಗಾರ್ಮೆಂಟ್ಸ್ ಅನ್ನು ಬೇರಡೆ ಶಿಫ್ಟ್ ಮಾಡಲು ಅನಿತಾ ತಯಾರಿ ನಡೆಸಿದ್ದು ಇದರ ನಡುವೆಯೂ ಕಸ ಹಾಕುವ ವಿಚಾರವಾಗಿ ನಿರಂತರ ಜಗಳ ನಡೆದಿದೆ. ಕಸದ ವಿಚಾರವಾಗಿ ನಡೆದ ಜಗಳ ಇದೀಗ ವಾಮಾಚಾರದವರೆಗೂ ತಲುಪಿ ಠಾಣಾ ಮೆಟ್ಟಿಲೇರಿದೆ.
ತಂದೆಯ ತಿಥಿ ದಿನವೇ ಮಗಳ ಸಾವು:
ತಂದೆಯ ಪುಣ್ಯ ತಿಥಿ ದಿನವೇ ಗ್ಯಾಸ್ ಸೋರಿಕೆಯಾಗಿ ಮಗಳು ಸಾವನ್ನಪ್ಪಿರುವ ದಾರುಣ ಘಟನೆ ಕುಮಾರಸ್ವಾಮಿ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಂದೆಯ ತಿಥಿ ಕಾರ್ಯಕ್ಕೆ ಮಾಂಸದ ಊಟ ತಯಾರಿಸಲು ಅಡುಗೆ ಸಿಲಿಂಡರ್ ಅನ್ನು ಕುಟುಂಬಸ್ಥರು ತರಿಸಿದ್ದರು. ಚಿಕ್ಕ ಮನೆಯಲ್ಲಿಯೇ ಅಡುಗೆ ಸಿಲಿಂಡರ್ ಇಟ್ಟು ಅಡುಗೆ ತಯಾರಿ ಮಾಡಲಾಗುತ್ತಿತ್ತು. ಈ ವೇಳೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟಿಸಿದೆ. ಪರಮೇಶ್ವರಿ (42) ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಉಳಿದ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಮಾರಸ್ವಾಮಿ ಬಡಾವಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
Recommended Video
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ









Click it and Unblock the Notifications