ಪ್ರಶ್ನೆ ಪತ್ರಿಕೆ ಸೋರಿಕೆ: 5 ವರ್ಷ ಜೈಲು,5 ಲಕ್ಷ ದಂಡ
ಬೆಂಗಳೂರು, ಫೆಬ್ರವರಿ 10: ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಬಲಿಷ್ಠ ಕಾನೂನು ರೂಪಿಸಲು ಸರಕಾರ ಮುಂದಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸುವ ವಿದೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಕರ್ನಾಟಕ ಶಿಕ್ಷಣ ವಿಧೇಯಕಕ್ಕೆ ತಿದ್ದುಪಡಿಯನ್ನು ಮಾಡಿ 2017ರಿಂದ ಅನ್ವಯವಾಗುವಂತೆ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ 5 ವರ್ಷ ಸೆರೆವಾಸ ಅಥವಾ ರು.5 ಲಕ್ಷ ದಂಡ ಅಥವಾ ಎರಡೂ ಶಿಕ್ಷೆ ವಿಧಿಸುವ ನಿರ್ಣಯವನ್ನು ತೆಗೆದುಕೊಳ್ಳಲಾಯಿತು.

ಪರೀಕ್ಷೆಯಲ್ಲಿ ಅಕ್ರಮ ಎಂದರೆ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷೆ ಮತ್ತು ಮೌಲ್ಯ ಮಾಪನ ವೇಳೆ ವಿದ್ಯಾರ್ಥಿಗಳು ಹಾಗೂ ಇತರರು ಮಾಡುವ ತೊಂದರೆಗಳ ವಿರುದ್ಧ ವಿಧೇಯಕ ಕ್ರಮ ಕೈಗೊಳ್ಳಲಿದೆ. ಅಲ್ಲದೆ ಈ ತಿದ್ದುಪಡಿಯಲ್ಲಿ ಅಕ್ರಮ ತಡೆಯಲು ಸರಕಾರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಲು ಪ್ರಸ್ತಾಪಿಸಲಾಗಿದೆ.
ಇದರ ಅನ್ವಯ ಬೆರಳಚ್ಚು ಮಾಡಿದ, ಧ್ವನಿಮುದ್ರಿತ, ಛಾಯಾಚಿತ್ರ ಅಥವಾ ಜೆರಾಕ್ಸ್ ಮಾಡಿದ ಬೇರೆ ಯಾವುದೇ ಸಾಮಗ್ರಿಯನ್ನು ಯಾವುದೇ ವ್ಯಕ್ತಿ ರವಾನೆ ಮಾಡುವುದು ಅಥವಾ ವ್ಯಕ್ತಿಯಿಂದ ಸಹಾಯ ಪಡೆಯಲು ಯತ್ನಿಸುವುದು. ಅರ್ಹತೆಯಿಲ್ಲ ಅಂಕ ಅಥವಾ ನ್ಯಾಯಸಮ್ಮತವಲ್ಲದ ರೀತಿಯಲ್ಲಿ ಪರೀಕ್ಷಾರ್ಥಿಗಳಿಗೆ ಅವಕಾಶ ಕಲ್ಪಿಸುವುದು, ಪರೀಕ್ಷಾ ಅವಧಿಯಲ್ಲಿ ಮತ್ತು ಅವಧಿಗಿಂತ ಮುಂಚೆ ಯಾರೇ ಕಾನೂನು ಮೀರಿದರೂ ಅಕ್ರಮ ಎಂದು ಪರಿಗಣಿಸಲಾಗುವುದು.
ಇನ್ನು ಪ್ರಶ್ನೆಪತ್ರಿಕೆಯನ್ನು ಕೊಳ್ಳುವುದು, ಮಾರುವುದು,ಛಾಯಾಚಿತ್ರ ಮುಂತಾದ ಚಟುವಟಿಕೆಗಳೂ ಅಕ್ರಮವೆಂದು ಪರಿಗಣಿಸಿ ಅಪರಾಧಕ್ಕೆ ತಕ್ಕ ಶಿಕ್ಷೆ ವಿಧಿಸಲಾಗುವುದು ಎಂದು ಸಭೆಯಲ್ಲಿ ವಿಧೇಯಕವನ್ನು ಮಂಡಿಲಾಯಿತು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications