ಉದ್ಯೋಗಿಗೆ ಪಿಂಕ್ ಸ್ಲಿಪ್, ವೈರಲ್ ಆಗಿದೆ ಆಡಿಯೋ ತುಣುಕು
ಬೆಂಗಳೂರು, ಜುಲೈ 08 : ಕಾಸ್ಟ್ ಕಟ್ಟಿಂಗ್, ಪಿಂಕ್ ಸ್ಲಿಪ್ ನಂಥ ಪಿಡುಗು ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಡೆಂಗ್ಯೂ, ಚಿಕೂನ್ಗುನ್ಯಾ, ಟೈಫೈಡ್ ಜ್ವರಗಳಿಗಿಂತ ಭೀಕರವಾಗಿ ಆವರಿಸಿಕೊಂಡಿವೆ. ಈ ರೋಗಗಳಿಗೆ ಚಿಕಿತ್ಸೆಯಾದರೂ ಇದೆ, ಆದರೆ ಕೆಲಸದಿಂದ ಇದ್ದಕ್ಕಿದ್ದಂತೆ ತೆಗೆಯುವ ಪಿಡುಗಿಗೆ ಯಾವುದೇ ಮದ್ದು ಕಾಣಿಸುತ್ತಿಲ್ಲ.
ಹಲವಾರು ಕಂಪನಿಗಳಲ್ಲಿ ಖರ್ಚುವೆಚ್ಚ ತಗ್ಗಿಸುವ ನೆಪದಲ್ಲಿ ಹೋಲ್ ಸೇಲ್ ಆಗಿ ಉದ್ಯೋಗಿಗಳಿಂದ ರಾಜೀನಾಮೆ ಪಡೆಯಲಾಗುತ್ತಿದೆ. ಕೆಲವು ಕಂಪನಿಗಳು ಇದನ್ನು ಅಲ್ಲಗಳೆಯುತ್ತಿವೆಯಾದರೂ, ಓರ್ವ ಜಾಣ ಉದ್ಯೋಗಿ ಇಂಥ ಕಂಪನಿಗಳಲ್ಲಿ ನಿಜಕ್ಕೂ ಏನು ನಡೆಯುತ್ತಿದೆ ಎಂಬುದನ್ನು ರೆಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆ ಮಾಡಿದ್ದಾರೆ.

ಹೀಗೆ ವಾಟ್ಸಾಪ್ ನಲ್ಲಿ ಹರಿದಾಡುತ್ತಿರುವ ಒಂದು ಆಡಿಯೋ ತುಣುಕು ಆ 'ಟೆಕ್' ಕಂಪನಿಯ ಹುಳುಕು ಮತ್ತು ಬಂಡವಾಳವನ್ನು ಬಯಲು ಮಾಡಿದೆ. ಈ ಆಡಿಯೋ ಈಗ ಎಲ್ಲೆಲ್ಲೂ ವೈರಲ್ ಆಗಿದ್ದು, ಉದ್ಯೋಗಿಗಳನ್ನು ಕಂಪನಿಗಳು ಎಷ್ಟು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿವೆ ಎಂಬುದನ್ನು ಹೊರಹಾಕಿದೆ. ಆ ಆಡಿಯೋ ತುಣುಕಿನಲ್ಲಿ ಮಾತುಗಳು ಹೀಗೆ ಆರಂಭವಾಗುತ್ತವೆ...
"ಕಂಪನಿಯಲ್ಲಿ ಕಾಸ್ಟ್ ಆಪ್ಟಿಮೈಸೇಷನ್ ನಡೆಯುತ್ತಿದೆ. ರಾಜೀನಾಮೆ ಪಡೆಯುತ್ತಿರುವವ ಉದ್ಯೋಗಿಗಳ ಪಟ್ಟಿಯಲ್ಲಿ ನಿಮ್ಮ ಹೆಸರೂ ಇದೆ. ನಾಳೆ ಬೆಳಿಗ್ಗೆ 10 ಗಂಟೆಯೊಳಗೆ ನೀವಾಗಿಯೇ ರಾಜೀನಾಮೆ ನೀಡಿದರೆ, ನಿಮ್ಮನ್ನು ಗೌರವಯುತವಾಗಿ ಕಳಿಸಿಕೊಡಲಾಗುತ್ತದೆ. ಇಲ್ಲದಿದ್ದರೆ, ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ. ಹೀಗಾದರೆ ನಿಮಗೆ ಯಾವ ಲಾಭವೂ ಸಿಗುವುದಿಲ್ಲ..."
ಹೀಗೆ ಕಂಪನಿಯ ಮಹಿಳಾ ಮಾನವ ಸಂಪನ್ಮೂಲ ಅಧಿಕಾರಿ ಉದ್ಯೋಗಿಗೆ ಒತ್ತಿಒತ್ತಿ ಹೇಳುತ್ತಿರುವುದು ಆಡಿಯೋದಲ್ಲಿ ದಾಖಲಾಗಿದೆ. ಉದ್ಯೋಗಿ ನನಗೆ ಮಾನವೀಯತೆಯ ದೃಷ್ಟಿಯಿಂದ ಸ್ವಲ್ಪವಾದರೂ ಕಾಲಾವಕಾಶ ನೀಡಬೇಕು ಎಂದು ಗೋಗರೆದರೂ ಆ ಮಹಿಳೆ ಕೇಳಲಿಲ್ಲ. ನಾನು ಮೇಲಿನ ಅಧಿಕಾರಿಯನ್ನು ಭೇಟಿಯಾಗಲಾದರೂ ಅವಕಾಶ ನೀಡಿ ಎಂದರೂ ಆ ಮಹಿಳೆ ಸೊಪ್ಪು ಹಾಕಲಿಲ್ಲ.
ಇದು ಕಂಪನಿಯ ಹಿರಿಯ ಅಧಿಕಾರಿಗಳ ನಿರ್ಧಾರ, ನನ್ನ ನಿರ್ಧಾರವಲ್ಲ. ಕಂಪನಿಯ ಎಂಡಿ, ಸಿಇಓರಂಥವರೇ ಈ ನಿರ್ಧಾರ ತೆಗೆದುಕೊಂಡ ಮೇಲೆ ಯಾರನ್ನು ಹೋಗಿ ಭೇಟಿಯಾದರೆ ಏನು ಪ್ರಯೋಜನ ಎಂದು ಆ ಮಹಿಳೆ ಉದ್ಯೋಗಿಯನ್ನು ದಬಾಯಿಸಿ ಕಳಿಸಿದ್ದಾಳೆ. ಆ ಕಂಪನಿಯ ಸಿಇಓ ನಂತರ, ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದ್ದಕ್ಕೆ ಕ್ಷಮೆಯನ್ನೂ ಕೇಳಿದ್ದಾರೆ! ಇದ್ಯಾವ ನ್ಯಾಯ ಹೇಳಿ?
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications