ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಡಿನೋಟಿಫೈ ಆರೋಪ
ಬೆಂಗಳೂರು, ಜನವರಿ 3: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭೂಪಸಂದ್ರದ ಜಮೀನು ಡಿನೋಟಿಫೈ ಆರೋಪ ಮಾಡಿ ಮುಖಭಂಗ ಅನುಭವಿಸಿದ್ದ ರಾಜ್ಯ ಬಿಜೆಪಿ ಇದೀಗ ಮತ್ತೊಂದು ಡಿನೋಟಿಫೈ ಆರೋಪ ಮಾಡಿದೆ.
ಸಿಎಂ ಸಿದ್ದರಾಮಯ್ಯ ಅವರು ಸುಮಾರು 200 ರು. ಕೋಟಿ ರು. ಬೆಲೆ ಬಾಳುವ 2 ಎಕ್ಕರೆ 39 ಗುಂಟೆ ಜಾಗವನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಆರ್ ಅಶೋಕ್, " ಜಯನಗರದ ಲಾಲ್ ಬಾಗ್ ಹತ್ತಿರದ ಅಶೋಕ ಪಿಲ್ಲರ್ ಬಳಿ ಸಾರ್ವಜನಿಕ ಉದ್ಯಾನವನಕ್ಕೆ ಮೀಸಲಿಟ್ಟ ಸರ್ವೇ ನಂಬರ್ 27(1), 28(4), 28(5) ಮತ್ತು 28(6)ರಲ್ಲಿ 2 ಎಕ್ಕರೆ 39 ಗುಂಟೆಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿ ಬೆಂಗಳೂರು ಜನರಿಗೆ ದ್ರೋಹ ಬಗೆದಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಈವರೆಗೆ ಯಾವೊಬ್ಬ ಮುಖ್ಯಮಂತ್ರಿಗಳು ಈ 2 ಎಕ್ಕರೆ 39 ಗುಂಟೆ ಜಾಗವನ್ನು ಡಿನೋಟಿಫೈ ಮಾಡಲು ನಿರಾಕರಿಸಿದ್ದಾರೆ. ಆದರೆ, ಸಿದ್ದರಾಂಯ್ಯ ಅವರು 2014ರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಅಶೋಕ್ ಕಾರಿವಾಲಾ ಎನ್ನುವರಿಗೆ ಅಕ್ರಮವಾಗಿ ಡಿನೋಟಿಪೈ ಮಾಡಿಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಈಗಾಗಲೇ ಮಾಲಿನ್ಯ ಪ್ರಮಾಣ ಹೆಚ್ಚುತ್ತಿದೆ. ಸಾರ್ವಜನಿಕರಿಗೆ ಮೀಸಲಿಟ್ಟ ಜಾಗವನ್ನು ಡಿನೋಟಿಪೈಗೆ ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೂ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್ ನ ಆದೇಶವನ್ನು ಉಲ್ಲಂಘಿಸಿ ಡಿನೋಟಿಪೈ ಮಾಡಿದ್ದಾರೆ ಎಂದು ಕಿಡಿಕಾರಿದರು.
ಇದನ್ನು ಬೆಂಗಳೂರು ಬಿಜೆಪಿ ಘಟಕ ಗಂಭೀರವಾಗಿ ತೆಗೆದುಕೊಂಡು ಈ ಜಾಗವನ್ನು ಸಾರ್ವಜನಿಕ ಉದ್ಯಾನಕ್ಕೆ ಬಿಟ್ಟುಕೊಡುವವರೆಗೂ ಬಿಡುವುದಿಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡದರು.
ಈ ಹಿಂದೆಯೂ ಬಿಜೆಪಿ ಸಿದ್ದರಾಮಯ್ಯ ವಿರುದ್ಧ ಭೂಪಸಂದ್ರದ 6.26 ಗುಂಟೆ ಜಮೀನು ಡಿನೋಟಿಫೈ ಆರೋಪ ಮಾಡಿದ್ದರು. ಆದರೆ, ಈ ಜಮೀನು ಮಾಲೀಕರಲ್ಲಿ ಒಬ್ಬರಾದ ಕೆ.ವಿ. ಜಯಲಕ್ಷ್ಮಮ್ಮ ಅವರ ಮಗ ಕೆ.ವಿ. ಕೃಷ್ಣ ಪ್ರಸಾದ್, ಭೂಪಸಂದ್ರ ಗ್ರಾಮದಲ್ಲಿ ನಮ್ಮ ವಶದಲ್ಲಿರುವ 6.26 ಎಕರೆ ಜಮೀನಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications