Namma Metro: ಮೆಟ್ರೊ ಯೋಜನೆ ಬಗ್ಗೆ ಮಹತ್ವದ ಸಲಹೆ ಕೊಟ್ಟ ಆರ್ ಅಶೋಕ್
ಬೆಂಗಳೂರು, ಜುಲೈ 21: ಸುರಂಗ ರಸ್ತೆ ಮಾಡಲು ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡಲು ಸರ್ಕಾರದ ಬಳಿ ಹಣವಿಲ್ಲ. ಇಲ್ಲಿ ಗಟ್ಟಿಯಾದ ಬಂಡೆಗಳಿವೆ. ಇಲ್ಲಿ ಸುರಂಗ ಕೊರೆದು ರಸ್ತೆ ಮಾಡಲು ಸಾಧ್ಯವಿಲ್ಲ. ಕೇಂದ್ರ ಹೆದ್ದಾರಿ ಸಚಿವರನ್ನು ಭೇಟಿ ಮಾಡಿ ಸುರಂಗ ರಸ್ತೆ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಇದರ ಬದಲು ಮೆಟ್ರೊ ಯೋಜನೆಗೆ ಒತ್ತು ನೀಡಿದರೆ ಸಾಕಾಗುತ್ತದೆ. ಮೆಟ್ರೊ ಯೋಜನೆಯನ್ನು ಇನ್ನಷ್ಟು ವಿಸ್ತರಿಸಿದರೆ, ಟ್ರಾಫಿಕ್ ಜಾಮ್ ನಿವಾರಣೆಯಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸಲಹೆ ನೀಡಿದರು.
ಕಾಂಗ್ರೆಸ್ ಪಕ್ಷದ ನಾಯಕರು ಬೀದಿಯಲ್ಲಿ ಬಡಿದಾಡಿಕೊಳ್ಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ನಡೆಸಿದ ಸಮಾವೇಶ ಸರ್ಕಾರಿ ಕಾರ್ಯಕ್ರಮ ಅಲ್ಲ, ಅದು ಡಿ.ಕೆ.ಶಿವಕುಮಾರ್ ಅವರನ್ನು ಮುಗಿಸಲು ಮಾಡಿದ ಕಾರ್ಯಕ್ರಮ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಮಾವೇಶ ಕಾಂಗ್ರೆಸ್ನ ಒಡಕನ್ನು ತೋರಿಸಿದೆ. ಅಲ್ಲಿ ಒಬ್ಬರೂ ಡಿ.ಕೆ.ಶಿವಕುಮಾರ್ ಪರ ಮಾತಾಡಲಿಲ್ಲ. ಡಿಕೆಶಿಗೆ ಪಾಠ ಕಲಿಸಲು ಹಾಗೂ ಅಪಮಾನ ಮಾಡಲು ಈ ಸಮಾವೇಶ ನಡೆಸಲಾಗಿದೆ. ಡಿಕೆಶಿ ಈಗ ಎರಡನೇ ದರ್ಜೆಯ ನಾಯಕರಾಗಿಬಿಟ್ಟಿದ್ದಾರೆ. ಅದು ಸರ್ಕಾರಿ ಕಾರ್ಯಕ್ರಮವಲ್ಲ. ಡಿ.ಕೆ.ಶಿವಕುಮಾರ್ ಅವರನ್ನು ಮುಗಿಸಲು ಗುದ್ದಲಿ ಪೂಜೆ ಮಾಡಲಾಗಿದೆ ಎಂದರು.

ಇದು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಆಂತರಿಕ ಜಗಳ. ಬಿಜೆಪಿಗೆ ಸರ್ಕಾರವನ್ನು ಬೀಳಿಸುವ ಅಗತ್ಯವಿಲ್ಲ. ಈ ಸರ್ಕಾರ ಕಾಂಗ್ರೆಸ್ನ ಆಂತರಿಕ ಕಲಹದಿಂದಲೇ ಬಿದ್ದುಹೋಗಲಿದೆ. ಸುರ್ಜೇವಾಲ ರಾಜ್ಯಕ್ಕೆ ಬಂದು ಶಾಸಕರ ಅಹವಾಲುಗಳನ್ನು ಆಲಿಸಿದ್ದಾರೆ. ಇವರ ಜಗಳ ಜನರ ಮುಂದೆ ಬಯಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮೈಸೂರಿನ ಸಮಾವೇಶದಲ್ಲಿ ಕೀಳಾಗಿ ಮಾತಾಡಿದ್ದಾರೆ. ಪ್ರಧಾನಿ ಬೊಗಳುತ್ತಾರೆಂದು ಹೇಳುವುದು ಕಾಂಗ್ರೆಸ್ ನಾಯಕರ ಮನಸ್ಥಿತಿಯನ್ನು ತೋರಿಸುತ್ತದೆ. ಈ ಹಿಂದೆ ಛಲವಾದಿ ನಾರಾಯಣಸ್ವಾಮಿ ಗಾದೆಮಾತು ಹೇಳಿದಾಗ ಸಂಸ್ಕೃತಿ ಬಗ್ಗೆ ಇವರೇ ಮಾತಾಡಿದ್ದರು. ಇನ್ನು ಅಧಿಕಾರಕ್ಕೆ ಬರುವುದಿಲ್ಲ ಎಂಬ ಕಾರಣಕ್ಕೆ ಇವರು ಈ ರೀತಿ ಕೀಳಾಗಿ ಮಾತಾಡುತ್ತಿದ್ದಾರೆ ಎಂದರು.
ಬೆಂಗಳೂರಿನಲ್ಲಿ ಅಭಿವೃದ್ಧಿ ಮಾಡದೆ ಹೋಳು ಮಾಡಲಾಗಿದೆ. ಟ್ರಾಫಿಕ್ ಜಾಮ್, ಪ್ರವಾಹ, ಕಸದ ಸಮಸ್ಯೆ ಯಾವುದು ಕೂಡ ಈ ಕ್ರಮದಿಂದ ನಿವಾರಣೆಯಾಗುವುದಿಲ್ಲ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಒಡೆದರೆ ಪ್ರಗತಿಯಾಗಲ್ಲ. ಬ್ರ್ಯಾಂಡ್ ಎಂಬ ಸ್ಲೋಗನ್ನಿಂದ ಮಾತ್ರ ಅಭಿವೃದ್ಧಿ ಮಾಡುತ್ತಿದ್ದಾರೆ. ನಗರವನ್ನು ಒಡೆಯುವುದರಿಂದ ಆದಾಯ ಹಂಚಿಕೆಯಲ್ಲಿ ತಾರತಮ್ಯ ಉಂಟಾಗಿ ಇನ್ನಷ್ಟು ಕಲಹ ಉಂಟಾಗಲಿದೆ. ಬೆಂಗಳೂರಿನ ಕೇಂದ್ರದಲ್ಲಿ ಎಲ್ಲೂ ಕಸದ ಘಟಕ ಇಲ್ಲ. ಈ ಕಸವನ್ನು ಹೊರವಲಯಕ್ಕೆ ಸಾಗಿಸಿದರೆ, ಸ್ವೀಕಾರ ಮಾಡುವುದಿಲ್ಲ ಎಂದು ಅಲ್ಲಿನ ಜನರು ಹೇಳಬಹುದು. ಇದರಿಂದ ಇನ್ನಷ್ಟು ಜಗಳವಾಗಲಿದೆ. ಇವರು ಲಾಟರಿ ಸಿಎಂ ಎಂದು ಶಾಸಕರೇ ಹೇಳಿದ್ದಾರೆ. ಇವರು ಜನನಾಯಕರಲ್ಲ, ಚುನಾಯಿತ ಸಿಎಂ ಅಲ್ಲ. ಆದ್ದರಿಂದ ಇನ್ನು ಮುಂದೆ ಸಿದ್ದರಾಮಯ್ಯ ತಾವು ಲಾಟರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದು ಹೇಳಿಕೊಳ್ಳಬೇಕು ಎಂದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications