ಆರ್.ಅಶೋಕ್ಗೆ ಸತತ ನಿರಾಸೆ ನೀಡುತ್ತಿರುವ ಬಿಜೆಪಿ ಹೈಕಮಾಂಡ್
ಬೆಂಗಳೂರು, ಸೆಪ್ಟೆಂಬರ್ 16: ಯಡಿಯೂರಪ್ಪ ಸರ್ಕಾರಕ್ಕೆ ಅಧಿಕಾರಕ್ಕೆ ಬಂದಂದಿನಿಂದಲೂ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ಗೆ ನಿರಾಸೆಯ ಮೇಲೆ ನಿರಾಸೆಗಳು ಆಗುತ್ತಲೇ ಇದೆ.
ಡಿಸಿಎಂ ಹುದ್ದೆಯ ಪ್ರಮುಖ ಆಕಾಂಕ್ಷಿ ಆಗಿದ್ದ ಆರ್.ಅಶೋಕ್ ಅವರನ್ನು ಡಿಸಿಎಂ ಹುದ್ದೆಯಿಂದ ದೂರವಿಟ್ಟು, ಅವರ ಬದಲಿಗೆ ಅವರದೇ ಜಾತಿಯ ಅಶ್ವತ್ಥನಾರಾಯಣ್ ಅವರನ್ನು ಡಿಸಿಎಂ ಮಾಡಲಾಯಿತು. ಆ ಮೂಲಕ ಆರ್.ಅಶೋಕ್ಗೆ ಬದಲಿ ಒಕ್ಕಲಿಗ ನಾಯಕನನ್ನು ಮುನ್ನೆಲೆಗೆ ತರಲು ಬಿಜೆಪಿ ಯತ್ನಿಸಿತು.
ಖಾತೆ ಹಂಚಿಕೆ ವಿಷಯದಲ್ಲೂ ಸಹ, ಗೃಹ ಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿ ಅಶೋಕ್ಗೆ ಕಂದಾಯ ಸಚಿವ ಸ್ಥಾನ ನೀಡಲಾಗಿದೆ. ಈಗ ಉಸ್ತುವಾರಿ ಸಚಿವ ಸ್ಥಾನದಲ್ಲಿಯೂ ಅಶೋಕ್ ನಿರಾಸೆ ಅನುಭವಿಸಿದ್ದಾರೆ.
ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಅಶೋಕ್ಗೆ ಮತ್ತೆ ನಿರಾಸೆ ಆಗಿದ್ದು, ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ. ಜೊತೆಗೆ ಪ್ರಭಾರಿಯಾಗಿ ಮಂಡ್ಯವನ್ನು ನೀಡಲಾಗಿದೆ.

ಚಿನ್ನದ ಮೊಟ್ಟೆ ಇಡುವ ಕೋಳಿ ಬೆಂಗಳೂರು ನಗರ
ಚಿನ್ನದ ಮೊಟ್ಟೆ ಇಡುವ ಕೋಳಿಯಾದ ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ಭಾರಿ ಪೈಪೋಟಿ ಪಕ್ಷದ ಒಳಗೆ ನಡೆಯುತ್ತಿತ್ತು. ಆರ್.ಅಶೋಕ್ ಅವರು ಪೈಪೋಟಿಯ ಮುಂಚೂಣಿಯಲ್ಲಿದ್ದರು. ಬೆಂಗಳೂರು ಉಸ್ತುವಾರಿ ಸ್ಥಾನವನ್ನು ಅವರಿಗೆ ನೀಡಲಾಗುತ್ತದೆ ಎನ್ನಲಾಗಿತ್ತು, ಆದರೆ ಹಾಗಾಗಿಲ್ಲ.

ಬೆಂಗಳೂರು ನಗರ ಉಸ್ತುವಾರಿ ಯಡಿಯೂರಪ್ಪ ಬಳಿ
ಬೆಂಗಳೂರು ನಗರ ಉಸ್ತುವಾರಿ ಸಚಿವ ಸ್ಥಾನವನ್ನು ಯಡಿಯೂರಪ್ಪ ಅವರು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಆ ಮೂಲಕ ಪಕ್ಷದ ಒಳಗೆ ಏಳಬಹುದಾಗಿದ್ದ ಸಂಭಾವ್ಯ ಅಸಮಾಧಾನವನ್ನು ತಡೆಯುವ ಯತ್ನ ಮಾಡಿದ್ದಾರೆ. ಆದರೆ ಇದು ಆರ್.ಅಶೋಕ್ ಕಣ್ಣು ಕೆಂಪಗಾಗಿಸಿದೆ.

ಶ್ರೀರಾಮುಲು ಪಾಲಿಗಿಲ್ಲ ಬಳ್ಳಾರಿ ಉಸ್ತುವಾರಿ
ಶ್ರೀರಾಮುಲು ಅವರೂ ಸಹ ಉಸ್ತುವಾರಿ ಸಚಿವ ನೇಮಕ ಪಟ್ಟಿಯ ಬಗ್ಗೆ ಅಸಮಾಧಾನ ವ್ಯಕ್ತಪಡಸಿದ್ದಾರೆ. ರಾಮುಲು ಬಯಸಿದ್ದ ಬಳ್ಳಾರಿ ಉಸ್ತುವಾರಿ ಸಚಿವ ಸ್ಥಾನ ಅವರಿಗೆ ದೊರೆತಿಲ್ಲ ಬದಲಿಗೆ ಅವರಿಗೆ ರಾಯಚೂರು ನೀಡಲಾಗಿದೆ.

ಡಿಸಿಎಂ ಲಕ್ಷ್ಮಣ ಸವದಿಗೂ ಬೇಸರ
ಅದೃಷ್ಟದ ಡಿಸಿಎಂ ಲಕ್ಷ್ಮಣ ಸವದಿಗೂ ಈ ಪಟ್ಟಿಯಿಂದ ಬೇಸರವಾಗಿದೆ ಎನ್ನಲಾಗಿದೆ. ಸವದಿ ಅವರಿಗೆ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಬೇಕಾಗಿತ್ತು. ಆದರೆ ಅವರಿಗೆ ಬಳ್ಳಾರಿ ಉಸ್ತುವಾರಿಯನ್ನು ನೀಡಲಾಗಿದೆ.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ''












Click it and Unblock the Notifications