Get Updates
Get notified of breaking news, exclusive insights, and must-see stories!

Siddaramaiah: ಮುಡಾ ಹಗರಣದಲ್ಲಿ 'ಸಿಎಂ' ಮಾಡಿದ್ದ ಕರ್ಮಕಾಂಡದ ದಾಖಲೆ ಬಿಡುಗಡೆ: ಇದು ರೋಚಕ ಸ್ಟೋರಿ

ಬೆಂಗಳೂರು, ಆಗಸ್ಟ್ 07: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA scam) ನಿವೇಶನ ಹಂಚಿಕೆಯಲ್ಲಿ ಆದ ಅಕ್ರಮಗಳು ನೇರವಾಗಿ ಸಿಎಂ ಸಿದ್ದರಾಮಯ್ಯ ಅವರ ಕೊರಳಿಗೆ ಸುತ್ತಿಕೊಳ್ಳುತ್ತಿದೆ. ಇದೀಗ ಸಾಲದೆಂಬಂತೆ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಸಿದ್ದರಾಮಯ್ಯ ಅವರು ಸೈಟಿಗಾಗಿ ಸಾಕಷ್ಟು ಅಕ್ರಮ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಅವರು ಪ್ರಮುಖ ದಾಖಲೆಗಳನ್ನು, ಸಾಕ್ಷ್ಯಾಧಾರಗಳನ್ನು ಬಿಡುಗಡೆ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದೆ. ಈ ಜಮೀನಿಗೆ 27 ಹಕ್ಕುದಾರರಿದ್ದರೂ ಕೇವಲ ಒಬ್ಬರ ಬಳಿ ಸಹಿ ಹಾಕಿಸಿಕೊಂಡು ಅಕ್ರಮ ಮಾಡಲಾಗಿದೆ ಎಂದು ಬುಧವಾರ ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ದೂರಿದರು. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಜಮೀನಿನ ಮೂಲ ಹಕ್ಕುದಾರರು, ಇತಿಹಾಸದ ಕುರಿತು ಅವರು ವಿವರಣೆ ಕೊಟ್ಟರು.

R Ashok Released Proof and Document of CM Siddaramaiah Did Huge Scam in MUDA

ಹಗರಣ ನಡೆದಿದ್ದು ಹೇಗೆ? ರೋಚಕ ಸ್ಟೋರಿ ಬಿಚ್ಚಿಟ್ಟ ಆರ್.ಅಶೋಕ್

ಸಿಎಂ ಸಿದ್ದರಾಮಯ್ಯ ಖರೀದಿಸಿದ ಜಾಗ ನಿಂಗ ಎಂಬುವರಿಗೆ ಸೇರಿದ ಜಮೀನಾಗಿದೆ. 1936 ರಲ್ಲಿ ನಿಂಗ ಜಮೀನು ಖರೀದಿಸಿದ್ದರು. ಅವರು 28 ವರ್ಷಗಳ ಹಿಂದೆ ನಿಧನರಾಗಿದ್ದು, ಅವರ ಪತ್ನಿ ನಿಂಗಮ್ಮ 1990 ರಲ್ಲಿ ಮೃತರಾಗಿದ್ದರು. ಇದು ನಿಂಗ ಮತ್ತು ನಿಂಗಮ್ಮ ಅವರ ಸ್ವಯಾರ್ಜಿತ ಆಸ್ತಿಯಾಗಿದ್ದು, ಅವರ ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಾಗಿದೆ.

ನಿಂಗ ಅವರಿಗೆ ಮೂರು ಮಕ್ಕಳಿದ್ದು, ಅವರ ಕುಟುಂಬದವರು 27 ಜನರಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ದೇವರಾಜು ಎಂಬ ಒಬ್ಬ ವ್ಯಕ್ತಿಯಿಂದ ಮಾತ್ರ ಸಹಿ ಹಾಕಿಸಿಕೊಂಡಿದ್ದಾರೆ ಎಂದು ತಿಳಿಸಿದರು.

1968 ರಲ್ಲಿ ಸರ್ವೆ ಸಂಖ್ಯೆ 464 ರಲ್ಲಿ ನಿಂಗ ಅವರ ಪುತ್ರ ಮಲ್ಲಯ್ಯ ಅವರ ಹೆಸರಿಗೆ ಈ ಜಮೀನು ನೋಂದಣಿಯಾಗಿತ್ತು. 1990 ರಲ್ಲಿ ಒಟ್ಟು 462 ಎಕರೆ ಜಮೀನಿನಲ್ಲಿ ದೇವನೂರು ಬಡಾವಣೆ ಮುಡಾ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಬಳಿಕ ಜಮೀನು ಸಂಬಂಧ ದೇವರಾಜು ಅವರಿಗೆ ಮುಡಾದಿಂದ 3 ಲಕ್ಷ ರೂ. ಅವಾರ್ಡ್ ನೀಡಲಾಗಿತ್ತು. ಈ ಅವಾರ್ಡ್ ನೋಟಿಸ್‌ಗೆ ಮಲ್ಲಯ್ಯ ಸಹಿ ಹಾಕಿದ್ದರು. ನಂತರ 1998 ರಲ್ಲಿ ಮುಡಾ ಸರ್ವೆ ಸಂಖ್ಯೆ 464 ನ್ನು ಭೂ ಸ್ವಾಧೀನದಿಂದ ಕೈ ಬಿಟ್ಟಿತ್ತು ಎಂದು ಹೇಳಿದರು.

ಸಿದ್ದರಾಮಯ್ಯನವರು ಅಂದು ಉಪಮುಖ್ಯಮಂತ್ರಿಯಾಗಿ ಕಾಲ 1998 ರಲ್ಲಿ ಜಮೀನು ಮುಡಾದಿಂದ ಡಿ ನೋಟಿಫಿಕೇಶನ್ ಆಗಿತ್ತು. ತಂದೆ ತಾಯಿ ಸತ್ತ ನಂತರ ಕುಟುಂಬದ ಎಲ್ಲರ ಸಹಿ ಪಡೆಯಬೇಕಾಗುತ್ತದೆ. 2004ರಲ್ಲಿ ದೇವರಾಜು ಅವರಿಂದ ಸಿದ್ದರಾಮಯ್ಯ ಅವರ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ 3 ಎಕರೆ 16 ಗುಂಟೆ ಜಮೀನನ್ನು ಕ್ರಯಕ್ಕೆ ಪಡೆದು ಕಾನೂನು ಬಾಹಿರವಾಗಿ ನೋಂದಣಿ ಮಾಡಿಸಿಕೊಂಡಿದ್ದರು.

2005 ರಲ್ಲಿ ಇದು ಭೂ ಪರಿವರ್ತನೆಯಾಯಿತು. 2001 ರಲ್ಲೇ ಬಡಾವಣೆ ಮಾಡಲು ಇದನ್ನು ಎಲ್‌ಆಂಡ್‌ಟಿ ಗೆ ನೀಡಲಾಗಿತ್ತು. ಅದಾದ ನಂತರ ಈ ಜಮೀನು ಪರಿವರ್ತನೆಯಾಗಿದೆ ಎಂದು ಹೇಳಿದರು.

R Ashok Released Proof and Document of CM Siddaramaiah Did Huge Scam in MUDA

ಇದು ಪೂರ್ವ ಯೋಜಿತ ಅಕ್ರಮ

ಈ ಜಮೀನು ಮೂಲೆಯಲ್ಲಿದ್ದುದರಿಂದ ಇದು ಬೇಕಿಲ್ಲ ಎಂದು ಕೈ ಬಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಆದರೆ ಇದು ಮಧ್ಯಭಾಗದಲ್ಲಿ ಬರುತ್ತದೆ. ದಲಿತ ವ್ಯಕ್ತಿ ನಿಂಗನಿಗೆ ಸೇರಿದ ಜಮೀನಿನ ದಾಖಲೆಗಳ ವಿವರ ದೊಡ್ಡ ದೊಡ್ಡ ಹುದ್ದೆಗಳಲ್ಲಿದ್ದ ಸಿದ್ದರಾಮಯ್ಯನವರಿಗೆ ತಿಳಿಯಲೇ ಇಲ್ಲ. ಈ ಜಮೀನನ್ನು ಸಿದ್ದರಾಮಯ್ಯ ಪತ್ನಿಗೆ ಭಾವ ಅರಿಶಿನ ಕುಂಕುಮಕ್ಕೆ ನೀಡಿದ್ದಾರೆ. ಇದು ಪೂರ್ವ ಯೋಜಿತ ಅಕ್ರಮವಾಗಿದೆ.

ಸಿಎಂ ಸಿದ್ದರಾಮಯ್ಯ ಪತ್ನಿ 2014 ರಲ್ಲಿ ಮುಡಾಗೆ ಪತ್ರ ಬರೆದು ಬದಲಿ ಪರಿಹಾರ ಜಮೀನು ನೀಡುವಂತೆ ಕೋರಿದ್ದರು. ಇದಕ್ಕೆ ಉತ್ತರ ಬರೆದ ಮುಡಾ ಆಯುಕ್ತರು, ಬದಲಿ ಜಮೀನು ಇಲ್ಲವೆಂದು, ಅದಕ್ಕೆ ತತ್ಸಮಾನ ಜಮೀನು ನೀಡಲಾಗುವುದು ಎಂದು ತಿಳಿಸುತ್ತಾರೆ. ನಂತರ 2014 ರಲ್ಲಿ 50:50 ವಿಧಾನದಲ್ಲಿ ಪರಿಹಾರ ನೀಡಲಾಯಿತು. 2023 ರಲ್ಲಿ ನಗರಾಭಿವೃದ್ಧಿ ಇಲಾಖೆ ಇವೆಲ್ಲವೂ ನಿಯಮಬಾಹಿರ ಎಂದು ಆದೇಶ ಮಾಡಿತ್ತು ಎಂದರು.

ನಿವೇಶನಕ್ಕಾಗಿ ಅಧಿಕಾರಿಗಳ ಮೇಲೆ ಸಿಎಂ ಒತ್ತಡ

ಈ ಜಮೀನಿನ ಮಾಲಿಕತ್ವದ ವಿಷಯದಲ್ಲೇ ಇನ್ನೂ ತೀರ್ಮಾನ ಆಗಿಲ್ಲ. ಆದರೂ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರು ಅದನ್ನು ಪರಿಶೀಲಿಸಿಲ್ಲ. ಈ ಜಮೀನನ್ನು ಮೃತರಾದ ನಿಂಗ ಅವರ ಹೆಸರಿನಲ್ಲಿ ಡಿ ನೋಟಿಫೈ ಮಾಡಿದ್ದಾರೆ. ಬದಲಿ ಜಮೀನು ಪರಿಹಾರ ನೀಡುವುದಾದರೆ ಅದೇ ಜಾಗದಲ್ಲಿ ನಿವೇಶನ ನೀಡಬೇಕು. ಆದರೆ ಬೆಲೆಬಾಳುವ ಸೈಟುಗಳನ್ನು ನೀಡಿದ್ದಾರೆ. ಇದಕ್ಕೆ ಅಧಿಕಾರಿಗಳ ಮೇಲೆ ಯಾರು ಒತ್ತಡ ಹೇರಿದ್ದಾರೆ? ಎಂದು ಪ್ರಶ್ನೆ ಮಾಡಿದರು.

14 ಸೈಟುಗಳ ನುಂಗಿರುವ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ 40 ವರ್ಷಗಳ ರಾಜಕೀಯದಲ್ಲಿ ಕ್ಲೀನ್ ಎಂದು ಹೇಳಿ, ಕ್ಲೀನ್‌ ಆಗಿ 14 ಸೈಟುಗಳನ್ನು ನುಂಗಿದ್ದಾರೆ. ಈ ಹಿಂದೆ ರೀಡು ಪ್ರಕರಣದಲ್ಲಿ ಕೆಂಪಣ್ಣ ಆಯೋಗ ನೇಮಿಸಿ ಆರು ವರ್ಷ ಕಳೆದರೂ ವರದಿ ಬರಲಿಲ್ಲ. ಅದೇ ತಂತ್ರವನ್ನು ಪ್ರಯೋಗಿಸಿ ದೇಸಾಯಿ ಆಯೋಗ ರಚಿಸಿದ್ದು, ಇದಕ್ಕೆ 60 ವರ್ಷ ಅವಧಿ ನೀಡುತ್ತಾರಾ ಎಂದು ಸ್ಪಷ್ಟಪಡಿಸಬೇಕು ಎಂದರು.

ಕ್ಲೀನ್‌ ಎಂಬ ಪಟ್ಟವನ್ನು ರಾಜ್ಯ ಜನರು ನೀಡಬೇಕಿದ್ದರೂ, ಮುಖ್ಯಮಂತ್ರಿಯವರು ತಮ್ಮನ್ನು ತಾವೇ ಕ್ಲೀನ್‌ ಎಂದು ಹೇಳಿಕೊಳ್ಳುತ್ತಿದ್ದಾರೆ. ಸದನದಲ್ಲಿ ಮಾತನಾಡಿದ್ದನ್ನು ಮರುದಿನ ಪತ್ರಿಕೆಗಳಲ್ಲಿ ಜಾಹೀರಾತು ನೀಡುತ್ತಾರೆ. ಹಣದ ಬಲ ಇದ್ದವರಿಗೆ ಮಾತ್ರ ಸದನದಲ್ಲಿ ಸ್ಥಾನ ಎಂದು ಅವರೇ ತೋರಿಸಿದಂತಾಗಿದೆ. ಈಗ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಅವರು ಆಗ್ರಹಿಸಿದರು.

ಸದ್ಯ ಇದೇ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಲಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+