ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಒಂದು ವಾರದ ಬಳಿಕ ಲಾಕ್‌ಡೌನ್‌ ಇಲ್ಲ' ಆರ್ ಅಶೋಕ್ ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಜುಲೈ 17: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದು ವಾರದ ಬಳಿಕವೂ ಲಾಕ್‌ಡೌನ್‌ ಮುಂದುವರಿಯಲಿದೆ ಎಂಬ ಚರ್ಚೆಗೆ ಕಂದಾಯ ಸಚಿವ ಆರ್ ಅಶೋಕ್ ತೆರೆ ಎಳೆದಿದ್ದಾರೆ.

ಬೆಂಗಳೂರಿನಲ್ಲಿ ಒಂದು ವಾರದ ನಂತರ ಲಾಕ್‌ಡೌನ್ ವಿಸ್ತರಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸಿಎಂ ಜೊತೆಗಿನ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಯಾವುದೇ ಕಾರಣಕ್ಕೂ ಲಾಕ್‌ಡೌನ್ ಮುಂದುವರಿಯಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ವಾರ ಲಾಕ್‌ಡೌನ್ ಮುಂದುವರಿಕೆ?ಬೆಂಗಳೂರಿನಲ್ಲಿ ಮತ್ತೊಂದು ವಾರ ಲಾಕ್‌ಡೌನ್ ಮುಂದುವರಿಕೆ?

'ಲಾಕ್ ಡೌನ್ ಮಾಡುವುದರಿಂದ ಬರಿ ಸೋಂಕು ಮುಂದೂಡಬಹುದು ಅಷ್ಟೆ. ಒಂದು ವಾರದ ಲಾಕ್ ಡೌನ್ ಆದ ಬಳಿಕ ಮತ್ತೆ ಅನ್ ಲಾಕ್ ಸಂದರ್ಭದಲ್ಲಿ ಇದ್ದ ಕಾನೂನುಗಳೇ ಮುಂದುವರೆಯುತ್ತದೆ. ಲಾಕ್ ಡೌನ್ ಮುಂದುವರೆಸುವ ಯೋಚನೆ ಸರ್ಕಾರಕ್ಕೆ ಇಲ್ಲ' ಎಂದು ಆರ್ ಅಶೋಕ್ ಸಭೆಯ ಬಳಿಕ ಹೇಳಿದ್ದಾರೆ.

R Ashok says no to extending lockdown Bengaluru

ಇಂದು ನಡೆದ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸಹ ಬೆಂಗಳೂರಿನಲ್ಲಿ ಇನ್ನೊಂದು ವಾರ ಲಾಕ್‌ಡೌನ್‌ ಬಗ್ಗೆ ಆಸಕ್ತಿ ತೋರಿಲ್ಲ ಎಂದು ತಿಳಿದು ಬಂದಿದೆ.

ಇದಕ್ಕೂ ಮುಂಚೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ''ಬೆಂಗಳೂರಿನಲ್ಲಿ ಇನ್ನೊಂದು ವಾರ ಲಾಕ್‌ಡೌನ್ ಅಗತ್ಯ ಇದೆ, ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇವೆ'' ಎಂದಿದ್ದರು.

English summary
Karnataka Minister R Ashoke says no to extending lockdown in bengaluru. Lockdown is not a solution to the pandemic he says.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X