ಸಿಲ್ಕ್ಬೋರ್ಡ್ ಸಂಚಾರ ದಟ್ಟಣೆಗೆ ಪರಿಹಾರ, ಹೊಸ ಫ್ಲೈಓವರ್: ಅಶೋಕ್
ಬೆಂಗಳೂರು, ಸೆಪ್ಟೆಂಬರ್ 07: ಬೊಮ್ಮನಹಳ್ಳಿ - ಬಿ.ಟಿ.ಎಂ ಲೇಔಟ್ ಸಂಪರ್ಕಿಸುವ ರಸ್ತೆ ಹಾಗೂ ಸೇತುವೆಯನ್ನು ಕಂದಾಯ ಸಚಿವ ಆರ್ ಅಶೋಕ್ ಅವರು ಇಂದು ಉದ್ಘಾಟಿಸಿದರು.
Recommended Video
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿ, ಅವಧಿಯಂತೆ ಬಿಬಿಎಂಪಿ ಚುನಾವಣೆ ನಡೆಸುವುದು ಸರಕಾರದ ಉದ್ದೇಶವಾಗಿದ್ದು, ಇದಕ್ಕೆ ಬೇಕಾದ ತಯಾರಿಯನ್ನು ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.
ಬೊಮ್ಮನಹಳ್ಳಿ - ಬಿ.ಟಿ.ಎಂ ಲೇಔಟ್ ರಸ್ತೆ ನಿರ್ಮಾಣದ ಕಾರ್ಯ ಒಂದು ಹಂತ ಪೂರ್ಣ ಆಗಿದೆ. ಇನ್ನು ಕೆಲವು ಭಾಗದ ಕಾಮಗಾರಿ ಪೂರ್ಣಗೊಳ್ಳಬೇಕಾಗಿದೆ. ಬೆಂಗಳೂರು ನಗರ ನಿರೀಕ್ಷೆಗಿಂತಲೂ ಹೆಚ್ಚು ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ಸೌಕರ್ಯ ಕೋಡುವ ದೃಷ್ಟಿಯಿಂದ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಹಳಷ್ಟು ಅಭಿವೃದ್ದಿ ಕಾರ್ಯ ಆಗುತ್ತಿದೆ.
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯದ್ದೇ ಸಮಸ್ಯೆ. ಸಿಲ್ಕ್ ಬೋರ್ಡ್ ನಲ್ಲಿ ನಾವೂ ಕೂಡಾ ಹಲವಾರು ಬಾರಿ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದೇವೆ. ಸಂಚಾರ ದಟ್ಟಣೆ ನಿವಾರಣೆಗೆ ಈ ರಸ್ತೆ ಕೊಡುಗೆ ನೀಡಲಿದೆ.

15 ಕೋಟಿ ರೂಪಾಯಿ ವೆಚ್ಚದ ಹೊಸ ರಸ್ತೆ
ಸುಮಾರು 15 ಕೋಟಿ ರೂಪಾಯಿ ವೆಚ್ಚದಲ್ಲಿ ಬೊಮ್ಮನಹಳ್ಳಿ - ಬಿ.ಟಿ.ಎಂ ಲೇಔಟ್ ಸಂಪರ್ಕಿಸುವ ರಸ್ತೆಯನ್ನು ನಿರ್ಮಿಸಲಾಗಿದೆ. ಇದಕ್ಕೆ ಈ ಭಾಗದ ಶಾಸಕರಾದ ಸತೀಶ್ ರೆಡ್ಡಿ ಹಾಗೂ ಬೊಮ್ಮನಹಳ್ಳಿ ಬಿಬಿಎಂಪಿ ಸದಸ್ಯರು ಹಾಗೂ ಉಪಮಹಾಪೌರರಾದ ರಾಮ್ ಮೋಹನ್ ರಾಜ್ ಅವರ ಒತ್ತಾಸೆ ಬಹಳಷ್ಟಿದೆ. ರಾಜ್ಯಕ್ಕೆ ಹೆಚ್ಚು ಸಂಪನ್ಮೂಲ ನೀಡುವ ನಗರ ಬೆಳೆಯುತ್ತಿರುವಂತೆ ಅದಕ್ಕೆ ಬೇಕಾದ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಅವಧಿಯಂತೆ ಬಿಬಿಎಂಪಿ ಚುನಾವಣೆ ನಡೆಯಬೇಕು
ಅವಧಿಯಂತೆ ಬಿಬಿಎಂಪಿ ಚುನಾವಣೆ ನಡೆಯಬೇಕು. ನಡೆಯಬೇಕು ಎನ್ನುವ ಉದ್ದೇಶದಿಂದಲೇ ಸಮಿತಿಗಳನ್ನು ರಚನೆ ಮಾಡಿದ್ದೇವೆ. ವಾರ್ಡಗಳನ್ನು ಪುನರ್ ರಚನೆ ಯಂತಹ ಕಾರ್ಯಗಳು ಅಧಿಕಾರಿಗಳಿಗೆ ಸಂಬಂಧಪಟ್ಟ ವಿಷಯವಾಗಿದೆ ಎಂದು ಹೇಳಿದರು. ಚುನಾವಣೆ ನಡೆಸುವುದು ಸರಕಾರದ ಉದ್ದೇಶವಾಗಿದ್ದು, ಇದಕ್ಕೆ ಬೇಕಾದ ತಯಾರಿ ನಡೆಯುತ್ತಿದೆ ಎಂದು ಅಶೋಕ್ ಹೇಳಿದರು.

ಸಿಲ್ಕ್ ಬೋರ್ಡ್ ಜಂಕ್ಷನ್ ಸಂಚಾರ ದಟ್ಟಣೆ
ಟ್ರೋಲ್ಗಳು ಹಾಗೂ ವೈರಲ್ ವಿಡಿಯೋಗಳ ಮೂಲಕ ವಿಶ್ವವಿಖ್ಯಾತಿಯನ್ನು ಪಡೆದಿರುವ ಸಿಲ್ಕ್ ಬೋರ್ಡ್ ಜಂಕ್ಷನ್ ನ ಸಂಚಾರ ದಟ್ಟಣೆಯನ್ನು ಸರಾಗಗೊಳಿಸುವ ಬೊಮ್ಮನಹಳ್ಳಿ - ಬಿ.ಟಿ.ಎಂ ಲೇಔಟ್ ರಸ್ತೆ ಹಾಗೂ ಸಂಪರ್ಕ ಸೇತುವೆಯನ್ನು ಈ ದಿನ ವಾಹನ ಸವಾರರ ಬಳಕೆಗೆ ಮುಕ್ತಗೊಳಿಸಲಾಗಿದೆ.
ಪ್ರತಿದಿನ ಲಕ್ಷಾಂತರ ವಾಹನ ಸವಾರರು ಈ ಜಂಕ್ಷನ್ ನಲ್ಲಿ ಸಂಚಾರ ದಟ್ಟಣೆಯ ಕಾರಣ ತೀವ್ರ ತೊಂದರೆಯನ್ನು ಅನುಭವಿಸುತ್ತಿದ್ದರು. ಈ ಬವಣೆಯನ್ನು ನಿವಾರಿಸುವ ದೃಷ್ಟಿಯಿಂದ ಕೈಗೊಂಡ ಕಾಮಗಾರಿಯ ಪೂರ್ಣಗೊಂಡಿದೆ. ಈ ಸಂಪರ್ಕ ರಸ್ತೆಯ ಕಾರಣದಿಂದಾಗಿ ಸುಮಾರು 50 ಸಾವಿರ ವಾಹನ ಸವಾರರು ಸಂಚಾರ ದಟ್ಟಣೆಯ ಬವಣೆಯಿಂದ ಬಚಾವ್ ಆಗಲಿದ್ದಾರೆ.

ಗಣ್ಯಾತಿಗಣ್ಯರ ಉಪಸ್ಥಿತಿ
ಬೊಮ್ಮಹಳ್ಳಿ ಹಾಗೂ ಬಿ.ಟಿ.ಎಂ ಪ್ರದೇಶದ ಜನರ ಅನುಕೂಲಕ್ಕಾಗಿ ಉತ್ತಮ ಗುಣಮಟ್ಟದ ರಸ್ತೆಯನ್ನು ನಿರ್ಮಿಸಲಾಗಿದೆ ಎಂದು ಬೊಮ್ಮನಹಳ್ಳಿ ವಾರ್ಡ್ ನ ಪಾಲಿಕೆ ಸದಸ್ಯರೂ ಆಗಿರುವ ಉಪ ಮೇಯರ್ ಸಿ.ಆರ್.ರಾಮಮೋಹನ್ ರಾಜ್ ಅವರು ತಿಳಿಸಿದರು.
ರಸ್ತೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸತೀಶ್ ರೆಡ್ಡಿ, ಬಿಟಿಎಂ ಲೇಔಟ್ ನ ಶಾಸಕ ರಾಮಲಿಂಗಾ ರೆಡ್ಡಿ, ಮೇಯರ್ ಗೌತಮ್ ಕುಮಾರ್ ಸೇರಿದಂತೆ ಬಿಬಿಎಂಪಿಯ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications