ಅನಂತಕುಮಾರ್ ದಾರಿ ನಮಗೆಲ್ಲ ಆದರ್ಶನೀಯ: ಆರ್ ಅಶೋಕ್
ಬೆಂಗಳೂರು ನ 13: ದಿವಂಗತ ಅನಂತಕುಮಾರ್ ಅವರು ರಾಷ್ಟ್ರ ಹಾಗೂ ರಾಜ್ಯದ ಅಭಿವೃದ್ದಿಗೆ ಅನುಸಸರಿಸಿದ ದಾರಿ ನಮಗೆಲ್ಲ ಆದರ್ಶನೀಯ ಎಂದು ಕಂದಾಯ ಸಚಿವರಾದ ಆರ್ ಅಶೋಕ್ ಹೇಳಿದರು.
ದಿವಂಗತ ಅನಂತಕುಮಾರ್ 2 ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಲಾಲ್ಬಾಗ್ ಬಳಿಯ ಅನಂತ ಸ್ಮೃತಿ ವನದಿಂದ ಆಯೋಜಿಸಲಾಗಿದ್ದ ಅನಂತ ಸೃತಿ ನಡಿಗೆ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.

ಬೆಂಗಳೂರನ್ನು ಇನ್ನಷ್ಟು ಸುಂದರಗೊಳಿಸಲು ಹಲವಾರು ಕನಸುಗಳನ್ನು ಹೊತ್ತಿದ್ದ ಅನಂತಕುಮಾರ್ ನಡೆದ ದಾರಿ ನಮಗೆ ದಾರಿ ದೀಪವಾಗಿದೆ. ಅವರು ಹಾಕಿಕೊಟ್ಟ ಅಭಿವೃದ್ದಿಯ ಮಾರ್ಗದಲ್ಲಿ ನಡೆಯುವ ಮೂಲಕ ಬೆಂಗಳೂರನ್ನ ಇನ್ನಷ್ಟು ಸುಂದರಗೊಳಿಸೋಣ. ಅದಮ್ಯ ಚೇತನ ಸಂಸ್ಥೆಯ ಮೂಲಕ ಕೋಟ್ಯಾಂತರ ಜನರ ಹಸಿವನ್ನು ನೀಗಿಸುವ ಕಾರ್ಯವನ್ನು ಶ್ರೀಮತಿ ತೇಜಸ್ವಿನಿ ಅನಂತಕುಮಾರ್ ಅವರು ಮಾಡುತ್ತಿದ್ದಾರೆ. ದಿವಂಗತ ಅನಂತಕುಮಾರ್ ಅವರ ಆಶಯವನ್ನು ಸರಿಯಾದ ದಾರಿಯಲ್ಲಿ ನಡೆಸುವಲ್ಲಿ ಅವರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಅನಂತ ಸ್ಮೃತಿ ನಡಿಗೆ ಅಂಗವಾಗಿ ಪಂಜಿನ ಮೆರವಣಿಗೆಯಲ್ಲಿ ಸಾಗಿದ ಅಭಿಮಾನಿಗಳು ಪ್ರಮುಖರ ಮೂರ್ತಿಗಳಿಗೆ ಮಾಲಾರ್ಪಣೆ ಮಾಡುತ್ತಾ ಸಾಗಿದರು. ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಮುಖ್ಯಸ್ಥೆ ಡಾ ತೇಜಸ್ವಿನಿ ಅನಂತಕುಮಾರ್, ಶಾಸಕ ಉದಯ ಗರುಡಚಾರ್, ರವಿ ಸುಬ್ರಮಣ್ಯ ಹಾಗು ಪಾಲಿಕೆಯ ಮಾಜಿ ಸದಸ್ಯರುಗಳು ಭಾಗವಹಿಸಿದ್ದರು. ಲಾಲ್ ಬಾಗ್ ವೆಸ್ಟ್ ಗೇಟ್ ಎದುರು ಇರುವ ಅನಂತ ಸ್ಮೃತಿ ವನದಿಂದ ಪ್ರಾರಂಭಿಸಿ ಅದಮ್ಯಚೇತನದವರೆಗೆ ಪಂಜಿನ ಮೆರವಣಿಗೆಯನ್ನು ನಡೆಸಲಾಯಿತು.
Recommended Video

-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications