'ಬೆಂಗಳೂರು ಟ್ರಾಫಿಕ್ ಟೀಕಿಸಿದ UP ಸಂಸದರೇ ಭದ್ರತೆ ಹೆಚ್ಚಿಸಿಕೊಳ್ಳಿ: ಡಿಕೆಶಿ ಬೆದರಿಕೆ ಹಾಕ್ತಾರೆ
ಬೆಂಗಳೂರು, ಡಿಸೆಂಬರ್ 02: ರಾಜಧಾನಿ ಬೆಂಗಳೂರು ನಗರ ಕುರಿತು ಟೀಕೆ ಮಾಡಿದ ಉತ್ತರ ಪ್ರದೇಶದ ಸಂಸದರು ಭದ್ರತೆ ಹೆಚ್ಚು ಮಾಡಿಕೊಳ್ಳಬೇಕು. ಇಲ್ಲವಾದರೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ಬೆದರಿಕೆ ಹಾಕುತ್ತಾರೆ. ಈಗಾಗಲೇ ಉದ್ಯಮಿಗಳಿಗೆ ಬೆದರಿಕೆ ಹಾಕಲಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಹೇಳಿದರು.
ಉತ್ತರ ಪ್ರದೇಶದ ಸಂಸದ ರಾಜೀವ್ ರಾಯ್ ಅವರು, ಬೆಂಗಳೂರಿಗೆ ಬಂದಾಗ ಇಲ್ಲಿನ ವಾಹನ ದಟ್ಟಣೆಯಲ್ಲಿ ಸಿಲುಕಿದ್ದರು. ಅದೆಷ್ಟೇ ಬಾರಿ ಸಂಚಾರಿ ಪೊಲೀಸರಿಗೆ ಕರೆ ಮಾಡಿದರೂ ಯಾರು ಸಹಾಯಕ್ಕೆ ಬರಲಿಲ್ಲ. ಟ್ರಾಫಿಕ್ ಸ್ಥಳದಲ್ಲೂ ಒಬ್ಬರು ಇರಲಿಲ್ಲ. ಬೆಂಗಳೂರು ನಿರ್ವಹಣೆ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ಟ್ಯಾಗ್ ಮಾಡಿ ಬೇಸರ ಹೊರ ಹಾಕಿದ್ದರು. ಇದಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದರು.

ಈ ವಿಚಾರವನ್ನು ಮಂಗಳವಾರ ಆರ್.ಅಶೋಕ್ ಅವರು ತಮ್ಮ ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿದರು. ಬೆಂಗಳೂರಿನ ಬಗ್ಗೆ, ರಸ್ತೆ ಗುಂಡಿ ಅವಾಂತರ, ದಟ್ಟಣೆ ಬಗ್ಗೆ ಟೀಕಿಸಿದವರಿಗೆ ಈಗಾಗಲೇ ಬೆದರಿಕೆ ಹಾಕಲಾಗಿದೆ. ನೀವು ಸಹ ಭದ್ರತೆ ಹೆಚ್ಚಿಸಿಕೊಳ್ಳಬೇಕು ಎಂದು ಡಿಕೆ ಶಿವಕುಮಾರ್ ಅವರಿಗೆ ಟಾಂಗ್ ನೀಡಿದರು.
ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸಿಎಂ ನಾಟಿಕೋಳಿ ಸವಿದಿದ್ದಕ್ಕೆ ಆರ್.ಅಶೋಕ್ ಆಕ್ಷೇಪ
ಹನುಮ ಜಯಂತಿಯ ದಿನದಂದು ಎಲ್ಲೆಡೆ ಸಂಭ್ರಮದ ಆಚರಣೆ ನಡೆಯುತ್ತಿದ್ದರೆ, ಸದಾಶಿವನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಟಿಕೋಳಿಯ ಸಾರು ಸವಿದಿದ್ದಾರೆ. ಈ ಹಿಂದೆ ಅವರು ಮಾಂಸ ಸೇವಿಸಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಕೆಲವು ದಿನದ ಹಿಂದೆ ಸಿದ್ದರಾಮಯ್ಯ ಮನೆಯಲ್ಲಿ ಉಪಾಹಾರ ನಡೆದಿದ್ದರೆ, ಈಗ ಡಿ.ಕೆ.ಶಿವಕುಮಾರ್ ಮನೆಯಲ್ಲಿ ನಡೆದಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ವೇಣುಗೋಪಾಲ್ ಈ ಪ್ರಹಸನವನ್ನು ನಿರ್ದೇಶನ ಮಾಡಿದ್ದಾರೆ. ಸಿದ್ದರಾಮಯ್ಯನವರ ಈ ನಡೆಯಿಂದ ಎಲ್ಲ ಹನುಮ ಭಕ್ತರ ಮನಸ್ಸಿಗೆ ನೋವಾಗಿದೆ ಎಂದರು.
ನಾನು ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆಂದು ಡಿ.ಕೆ.ಶಿವಕುಮಾರ್ ಹೇಳಿದ್ದರು. ಆದರೆ ಈಗ ಅವರು ಉಪಾಹಾರ ಸವಿದಿದ್ದಾರೆ. ಈ ನಡುವೆ ಡಾ.ಜಿ.ಪರಮೇಶ್ವರ್ ಬಹಳ ನೋವಿನಿಂದ ಮಾತಾಡಿದ್ದಾರೆ. ರಾಜ್ಯದಲ್ಲಿ ಕಳೆದ 10 ತಿಂಗಳಲ್ಲಿ 580 ಕ್ಕೂ ಅಧಿಕ ಜನರು ರಸ್ತೆಗುಂಡಿಯಿಂದ ಸತ್ತಿದ್ದಾರೆ. ತಿಂಡಿ ತಿನ್ನುವ ಸಮಯವನ್ನು ರಸ್ತೆಗುಂಡಿ ಮುಚ್ಚಿಸಲು ವಿನಿಯೋಗಿಸಿದ್ದರೆ ಅಮಾಯಕ ಜೀವಗಳು ಉಳಿಯುತ್ತಿತ್ತು.
ರೈತರ ಸಮಸ್ಯೆಗಳೂ ಇನ್ನೂ ಜೀವಂತ
ರೈತರ ಕಬ್ಬಿನ ದರದ ಸಮಸ್ಯೆ ಬಗೆಹರಿದಿಲ್ಲ. ಮೆಕ್ಕೆಜೋಳ ಖರೀದಿ ಕೇಂದ್ರದ ಸಮಸ್ಯೆ ಬಗೆಹರಿದಿಲ್ಲ. ಈ ಬಗ್ಗೆ ಯಾವುದೇ ಉಪಾಹಾರ ಸಭೆ ನಡೆಸಿಲ್ಲ. ಇವರಿಬ್ಬರ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ನಡೆಸಬೇಕಿತ್ತೇ? ಅಂಗನವಾಡಿ ಕಾರ್ಯಕರ್ತರು, ರೈತರು, ಉದ್ಯಮಿಗಳು, ದಲಿತರ ವಿಶ್ವಾಸವನ್ನು ಸರ್ಕಾರ ಕಳೆದುಕೊಂಡಿದೆ ಎಂದರು.
ಬಿಗ್ಬಾಸ್ನಲ್ಲಿ ವೈಲ್ಡ್ ಕಾರ್ಡ್ನಂತೆ ಸತೀಶ್ ಜಾರಕಿಹೊಳಿ ಹಾಗೂ ಡಾ.ಜಿ.ಪರಮೇಶ್ವರ್ ದಲಿತ ಬ್ರ್ಯಾಂಡ್ನಡಿ ಸಿಎಂ ಆಗಲು ಕಾಯುತ್ತಿದ್ದಾರೆ. ಇಡೀ ಸರ್ಕಾರ ರಿಯಾಲಿಟಿ ಶೋನಂತೆ ಆಗಿದೆ. ಈ ರೀತಿ ಸಭೆ ನಡೆಸುವ ಬದಲು, ತುಂಗಭದ್ರಾ ಜಲಾಶಯದ ಗೇಟ್ಗಳನ್ನು ದುರಸ್ತಿ ಮಾಡಿಸಲು 12 ಕೋಟಿ ರೂ. ಬಿಲ್ ಪಾವತಿಸಿದ್ದರೆ ರೈತರಿಗೆ ನೀರಾವರಿ ಲಭ್ಯವಾಗುತ್ತಿತ್ತು. ಈ ಬಗ್ಗೆ ರೈತರ ಪರವಾಗಿ ಅಧಿವೇಶನದ ಸಮಯದಲ್ಲಿ ಹೋರಾಟ ಮಾಡಲಾಗುವುದು ಎಂದರು.
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮಾತ್ರ ಅಲ್ಲ, ಯಾವುದೇ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ. ಸಿಎಂ ಸಿದ್ದರಾಮಯ್ಯ ಕಳೆದ ಬೆಳಗಾವಿ ಅಧಿವೇಶನದಲ್ಲಿ ಕೊಟ್ಟ ಮಾತನ್ನು ಈಡೇರಿಸಲಾಗಿದೆಯೇ ಎಂದು ನಾವು ಪ್ರಶ್ನೆ ಮಾಡುತ್ತೇವೆ. ಧರ್ಮಸ್ಥಳದಲ್ಲಿ ಬುರುಡೆ ತಂದವನಿಗೆ ಬಿರಿಯಾನಿ ಕೊಟ್ಟಿದ್ದೇ ಕಾಂಗ್ರೆಸ್ ಸರ್ಕಾರ. ಆದರೆ ಅದನ್ನು ಸಾಬೀತುಪಡಿಸಲು ಇಂದಿಗೂ ಸಾಧ್ಯವಾಗಿಲ್ಲ ಎಂದರು.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications