ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್: ಆರ್. ಅಶೋಕನ್ ಹೊಸ ಆಡಳಿತಾಧಿಕಾರಿಯಾಗಿ ನೇಮಕ
ಬೆಂಗಳೂರು, ನವೆಂಬರ್ 20: ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರಿ ಬ್ಯಾಂಕಿನ ಹೊಸ ಆಡಳಿತಾಧಿಕಾರಿಯಾಗಿ ಆರ್. ಅಶೋಕನ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ಅವ್ಯವಹಾರದ ಆರೋಪ ಹೊಂದಿರುವ ಶ್ರೀ ಗುರುರಾಘವೇಂದ್ರ ಬ್ಯಾಂಕ್ಗೆ, ಬ್ಯಾಂಕಿಂಗ್ ತಜ್ಞರನ್ನು ನೇಮಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ನಿವೃತ್ತ ಜನರಲ್ ಮ್ಯಾನೇಜರ್ ಆರ್. ಅಶೋಕನ್ ಅವರನ್ನು ನೇಮಕ ಮಾಡಲಾಗಿದೆ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಸಾವಿರಾರು ಗ್ರಾಹಕರ ಠೇವಣಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಕೊಂಡ, ಭಾರೀ ಅವ್ಯವಹಾರ ನಡೆಸಿದ ಆರೋಪಕ್ಕೊಳಗಾಗಿರುವ ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಬೆಂಗಳೂರು ನಗರದಲ್ಲಿಯೇ 12 ಶಾಖೆಗಳನ್ನು ಹೊಂದಿದೆ.
Recommended Video
ನೂತನ ಆಡಳಿತಾಧಿಕಾರಿ ನೇಮಕಗೊಂಡ ಬಳಿಕ, ಹಿಂದಿನ ಆಡಳಿತಾಧಿಕಾರಿ ಅವಧಿಯಲ್ಲಿನ ಸಾಲದ ಖಾತೆಗಳ ಮುಕ್ತಾಯ ಬಗ್ಗೆ ವಿಚಾರಣೆ ನಡೆಯಬೇಕು. ಸಾಲ ವಸೂಲಾತಿ ಮಾಡಲಾಗಿದೆಯೇ ಪರಿಶೀಲಿಸಬೇಕು. ಜೊತೆಗೆ ಅನುತ್ಪಾದಕ ಸಾಲದ ಕುರಿತಾಗಿ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಬೇಕು ಎಂದು ನೂತನ ಆಡಳಿತಾಧಿಕಾರಿಗೆ ಹೈಕೋರ್ಟ್ ಸೂಚಿಸಿದೆ.