ಬೆಂಗಳೂರಿನ ಪ್ರೆಸ್ಕ್ಲಬ್ ಅಧ್ಯಕ್ಷರಾಗಿ ಶ್ರೀಧರ್ ಅವಿರೋಧ ಆಯ್ಕೆ
ಬೆಂಗಳೂರು, ಆಗಸ್ಟ್ 10: ಬೆಂಗಳೂರಿನ ಪ್ರೆಸ್ಕ್ಲಬ್ ನ ವಿವಿಧ ಹುದ್ದೆಗಳಿಗೆ ಭಾನುವಾರ ನಡೆದ 2015-16ನೆ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಧರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಶಿವಕುಮಾರ್ ಬೆಳ್ಳಿತಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಶಿವಪ್ರಕಾಶ್ ಹಾಗೂ ಕಾರ್ಯದರ್ಶಿಯಾಗಿ ಬಿ.ಎನ್.ರಮೇಶ್ ಆಯ್ಕೆಯಾಗಿದ್ದಾರೆ.
ಸದಸ್ಯರ ಸಾಮಾನ್ಯಸಭೆ ಹಾಗೂ ಆಡಳಿತಮಂಡಳಿಗೆ ಚುನಾವಣೆಗಳು ಕಬ್ಬನ್ ಪಾರ್ಕಿನಲ್ಲಿರುವ ಕ್ಲಬ್ಬಿನ ಆವರಣದಲ್ಲಿ ಭಾನುವಾರ ನಡೆಯಿತು. ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಖಚಾಂಜಿ ಹಾಗೂ ಆಡಳಿತ ಮಂಡಳಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳ ಹೆಸರುಗಳು ಕೆಳಕಂಡಂತಿದೆ.
ಖಜಾಂಚಿಯಾಗಿ ಮೋಹನ್ ಕುಮಾರ್ (ಅವಿರೋಧ) ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜಿ.ಮುಮ್ತಾಝ್ ಅಲೀಮ್, ಡಿ.ಆಲ್ಫ್ರೆಡ್ ಟೆನ್ನಿಸನ್, ಶ್ರೀಕಾಂತ್ ಹುಣಸವಾಡಿ, ಶರಣಬಸಪ್ಪ, ಜಿ.ಮೋಹನ್ ರಾವ್ ಸಾವಂತ್, ಜಿ.ಎಸ್. ನಾರಾಯಣರಾವ್(ಜೆಸುನಾ) ಆಯ್ಕೆಗೊಂಡಿದ್ದಾರೆ ಎಂದು ಪ್ರೆಸ್ಕ್ಲಬ್ ಪ್ರಕಟಿಸಿದೆ.

ಅಧ್ಯಕ್ಷ : ಶ್ರೀಧರ್ ಆರ್
ಉಪಾಧ್ಯಕ್ಷ : ಶಿವಕುಮಾರ್ ಬೆಳ್ಳಿತಟ್ಟೆ (161 ಮತಗಳು)
ಪ್ರಧಾನ ಕಾರ್ಯದರ್ಶಿ: ಎಸ್.ಶಿವಪ್ರಕಾಶ್ ಲಾಟರಿ ಮುಖಾಂತರ ಗೆಲುವು 214 ಮತಗಳು ಅಶೋಕ್ ಯಾದವ್ ಜೊತೆ.
ಕಾರ್ಯದರ್ಶಿ: ಬಿ.ಎನ್.ರಮೇಶ್ (251 ಮತಗಳು)
ಖಜಾಂಚಿ: ಮೋಹನ್ ಕುಮಾರ್ ಬಿ.ಎನ್ (ಅವಿರೋಧ ಆಯ್ಕೆ)
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜಿ.ಮುಮ್ತಾಝ್ ಅಲೀಮ್ (248 ಮತಗಳು), ಡಿ.ಆಲ್ಫ್ರೆಡ್ ಟೆನ್ನಿಸನ್ (222), ಶ್ರೀಕಾಂತ್ ಹುಣಸವಾಡಿ (221), ಶರಣಬಸಪ್ಪ (202), ಜಿ.ಮೋಹನ್ ರಾವ್ ಸಾವಂತ್ (195), ಜಿ.ಎಸ್. ನಾರಾಯಣರಾವ್ (ಜೆಸುನಾ) (185)
ರಿಟರ್ನಿಂಗ್ ಆಫೀಸರ್: ಬೃಂಗೇಶ್ ಎನ್.
(ಒನ್ ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications