ಶನಿವಾರವೂ ನಡೆಯಲಿದೆ ಕಾರ್ತಿಕ್ ಗೌಡ ವಿಚಾರಣೆ
ಬೆಂಗಳೂರು, ಸೆ. 13 : ಆರ್.ಟಿ.ನಗರ ಪೊಲೀಸರ ಮುಂದೆ ಹಾಜರಾಗಿದ್ದ ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡ ಅವರ ವಿಚಾರಣೆ ಶುಕ್ರವಾರ ರಾತ್ರಿ ಎಂಟು ಗಂಟೆಯ ತನಕ ನಡೆದಿದೆ. ಶನಿವಾರವೂ ವಿಚಾರಣೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಕಾರ್ತಿಕ್ ಗೌಡ ತನ್ನನ್ನು ಮದುವೆಯಾಗಿದ್ದು ದೈಹಿಕ ಸಂಬಂಧವನ್ನು ಬೆಳೆಸಿದ್ದ, ಈಗ ಮತ್ತೊಂದು ಯುವತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ತನಗೆ ವಂಚಿಸಿದ್ದಾರೆ ಎಂದು ನಟಿ ಮೈತ್ರಿಯಾಗೌಡ ಆರ್.ಟಿ.ನಗರ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಅತ್ಯಾಚಾರ, ವಂಚನೆ ಮತ್ತು ಅಪಹರಣ ಪ್ರಕರಣ ದಾಖಲಾಗಿತ್ತು.

ಆದರೆ, ಅಂದಿನಿಂದಲೂ ತಲೆಮರೆಸಿಕೊಂಡಿದ್ದ ಕಾರ್ತಿಕ್ ಗೌಡ ಶುಕ್ರವಾರ ಬೆಳಗ್ಗೆ ಆರು ಗಂಟೆಗೆ ಆರ್.ಟಿ.ನಗರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ತನಿಖಾಧಿಕಾರಿ ಎಸಿಪಿ ಓಂಕಾರಯ್ಯ ಅವರು ಕಾರ್ತಿಕ್ ಗೌಡ ಹಾಜರಾಗುತ್ತಿದ್ದಂತೆ ಮೊದಲು ಜಾಮೀನು ಪ್ರಕ್ರಿಯೆಯನ್ನು ಮುಗಿಸಿ, ವಿಚಾರಣೆ ಆರಂಭಿಸಿದರು. [ಕಾರ್ತಿಕ್ ಗೌಡ ಏಕಾಏಕಿ ಪ್ರತ್ಯಕ್ಷ, ಸೀದಾ ಆಸ್ಪತ್ರೆಗೆ]
ವೈದ್ಯಕೀಯ ಪರೀಕ್ಷೆ : ಬೆಳಗ್ಗೆ 7.30ರ ವರೆಗೆ ಕಾರ್ತಿಕ್ ನನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಪೊಲೀಸರು ವಿಚಾರಣೆ ನಡೆಸಿದರು. ನಂತರ 11 ಗಂಟೆ ವೇಳೆಗೆ ಕಾಡುಗೊಂಡನಹಳ್ಳಿಯ ಅಂಬೇಡ್ಕರ್ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಬಳಿಕ 12.30ರ ಸುಮಾರಿಗೆ ಮಡಿವಾಳದ ವಿಚಾರಣಾ ಕೇಂದ್ರಕ್ಕೆ ಕರೆದೊಯ್ಯಲಾಯಿತು. [ಘಾಟಿಯಲ್ಲಿ ಡಾಟಿ ಅವರ 'ಸೊಸೆ' ಮೈತ್ರಿಯಾ ಗೌಡ]
ಮಡಿವಾಳದ ಕೆಎಸ್ಆರ್ಪಿ ಅತಿಥಿ ಗೃಹದ ಪಕ್ಕದಲ್ಲಿರುವ ಎಫ್ಎಸ್ಎಲ್ ವಿಚಾರಣಾ ಕೇಂದ್ರಕ್ಕೆ ಕಾರ್ತಿಕ್ ಗೌಡ ಅವರನ್ನು ಕರೆದುಕೊಂಡ ಬಂದ ತನಿಖಾಧಿಕಾರಿಗಳ ತಂಡ ರಾತ್ರಿ 8 ಗಂಟೆಯವರೆಗೂ ವಿಚಾರಣೆ ನಡೆಸಿ ಹೇಳಿಕೆಯನ್ನು ಪಡೆದಿದ್ದಾರೆ. ತನಿಖಾಧಿಕಾರಿಗಳು ಕೇಳಿದ 25 ಕ್ಕೂ ಹೆಚ್ಚಿನ ಪ್ರಶ್ನೆಗಳಿಗೆ ವಕೀಲರ ಸಹಾಯದಿಂದ ಕಾರ್ತಿಕ್ ಉತ್ತರಿಸಿದ್ದಾರೆ ಎಂದು ತಿಳಿದುಬಂದಿದೆ.
ಮೈತ್ರಿಯಾ ಪರಿಚಯವಿತ್ತು : ವಿಚಾರಣೆ ವೇಳೆ ಮೈತ್ರಿಯಾ ಗೌಡ ಅವರು ನನಗೆ ಪರಿಚಯವಿತ್ತು. ಆದರೆ, ಅದರ ಆಚೆಗೆ ಯಾವ ಸಂಬಂಧವೂ ಇರಲಿಲ್ಲ. ಮೈತ್ರಿಯಾ ಗೌಡ ತಾನಾಗೇ ನನಗೆ ಕರೆ ಮಾಡುತ್ತಿದ್ದರು. ಮಂಗಳೂರಿಗೆ ನಾನೇನು ಕರೆದಿರಲಿಲ್ಲ. ಅವರು ಗೆಳೆಯರ ಜೊತೆ ಪಾರ್ಟಿಗೆ ಬಂದಿದ್ದು ನನಗೆ ತಿಳಿದಿತ್ತು ಎಂದು ಕಾರ್ತಿಕ್ ಗೌಡ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications