ನಾನು ಬಂದ್ ಹೋದ್ಮೇಲೆ ಗಲಾಟೆ ಆಗ್ತಿದೆ: ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 12: ನಿನ್ನೆ(ಡಿಸೆಂಬರ್ 12) ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಅವರು ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಅನೌಪಚಾರಿಕ ಮಾತುಕತೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮುಗಲಭೆ ಬಗ್ಗೆ ಹಾರಿಕೆ ಉತ್ತರ ನೀಡಿರುವ ವಿಡಿಯೊ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.
ಸಚಿವ ಸಂಪುಟ ಸಭೆಗೂ ಮುನ್ನಾ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿಗಳನ್ನು ಆರ್.ವಿ.ದೇಶಪಾಂಡೆ ಭೇಟಿ ಮಾಡಿದಾಗ ಸಿದ್ದರಾಮಯ್ಯ ಅವರು "ಏನ್ರಿ ನಿಮ್ಮ ಜಿಲ್ಲೆಯಲ್ಲಿ ಗಲಾಟೆ, ನಾನು ಬಂದು ಹೋದ್ಮೇಲೆ ಶುರುವಾಗಿದೆ' ಎಂದು ಅನೌಪಚಾರಿಕವಾಗಿ ಪ್ರಶ್ನಿಸಿದ್ದಾರೆ.
ಆಕಸ್ಮಿಕವಾಗಿ ಮುಖ್ಯಮಂತ್ರಿಗಳಿಂದ ತೂರಿಬಂದ ಪ್ರಶ್ನೆಗೆ ಸ್ವಲ್ಪ ಗಲಿಬಿಲಿಗೊಂಡಂತೆ ಕಂಡುಬಂದ ಆರ್.ವಿ.ದೇಶಪಾಂಡೆ, ಗಲಭೆಯ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡದೆ, ಅಥವಾ ಗಲಭೆ ನಿಯಂತ್ರಿಸಲು ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ವಿವರಿಸದೆ 'ಹಾಗೆನಿಲ್ಲ ಬಿಡಿ' ಎಂದು ಹಾರಿಕೆ ಉತ್ತರ ನೀಡಿದ್ದಾರೆ.

ನಂತರ ಸಿದ್ದರಾಮಯ್ಯ ಅವರು ಅದೇ ಧಾಟಿಯಲ್ಲಿ ಮಾತು ಮುಂದುವರೆಸಿ ಗಲಭೆಗೆ ರಾಜಕೀಯ ಕೋನ ನೀಡಿ, 'ನಾನು ಬಂದು ಹೋದ ಮೇಲೆ ಗಲಾಟೆ ಆಗ್ತಿದೆ, ನೀನು ಕಾರ್ಯಕ್ರಮ ಚೆನ್ನಾಗಿ ಮಾಡಿದೆಯಲ್ಲಾ ಅದಕ್ಕೆ ಹೊಟ್ಟೆ ಉರಿ ಅವ್ರಿಗೆ' ಎಂದಿದ್ದಾರೆ.
ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಗೆ ಬಂದಿದ್ದ ಮುಖ್ಯಮಂತ್ರಿಗಳು ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು, ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದೇಶಪಾಂಡೆ ಮುಖ್ಯಮಂತ್ರಿಗಳ ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿದ್ದರು. ಮುಖ್ಯಮಂತ್ರಿಗಳು ಜಿಲ್ಲೆಗೆ ಬಂದು ಹೋದ ಮೇಲೆ ಕಾಕತಾಳೀಯವೋ, ಉದ್ದೇಶಪೂರ್ವಕವೊ ಕೋಮು ಗಲಾಟೆ ಪ್ರಾರಂಭವಾಯಿತು.
ಆದರೆ ಸಿದ್ದರಾಮಯ್ಯ ಅವರು ದೇಶಪಾಂಡೆ ಅವರೊಂದಿಗೆ ಮಾತನಾಡಿದ ಮಾತಿನ ಭಾವ ಮಾತ್ರ ಬಿಜೆಪಿ ಪ್ರೇರಿತವಾಗಿ ಗಲಭೆ ಆಗುತ್ತಿದೆ ಎಂಬಂತೆ ಇತ್ತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications