ಬಿಬಿಎಂಪಿ ಮೇಯರ್, ಉಪ ಮೇಯರ್ ಪಟ್ಟಕ್ಕೆ ಪೈಪೋಟಿ
ಬೆಂಗಳೂರು, ಆ.21 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಪಟ್ಟಕ್ಕಾಗಿ ಪೈಪೋಟಿ ಆರಂಭವಾಗಿದೆ. ಮೇಯರ್ ಕಟ್ಟೆ ಸತ್ಯನಾರಾಯಣ ಹಾಗೂ ಉಪ ಮೇಯರ್ ಇಂದಿರಾ ಅವರ ಆಡಳಿತಾವಧಿ ಸೆ. 4ರಂದು ಕೊನೆಗೊಳ್ಳಲಿದೆ.
ಪುಸ್ತುತ ಆಯ್ಕೆಯಾಗಿರುವ ಕೌನ್ಸಿಲ್ನ ಕೊನೆಯ ಅವಧಿ ಇದಾಗಿದ್ದು, 2015ರ ಏಪ್ರಿಲ್ನಲ್ಲಿ ಮತ್ತೆ ಪಾಲಿಕೆಗೆ ಚುನಾವಣೆ ನಡೆಯಲಿದೆ. ಆರು ತಿಂಗಳ ಅವಧಿಯ ಮೇಯರ್ ಮತ್ತು ಉಪ ಮೇಯರ್ ಪಟ್ಟ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಪಟ್ಟದ ಮೇಲೆ ಕಣ್ಣಿಟ್ಟಿರುವ ಅಭ್ಯರ್ಥಿಗಳು ತಮ್ಮ ಪ್ರಯತ್ನ ಆರಂಭಿಸಿದ್ದಾರೆ.

ಬಿಜೆಪಿಯ ಹಿರಿಯ ಪಾಲಿಕೆ ಸದಸ್ಯರು ತಮಗೆ ಅವಕಾಶ ನೀಡುವಂತೆ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಬಳಿ ಮನವಿ ಮಾಡಿದ್ದರೆ, ಕಳೆದ ಅವಧಿಯಲ್ಲೇ ತಮಗೆ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದ ಮೂಡಲಪಾಳ್ಯ ವಾರ್ಡ್ನ ಸದಸ್ಯೆ ಶಾಂತಕುಮಾರಿ ಅವರು ಮೇಯರ್ ಹುದ್ದೆಗೆ ತಮ್ಮನ್ನು ಆಯ್ಕೆ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. [ಬಿಬಿಎಂಪಿ ಚುನಾವಣೆ ಮೇಲೆ ಆಮ್ ಆದ್ಮಿ ಕಣ್ಣು]
ಮೇಯರ್ ಪಟ್ಟದ ಆಕಾಂಕ್ಷಿಗಳು : ಮೂಡಲಪಾಳ್ಯ ವಾರ್ಡ್ನ ಶಾಂತಕುಮಾರಿ, ಡಾ.ರಾಜ್ಕುಮಾರ್ ವಾರ್ಡ್ನ ಗಂಗಭೈರಯ್ಯ, ಜೆ.ಪಿ.ಪಾರ್ಕ್ನ ಬಿ.ಆರ್. ನಂಜುಂಡಪ್ಪ, ಬನಶಂಕರಿ ದೇವಸ್ಥಾನದ ಎ.ಎಚ್. ಬಸವರಾಜು, ವಿಜಯನಗರದ ಎಚ್.ರವೀಂದ್ರ ಮತ್ತು ಪಟ್ಟಾಭಿರಾಮನಗರದ ಸಿ.ಕೆ. ರಾಮಮೂರ್ತಿ ಅವರ ಹೆಸರುಗಳು ಮೇಯರ್ ಪಟ್ಟಕ್ಕೆ ಕೇಳಿಬರುತ್ತಿವೆ.
ಬೇರೆ ವಲಯಗಳಿಗೆ ನೀಡಿ : ಮೇಯರ್ ಪಟ್ಟಕ್ಕೆ ಪ್ರತಿ ಬಾರಿಯು ದಕ್ಷಿಣ ವಲಯದ ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಆದ್ದರಿಂದ ಈ ಬಾರಿ ಬೇರೆ ವಲಯಗಳಿಗೆ ಆದ್ಯತೆ ನೀಡಬೇಕು ಎಂಬ ಮಾತು ಕೇಳಿಬರುತ್ತಿದೆ. ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಬಿಜೆಪಿ ನಾಯಕರು ಮೇಯರ್ ಆಯ್ಕೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಈ ಬಾರಿ ಮೇಯರ್ ಮತ್ತು ಉಪ ಮೇಯರ್ ಹುದ್ದೆಯನ್ನು ಸಾಮಾನ್ಯ ವರ್ಗಕ್ಕೆ ಮೀಸಲಾಗಿಟ್ಟಿರುವುದರಿಂದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಮೇಯರ್ ಪಟ್ಟ ಸಿಗದಿದ್ದರೂ ಉಪ ಮೇಯರ್ ಪಟ್ಟವಾದರೂ ದೊರಕಲಿ ಎಂದು ಆಕಾಂಕ್ಷಿಗಳು ಪ್ರಯತ್ನ ನಡೆಸುತ್ತಿದ್ದಾರೆ. ಅಂತಿಮವಾಗಿ ಮೇಯರ್ ಗೌನು ತೊಡುವವರು ಯಾರು ಎಂಬುದು ಕುತೂಹಲ ಮೂಡಿಸಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications