ಕುದುರೆ ಲತೀಫಾಗೆ ಉದ್ದೀಪನ ಮದ್ದು: ಜಾಕಿ ಹೋಕೋರ್ಟ್ ಮೊರೆ
ಬೆಂಗಳೂರು.ಜು.16: ರೇಸ್ ಕುದುರೆ ಕ್ವೀನ್ ಲತೀಫಾಗೆ ಉದ್ದೀಪನ ಮದ್ದು ನೀಡಿದ ಆರೋಪದಡಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ, ಕುದುರೆ ತರಬೇತುದಾರ ನೀಲ್ ದರಾಶ ಹಾಗೂ ಇತರ ನಾಲ್ವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಯನ್ನು ಹೈಕೋರ್ಟ್ ಅಂಗೀಕರಿಸಿದೆ.
ಕುದುರೆ ಕ್ವೀನ್ ಲತೀಫಾಗೆ ಉದ್ದೀಪನ ಮದ್ದು ನೀಡಲಾಗಿದೆ ಎಂದು ಅರ್ಜಿದಾರರ ವಿರುದ್ಧ ಸುಳ್ಳು ಆರೋಪ ಹೊರಿಸಲಾಗಿದ್ದು, ಈ ಪ್ರಕರಣದ ಕುರಿತಂತೆ ನಗರದ 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಮಧ್ಯಂತರ ತಡೆ ನೀಡುವಂತೆ ಅರ್ಜಿದಾರರ ಪರ ವಕೀಲರ ಮನವಿ ಮಾಡಿದರು.
ಮಧ್ಯಂತರ ಆದೇಶದ ಅಗತ್ಯವಿಲ್ಲ. ಅರ್ಜಿಯ ಅಂತಿಮ ವಿಚಾರಣೆ ನಡೆಸಿ ಆದೇಶ ನೀಡಲಾಗುವುದು ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿತು.ಬೆಂಗಳೂರು ಟರ್ಫ್ ಕ್ಲಬ್ನ(ಬಿಟಿಸಿ) ರೇಸ್ ಕುದುರೆ ಕ್ವೀನ್ ಲತೀಫಾಗೆ ಉದ್ದೀಪನ ಮದ್ದು ನೀಡಿದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು 61ನೇ ಸೆಷನ್ಸ್ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯಕ್ಕೆ 600ಕ್ಕೂ ಹೆಚ್ಚು ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದು, ಬಿಟಿಸಿ ಸಿಇಒ ಆಗಿದ್ದ ಎಸ್. ನಿರ್ಮಲ್ ಪ್ರಸಾದ್ ಎ1 ಆರೋಪಿಯಾಗಿದ್ದಾರೆ. ಬಿಟಿಸಿ ಮುಖ್ಯ ಸ್ಟೆಫಂಡರಿ ಸ್ಟೀವರ್ಡ್ ಪ್ರದ್ಯುಮ್ನ ಸಿಂಗ್, ಸ್ಟೀವರ್ಡ್ ಅರ್ಜುನ್ ಸಜನಾನಿ, ಕ್ವೀನ್ ಲತೀಫಾ ಕುದುರೆ ಮಾಲೀಕ ವಿವೇಕ್ ಉಭಯ್ಕರ್, ಕುದುರೆ ತರಬೇತುದಾರ ನೀಲಲ್ ದರಾಶ ಹಾಗೂ ಬಿಟಿಸಿ ಉಪ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಎಚ್.ಎಸ್. ಮಹೇಶ್ ಕ್ರಮವಾಗಿ 2ರಿಂದ 6 ಆರೋಪಿಗಳಾಗಿದ್ದಾರೆ.
2017ರ ನಾ.5 ರಂದು ನಡೆದಿದ್ದ ರೇಸ್ನಲ್ಲಿ 3 ವರ್ಷದ ಕ್ವೀನ್ ಲತೀಫಾಗೆ ಡ್ರಗ್ಸ್ ಪ್ರೋಕೇನ್ ಕೊಟ್ಟಿದ್ದರಿಂದ ಗೆಲುವು ಸಾಧಿಸಿತ್ತು. ಪರಿಣಾಮ ರೇಸ್ನಲ್ಲಿ 2ಮತ್ತು 3 ನೇ ಕುದುರೆಗಳ ಮೇಲೆ ಬಾಜಿ ಕಟ್ಟಿದ್ದ 73,053 ಜನರಿಗೆ 7.30 ಲಕ್ಷ ರೂ. ವಂಚನೆಯಾಗಿದೆ ಎಂದು ಆರೋಪಿಸಲಾಗಿತ್ತು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications